ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪ್ರದೇಶದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿ ಕೃಷಿ ಭೂಮಿಗೆ ಹಾನಿಯಾಗಿದೆ.
ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಹಾಗೂ ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆಗಳು ಬೆಂಕಿಗೆ ಆಹುತಿಯಾಗಿವೆ. ಲ್ಯಾನ್ಸಿ ಬಳಕ್ಕ ಅವರ ಗದ್ದೆಯಲ್ಲಿ ಸುಮಾರು 40 ಅಡಿ ಉದ್ದದ ಪಿವಿಸಿ ಪೈಪ್ ಸೇರಿದಂತೆ ವೀಳ್ಯ ಕೃಷಿಗೆ ಹಾನಿಯಾಗಿದೆ.
ಅವಘಡದ ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.





















