tamanvi
ಕೃಷಿ

60 ಕ್ವಿಂಟಾಲ್‌ ಭತ್ತವನ್ನು ತಿಂದು ತೇಗಿದ ಕಾಡಾನೆಗಳು: ರೈತರು ಕಂಗಾಲು

D_shiva_bhat
ಬೇಲೂರು ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಕಾಡಾನೆಗಳು ಬರೋಬ್ಬರಿ 60 ಕ್ವಿಂಟಾಲ್‌ ಭತ್ತವನ್ನು ತಿಂದು ಹಾಕಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ: ಬೇಲೂರು ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಕಾಡಾನೆಗಳು ಬರೋಬ್ಬರಿ 60 ಕ್ವಿಂಟಾಲ್‌ ಭತ್ತವನ್ನು ತಿಂದು ಹಾಕಿರುವ ಘಟನೆ ನಡೆದಿದೆ.

maithri

ಗ್ರಾಮದ ಮನು, ಹೂವೇಗೌಡ, ಹಾಲೇಗೌಡ, ಹಿರಿಗೌಡ, ಶರತ್ ಹಾಗೂ ರಮೇಶ್‌ ಸೇರಿದಂತೆ 8 ಜನ ರೈತರಿಗೆ ಸೇರಿದ ಭತ್ತ ಆನೆಗಳಿಗೆ ಆಹಾರವಾಗಿದೆ. ಭತ್ತ ಕಟಾವು ಮಾಡಿ ಟ್ರ್ಯಾಕ್ಟರ್ ಮೂಲಕ ಸಾಗಿಸಲು ಗೋಣಿಗಳಲ್ಲಿ ಭತ್ತ ತುಂಬಿಸಿಡಲಾಗಿತ್ತು. ತಡ ರಾತ್ರಿ ದಾಳಿ ಮಾಡಿದ ಕಾಡಾನೆಗಳು ಭತ್ತವನ್ನು ತಿಂದು ತೇಗಿವೆ.

ರೈತರಿಗೆ ಅಂದಾಜು 3 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ತಿಳಿದು ಬಂದಿದೆ. ಕಷ್ಟಪಟ್ಟು ಬೆಳೆದಿದ್ದ ಬೆಳೆ ಇನ್ನೇನು ಕೈಸೇರಬೇಕು ಅನ್ನೋವಷ್ಟರಲ್ಲಿ ಆನೆಗಳಿಗೆ ಆಹಾರವಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕಾಡಾನೆಗಳ ಹಾವಳಿಗೆ ಕಡಿವಾಣ ಹಾಕದ ಅರಣ್ಯ ಇಲಾಖೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಬೆಳೆ ನಾಶದಿಂದ ಆದ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು, ಸ್ಥಳೀಯರು ಒತ್ತಾಯಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ರಬ್ಬರ್ ಮೌಲ್ಯವರ್ಧನೆಗಾಗಿ ಸ್ಥಳೀಯ ಕೈಗಾರಿಕೆ | ರಾಜ್ಯ ರಬ್ಬರ್ ಬೆಳೆಗಾರರ ಸಮ್ಮೇಳನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ

ಬೆಳ್ತಂಗಡಿ: ರಬ್ಬರ್ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಅಧ್ಯಯನ ಮಾಡಿಕೊಂಡು ರಬ್ಬರ್ ಮಂಡಳಿ…