ಕೇಂದ್ರ ಸರ್ಕಾರ ರೈತರಿಗಾಗಿ 2019 ರಲ್ಲಿ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಹಲವಾರು ಜನರು ನೋಂದಾಯಿಸಿಕೊಂಡು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಕಂತಿನಲ್ಲಿ ತಲಾ 2000 ಹಣವನ್ನು ಅರ್ಹ ರೈತರ ಖಾತೆಗೆ ಜಮಾ ಮಾಡುತ್ತಿದೆ. ಈ ಯೋಜನೆಯಲ್ಲಿ ನೋಂದಾಯಿಸಿದ ರೈತರಿಗೆ ಸಿಗಲಿದೆ ಪ್ರತಿ ವರ್ಷ 6 ಸಾವಿರ ರೂ.
ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ಕಂತುಗಳು ಅರ್ಹ ರೈತರಿಗೆ ಜಮೆ ಆಗಿದೆ. ಈಗ 19ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ ರೈತರು.
ರೈತರಿಗೆ ಮೂರು ಕಂತುಗಳಿಂದ ಒಟ್ಟು 6000 ರೂ. ಪಡೆಯುತ್ತಾರೆ. ಸಣ್ಣ ಹಿಡುವಳಿ ಭೂಮಿ ಹೊಂದಿರುವ ಯಾವುದೇ ರೈತರು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಆದರೆ, ಆದಾಯ ತೆರಿಗೆ ಪಾವತಿಸುವ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
ನೀವು ಫಲಾನುಭವಿಗಳೇ ಎಂಬುದನ್ನು ಪರೀಕ್ಷಿಸಲು ಹೀಗೆ ಮಾಡಿ:
* Farmers corner e Beneficiary List ಕ್ಲಿಕ್ ಮಾಡಿ.
* ರಾಜ್ಯ, ಜಿಲ್ಲೆ, ತಾಲೂಕು, ಬ್ಲಾಕ್, ಹಳ್ಳಿಯನ್ನು ಆಯ್ಕೆ ಮಾಡಿ.
* ಆನಂತರ, Get Report ಟ್ಯಾಬ್ ಒತ್ತಿ.
ಇನ್ನು ಪಿಎಂ ಕಿಸಾನ್ ಯೋಜನೆಯ 18 ನೇ ಕಂತು ಈ ಹಿಂದೆ ಜಮೆ ಆಗಿದ್ದು, ಒಂದು ವೇಳೆ ಜಮೆ ಆಗದೇ ಇರುವವರಿಗೆ ಏನು ಕಾರಣ ಎಂಬುದರ ಕುರಿತ ಮಾಹಿತಿಗಾಗಿ ಇಲ್ಲಿ ನೋಡಿ:
ಪಿಎಂ ಕಿಸಾನ್ ಯೋಜನೆಯ (PM Kisan Samman Nidhi Yojana) 18ನೇ ಕಂತಿನ ಹಣ ಬಂದಿಲ್ಲದಿದ್ದರೆ ಅದಕ್ಕೆ ಕಾರಣಗಳಿವು:
* ಯೋಜನೆಗೆ ಇನ್ನೂ ನೊಂದಾವಣಿ ಆಗಿಲ್ಲದೇ ಇರಬಹುದು.
* ಇಕೆವೈಸಿ ಆಗಿಲ್ಲದೇ ಇರಬಹುದು, ಅಥವಾ ಸರಿಯಾಗಿ ಮಾಡಿಲ್ಲದೇ ಇರಬಹುದು.
* ಯೋಜನೆಯ ಅರ್ಹತಾ ಮಾನದಂಡ ಒದಗಿಸಲು ವಿಫಲರಾಗಿರಬಹುದು.
ಪಿಎಂ ಕಿಸಾನ್ ಅಧಿಕೃತ ಜಾಲತಾಣ https://pmkisan.gov.inಕ್ಕೆ ಭೇಟಿ ನೀಡಿ.