ಪುತ್ತೂರು: ಬೊಳುವಾರು ಪ್ರಭು ಚರುಂಬುರಿ ಮಾಲಕ, ದಾರಂದಕುಕ್ಕು ನಿವಾಸಿ ಸುಧಾಕರ್ ಪ್ರಭು (42 ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಚ್ಚಲು ಮನೆಯಲ್ಲಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಮನೆಯಲ್ಲಿ ನಾಳೆ ಪೂಜೆ ನಿಗದಿ ಮಾಡಲಾಗಿತ್ತು. ಇಂದು ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಎರಡು ವರ್ಷದ ಹಿಂದೆ ಇವರ ಸಹೋದರ ಪ್ರಭಾಕರ ಪ್ರಭು ಹೃದಯಾಘಾತದಿಂದ ಮೃತಪಟ್ಟಿದ್ದರು. ಬಳಿಕ ಸುಧಾಕರ ಪ್ರಭು ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಪುತ್ತೂರು ಮೆಸ್ಕಾಂ ಸಿಬ್ಬಂದಿಯಾಗಿರುವ ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.




















