Gl harusha
ಅಪರಾಧಪ್ರಚಲಿತ

ಪ್ರೊಟೀನ್ ಆಹಾರ ಸೇವಿಸಿ ಜೀವ ಕಳೆದುಕೊಂಡ!

ತೀವ್ರ ವ್ಯಾಯಾಮ ಮಾಡುತ್ತಿದ್ದು, ದೇಹವನ್ನು ಸದೃಢಗೊಳಿಸಲು ತರಬೇತುದಾರರ ಸಲಹೆಯ ಮೇರೆಗೆ ಉತ್ತೇಜಕ ಔಷಧಿಯನ್ನು ಚುಚ್ಚುಮದ್ದಿನ ಮೂಲಕ ತೆಗೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಜಿಮ್‌ನಲ್ಲಿ ಆರು ತಿಂಗಳಿನಿಂದ ತೀವ್ರ ವ್ಯಾಯಾಮ ಮಾಡುತ್ತಿದ್ದು, ದೇಹವನ್ನು ಸದೃಢಗೊಳಿಸಲು ತರಬೇತುದಾರರ ಸಲಹೆಯ ಮೇರೆಗೆ ಉತ್ತೇಜಕ ಔಷಧಿಯನ್ನು ಚುಚ್ಚುಮದ್ದಿನ ಮೂಲಕ ತೆಗೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ.

Pashupathi
akshaya college

ರಾಮ್‌ಕಿ (35 ವರ್ಷ) ಸಾವಿಗೀಡಾದ ಯುವಕ. ಕಳೆದ ಎರಡು ದಿನಗಳ ಹಿಂದೆ ರಾಮ್‌ಕಿ ಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಹಲವು ಪರೀಕ್ಷೆ ಮಾಡಿದಾಗ ರಾಮಕಿ ಮೂತ್ರಪಿಂಡಗಳು ಹಾನಿಗೊಳಗಾಗಿರುವುದು ಕಂಡು ಬಂದಿದೆ. ಈ ಕುರಿತು ವೈದ್ಯರು ಕುಟುಂಬದವರಿಗೆ ತಿಳಿಸಿದರು

ಆದರೆ ನಂತರ ಚಿಕಿತ್ಸೆ ಫಲಿಸದೇ ರಾಮ್‌ಕಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಚೆನ್ನಾಗಿಯೇ ಇದ್ದ ಮಗ ಇದ್ದಕ್ಕಿದ್ದಂತೆ ಹಠಾತ್ ಸಾವಿಗೀಡಾಗಿದ್ದನ್ನು ಕುಟುಂಬದವರು ಅರಗಿಸಿಕೊಳ್ಳಲಾಗದೇ ಶಾಕ್‌ಗೊಳಗಾದರು. ಘಟನೆಯ ನಂತರ ರಾಮ್‌ಕಿ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಇದರಲ್ಲಿ ತಪ್ಪು ಔಷಧಿಯನ್ನು ಶಿಫಾರಸು ಮಾಡಿದ ಜಿಮ್ ತರಬೇತುದಾರನ ವಿರುದ  ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಮಾಡಿ ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು.

ನಂತರ ಪೊಲೀಸರು ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ, ತನಿಖೆ ಮಾಡುತ್ತಿದ್ದಾರೆ. ರಾಮ್‌ಕಿ ಅವರಿಗೆ ಇಬ್ಬರು ಮಕ್ಕಳಿದ್ದು, ಹೆಂಡತಿಯ ಜೊತೆ ಭಿನ್ನಾಭಿಪ್ರಾಯದಿಂದ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದಾರೆ ಎಂದು ವರದಿ ಆಗಿದೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಸ್ಲಿಂ ಯುವಕನನ್ನು ಹೊರಹಾಕಿ ಎಂದ ಸಚಿವ ಗುಂಡೂರಾವ್! ಮಾಧ್ಯಮದೊಂದಿಗೆ ಮಾತನಾಡಿ ತನ್ನ ಅಳಲು ತೋಡಿಕೊಂಡ ಯುವಕ!

ಸುದ್ದಿಗೋಷ್ಠಿ ನಡೆಯುತ್ತಿರುವ ನಡುವೆಯೇ ತನ್ನ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಯುವಕನೋರ್ವನನ್ನು…

ಉಪ್ಪಿನಂಗಡಿ ಮುಖ್ಯರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮಂಜ ಬೈದ್ಯ ಹೆಸರು | ಶಾಸಕ ಅಶೋಕ್ ರೈ ಘೋಷಣೆ

ಬಿಲ್ಲವ ಸಮುದಾಯಕ್ಕೆ ಸೇರಿದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಹುತಾತ್ಮರಾದ ಉಪ್ಪಿನಂಗಡಿ…