Gl harusha
ಪ್ರಚಲಿತರಾಜ್ಯ ವಾರ್ತೆ

“ದಾಖಲೆ ಇಲ್ಲದಿದ್ದರೂ ಭಯ ಬೇಡ” | 4500 ಜಮೀನಿನ ಗಿಫ್ಟ್ ಬಗ್ಗೆ ಗ್ರಾಮಸ್ಥರಿಗೆ ಒಡೆಯರ್ ಅಭಯ!

ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನದ ಹೆಸರಿನಲ್ಲಿರುವ ಖಾಸಗಿ ಸ್ವತ್ತನ್ನು ಖಾತೆ ಮಾಡಿಕೊಡಲು ರಾಜ ಮಾತೆ ಪ್ರಮಾಣದಲ್ಲಿ ಒಡೆಯ‌ರ್ ಅವರು ಚಾಮರಾಜನಗರದ ಜಿಲ್ಲಾಧಿಕಾರಿಯವರೆಗೆ ಪತ್ರ ಬರೆದಿರುವುದು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರವಾಗಿ ಪ್ರಮೋದಾ ದೇವಿಯವರು ಸ್ಪಷ್ಟಿಕರಣ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನದ ಹೆಸರಿನಲ್ಲಿರುವ ಖಾಸಗಿ ಸ್ವತ್ತನ್ನು ಖಾತೆ ಮಾಡಿಕೊಡಲು ರಾಜ ಮಾತೆ ಪ್ರಮಾಣದಲ್ಲಿ ಒಡೆಯ‌ರ್ ಅವರು ಚಾಮರಾಜನಗರದ ಜಿಲ್ಲಾಧಿಕಾರಿಯವರೆಗೆ ಪತ್ರ ಬರೆದಿರುವುದು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರವಾಗಿ ಪ್ರಮೋದಾ ದೇವಿಯವರು ಸ್ಪಷ್ಟಿಕರಣ ನೀಡಿದ್ದಾರೆ.

Pashupathi
akshaya college

ಚಾಮರಾಜನಗರದಲ್ಲಿ (Chamarajanagara) 4,500 ಎಕರೆ ಜಮೀನು ಅರಮನೆಗೆ ಸೇರಿದ್ದು ಎಂಬುದಕ್ಕೆ ದಾಖಲೆ ಇದೆ. ಆದ್ರೆ ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇಲ್ಲ. ಅರಮನೆ ಹೆಸರಿಗೇ ಜಮೀನು ಬಂದರೂ ನಾವು ಅದನ್ನು ಅವರಿಗೇ ಬಿಟ್ಟು ಕೊಡುವ ವ್ಯವಸ್ಥೆ ಮಾಡ್ತಿವಿ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಹೇಳಿದ್ದಾರೆ.

ಅರಮನೆಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜಯಚಾಮರಾಜೇಂದ್ರ ಒಡೆಯರ್ ಅವರು ನೀಡಿರುವ ದಾನದ ಬಗ್ಗೆ ಗೊತ್ತಿಲ್ಲ. ದಾನಪತ್ರ ಹಾಗೂ ದಾಖಲೆಗಳಿದ್ದರೆ ರೈತರು ತಂದುಕೊಡಲಿ. ಮಹಾರಾಜರು ಜಮೀನು ನೀಡಿದ್ದರೆ, ಅದನ್ನು ಕಿತ್ತುಕೊಳ್ಳುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಆ ಕಾಲದಲ್ಲಿ ಮಹಾರಾಜರು ಜಮೀನು ಗಿಫ್ಟ್ ಕೊಟ್ಟಿದ್ದಾರೆ. ಖಂಡಿತವಾಗಿಯೂ ಅವರನ್ನು ಒಕ್ಕಲೆಬಿಸುವ ಕೆಲಸ ಮಾಡಲ್ಲ. ಗ್ರಾಮಸ್ಥರು ತಮ್ಮ ಬಳಿ ಇರುವ ಗಿಫ್ಟ್ ದಾಖಲೆಯನ್ನು ಅರಮನೆ ಕಚೇರಿಗೆ ತಲುಪಿಸಲಿ. ಈ ವಿಚಾರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ಮಾತನಾಡಲು ಪ್ರಯತ್ನ ಪಟ್ಟೆ. ದೂರವಾಣಿ ಕರೆ ಮಾಡಿದ್ದೆ ಸ್ವೀಕರಿಸಿಲ್ಲ. ಮೇಸೇಜ್‌ಗೂ ರೀಪ್ಲೆ ಮಾಡಿಲ್ಲ. ಗ್ರಾಮಸ್ಥರು ಯಾವುದೇ ಸಂದರ್ಭದಲ್ಲಾದರೂ ಅರಮನೆ ಕಚೇರಿಗೆ ಗಿಫ್ಟ್ ಕೊಟ್ಟಿರುವ ದಾಖಲೆ ಇದ್ದರೆ ಖಂಡಿತ ಕೊಡಿ. ಗ್ರಾಮಸ್ಥರ ಬಳಿ ಗಿಫ್ಟ್ ಕೊಟ್ಟ ದಾಖಲೆ ಇಲ್ಲದಿದ್ದರೂ ಅವರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಅಭಯ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಸ್ಲಿಂ ಯುವಕನನ್ನು ಹೊರಹಾಕಿ ಎಂದ ಸಚಿವ ಗುಂಡೂರಾವ್! ಮಾಧ್ಯಮದೊಂದಿಗೆ ಮಾತನಾಡಿ ತನ್ನ ಅಳಲು ತೋಡಿಕೊಂಡ ಯುವಕ!

ಸುದ್ದಿಗೋಷ್ಠಿ ನಡೆಯುತ್ತಿರುವ ನಡುವೆಯೇ ತನ್ನ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಯುವಕನೋರ್ವನನ್ನು…

ಉಪ್ಪಿನಂಗಡಿ ಮುಖ್ಯರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮಂಜ ಬೈದ್ಯ ಹೆಸರು | ಶಾಸಕ ಅಶೋಕ್ ರೈ ಘೋಷಣೆ

ಬಿಲ್ಲವ ಸಮುದಾಯಕ್ಕೆ ಸೇರಿದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಹುತಾತ್ಮರಾದ ಉಪ್ಪಿನಂಗಡಿ…

ದ್ವೇಷ ಭಾಷಣ, ಪ್ರಚೋದನಾಕಾರಿ ಪೋಸ್ಟ್‌ ವಿರುದ್ಧ ಕಠಿಣ ಕಾನೂನು | ಡಿಸಿ, ಸಿಇಓಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ…