tamanvi
ಪ್ರಚಲಿತ

ಗ್ರಾ.ಪಂ.ಗಳಲ್ಲಿ ತುಳು ನಿರ್ಬಂಧಿಸಿ ಆದೇಶ | ಸರ್ಕಾರದ ವಿರುದ್ಧ ಕೋಟ ಕಿಡಿ

ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದಂತೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಲಾಗಿದ್ದು,

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದಂತೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಲಾಗಿದ್ದು, ತುಳು ಭಾಷಿಕರು ಅಸಮಾಧಾನ ಹೊರ ಹಾಕಿದ್ದಾರೆ.

ಮೇಲ್ಕಂಡ ವಿಷಯಕ, ಸಂಬಂಧಿಸಿದಂತೆ, ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಇಲಾಖೆಯ ಅಧಿಕಾರಿಯವರು ಮತ್ತು ಜನಪ್ರತಿನಿಧಿಯವರು ಚರ್ಚಿಸುವಾಗ ತುಳು ಭಾಷೆ ಬಳಕ ಮಾಡದಂತೆ ಮತ್ತು ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ನಿರ್ದೇಶನ ನೀಡಲು ಉಲ್ಲೇಖ (1)ರಂತೆ ಮನವಿ ಸಲ್ಲಿಸಿರುತ್ತಾರೆ. ಸದ್ದಿ_ಉಲ್ಲೇಖಿತ ಮನವಿಯನ್ನು ಈ ಪತ್ರದೊಂದಿಗೆ ಲಗತ್ತಿಸುತ್ತಾ, ಮನವಿಯ ಕುರಿತು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಿದೆ.

ಕೋಟ ಶ್ರೀನಿವಾಸ್ ಪೂಜಾರಿ ಕಿಡಿ

ವಿಧಾನಸಭೆಯಲ್ಲಿ ಅಧ್ಯಕ್ಷರು ಸೇರಿದಂತೆ ಶಾಸಕರೆಲ್ಲ ತುಳುವಿನಲ್ಲಿ ಸಂವಹನ ಮಾಡಬಹುದಾದರೆ ಗ್ರಾಮ ಪಂಚಾಯತಿಗಳಲ್ಲಿ ತುಳು ಮಾತನಾಡಬಾರದೆಂದರೆ ಏನರ್ಥ? ಈ ಸರ್ಕಾರಕ್ಕೆ ಏನಾಗಿದೆ ಎಂಬುದೇ ಅರ್ಥ ಆಗುತ್ತಿಲ್ಲ. ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯ ಭಾಷೆಯಲ್ಲೇ ವ್ಯವಹರಿಸಬೇಕೇ ಹೊರತು ಇದೇ ಭಾಷೆ ಮಾತಾಡಬೇಕು ಎಂದು ಹೇರಿಕೆ ಮಾಡುವುದು ಸರಿಯಲ್ಲ ಎಂದು ಕೋಟ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…