tamanvi
ಅಪಘಾತಪ್ರಚಲಿತ

ಬಡವರಿಗೆ ನೆರವಾಗಲು ವೇಷ ಧರಿಸುತ್ತಿದ್ದ ಅಣ್ಣಪ್ಪ ವಿಧಿಯಾಟಕ್ಕೆ ಬಲಿ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬನ್ನೂರಿನ ಮೇಲ್ಮಜಲು ನಿವಾಸಿ ಅಣ್ಣಪ್ಪ ಪುತ್ತೂರು (26 ವ.) ಇಂದು ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮೊದಲಿಗೆ ಪುತ್ತೂರಿನ ಸೇವಾ ಸಂಸ್ಥೆ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಮೂಲಕ ವಿಶೇಷ ವೇಷ ಧರಿಸಿ ಹಲವಾರು ಬಡ ಕುಟುಂಬದ ಮಕ್ಕಳಿಗೆ ಮತ್ತು ಆರೋಗ್ಯದ ಸಮಸ್ಯೆ ಇರುವಂತಹ ವ್ಯಕ್ತಿಗಳಿಗೆ ತನ್ನ ಕೈಲಾದಷ್ಟು ಜಾತ್ರೆ ಅಥವಾ ಇನ್ನಿತರ ಕಾರ್ಯಕ್ರಗಳಲ್ಲಿ ವಿವಿಧ ರೀತಿಯ ವೇಷ ಹಾಕಿ ಅದರಲ್ಲಿ ಬಂದಂತಹ ಹಣವನ್ನು ಅವರ ಕೈಗೆ ಒಪ್ಪಿಸುತ್ತಿದ್ದರು.

ತನ್ನದೇ ಆದ ಕಲಾಸಿರಿ ಗೊಂಬೆ ಬಳಗ (ರಿ) ಪುತ್ತೂರು ಇದನ್ನು ಪ್ರಾರಂಭಿಸಿದರು. ವರ್ಷದಲ್ಲಿ ಒಂದು ದಿನ ಗೊಂಬೆ ವೇಷ ಧರಿಸಿ ಅದರಲ್ಲಿ ಬಂದಂತಹ ಹಣವನ್ನು ಬಡಕುಟುಂಬಗಳಿಗೆ ಹಾಗೂ ಅನಾರೋಗ್ಯದಿಂದ ಇರುವ ಕುಟುಂಬಗಳಿಗೆ ಧನಸಹಾಯದ ಮೂಲಕ ಸಹಾಯ ಮಾಡಿದ್ದಾರೆ.

ಮೃತರು ಸಹೋದರಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…