ಮಂಗಳೂರು: ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಆಚರಣೆ ಪ್ರಯುಕ್ತ ಮಂದಾರ್ತಿ ಸಮೀಪದ ಬೂದಾಡಿಯಲ್ಲಿ ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಹೊಸ ಮನೆಯ ಹಸ್ತಾಂತರ ಜುಲೈ 6ರಂದು ಜರಗಿತು.
ಕಾರ್ಯಕ್ರಮ ಉದ್ಘಾಟಿಸಿ, ಮನೆ ಹಸ್ತಾಂತರ ಮಾಡಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪ್ರಾಮಾಣಿಕತೆ ಹಾಗೂ ಕಠಿಣ ಪರಿಶ್ರಮದಿಂದ ಬದುಕು ಸಾಗಿಸುವವರು ವಿಶ್ವಕರ್ಮ ಸಮುದಾಯದವರು. ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಇದೀಗ ಕಡುಬಡವರ ರಕ್ಷಣೆಯ ಕಾರ್ಯ ಮಾಡಿರುವುದು ಶ್ಲಾಘನೀಯ. ಇದು ಸಮಾಜಕ್ಕೆ ಮಾದರಿ ಕಾರ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯ ಮಾತನಾಡಿ, ಗಣೇಶ್ ಆಚಾರ್ಯ ದಂಪತಿಗಳ ಮನೆ ಪೂರ್ತಿ ಬೀಳುವ ಸ್ಥಿತಿಯಲ್ಲಿದ್ದ ಸಂದರ್ಭ ನಮ್ಮ ಸಂಸ್ಥೆ ಸಹಾಯ ಹಸ್ತ ಚಾಚಿದೆ. ಒಬ್ಬ ವ್ಯಕ್ತಿಗೆ ಸಹಾಯ ಮಾಡಿದರೆ ಜಗತ್ತು ಬದಲಾಗದೇ ಇರಬಹುದು. ಆದರೆ ಆ ವ್ಯಕ್ತಿಯ ಜಗತ್ತೇ ಬದಲಾಗುತ್ತದೆ. ಈ ದೃಷ್ಟಿಕೋನದಿಂದ ಸೊಸೈಟಿಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಮುತುವರ್ಜಿಯಿಂದ ರೂ.760000 ರೂ. ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಾಣ ಮಾಡಿ, ಇದೀಗ ಹಸ್ತಾಂತರ ಮಾಡಲಾಗಿದೆ ಎಂದರು.
ಕುAದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಸ್ವಂತ ಸೂರನ್ನು ನಿರ್ಮಿಸಲಾಗದವರನ್ನು ಗುರುತಿಸಿ ಅವರಿಗೆ ಮನೆ ನಿರ್ಮಿಸಿ ಕೊಟ್ಟಿರುವುದು ದೇವರು ಮೆಚ್ಚುವ ಕೆಲಸ. ಲಾಭದಲ್ಲಿ ನಿರಾಶ್ರಿತರಿಗೆ ಸಹಾಯ ಹಸ್ತವಲ್ಲದೆ ಮನೆ ನಿರ್ಮಾಣದಂತಹ ಕೆಲಸ ಕೈಗೆತ್ತಿರುವುದು ಶ್ಲಾಘನೀಯವೆಂದರು.
ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ, ರಥಶಿಲ್ಪಿ ರಾಜಗೋಪಾಲ ಆಚಾರ್ಯ, ಬಾರ್ಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಆಚಾರ್ಯ, ಬಿಲ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ಬಾÊ ವಂಡಾರು ಶುಭ ಹಾರೈಸಿದ್ದರು.
ಗಣ್ಯರು ಗಿಡ ನೆಡುವ ಮೂಲಕ ಸಾಂಕೇತಿಕವಾಗಿ ವನಮಹೋತ್ಸವ ಆಚರಣೆ ಕಾರ್ಯಕ್ರಮವನ್ನು ನೆರವೇರಿಸಿದರು. ಬಳಿಕ ಸಸಿಗಳನ್ನು ವಿತರಣೆ ಮಾಡಿದರು. ಮನೆ ನಿರ್ಮಿಸಿದ ಮಧುಕರ ಆಚಾರ್ಯ ಅವರನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಹೊಸ ಮನೆ ನಿರ್ಮಾಣ ಮಾಡಿ ಕೊಟ್ಟ ಸಂಸ್ಥೆಯ ಆಡಳಿತ ಮಂಡಳಿಗೆ ಲಲಿತಾ ಆಚಾರ್ಯ ಕೃತಜ್ಞತೆ ಸಲ್ಲಿಸಿದರು.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ನಿವಾಸಕ್ಕೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ಶ್ಲಾಘಿಸಿದರು. ನಿರ್ದೇಶಕ ಕೆ. ಯಜ್ಞೇಶ್ವರ ಆಚಾರ್ಯ, ವಿ. ಜಯ ಆಚಾರ್, ಕೆ. ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್. ಪತ್ತಾರ್, ರೋಹಿಣಿ ಎಂ.ಪಿ, ಜ್ಯೋತಿ ಎಂ.ವಿ., ರಮೇಶ್ ರಾವ್ ಯು.ಕೆ. ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್. ಉಪಸ್ಥಿತರಿದ್ದರು.
ಮನೆಯ ಫಲಾನುಭವಿಗಳಾದ ಗಣೇಶ್ ಆಚಾರ್ಯ ಮತ್ತು ಲಲಿತಾ ದಂಪತಿಗಳಿಗೆ ಮನೆಯನ್ನು ಹಸ್ತಾಂತರ ಮಾಡಲಾಯಿತು.
ನಿರ್ದೇಶಕರಾದ ವೈ.ವಿ. ವಿಶ್ವಜ್ಞಮೂರ್ತಿ ಪ್ರಾರ್ಥಿಸಿದರು. ಸಂಸ್ಥೆಯ ಉಪಾಧ್ಯಕ್ಷ ಎ. ಆನಂದ ಆಚಾರ್ಯ ಸ್ವಾಗತಿಸಿದರು, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಶಾಖಾವ್ಯವಸ್ಥಾಪಕ ಶ್ರೀಕಾಂತ್ ಕಾರ್ಯಕ್ರಮ ನಿರೂಪಿಸಿ, ಪ್ರಭಾರ ಶಾಖಾ ವ್ಯವಸ್ಥಾಪಕಿ ಪೂರ್ಣಿಮಾ ಎಸ್. ಆಚಾರ್ಯ ವಂದಿಸಿದರು.
ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರ | ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಪ್ರಯುಕ್ತ ಯೋಜನೆ | ದುಡಿಮೆ, ಪ್ರಾಮಾಣಿಕತೆಗೆ ಇನ್ನೊಂದು ಹೆಸರೇ ವಿಶ್ವಕರ್ಮ ಸಮುದಾಯ: ಸಂಸದ ಕೋಟ
What's your reaction?
- 994c
- 994cc
- 9ai technology
- 9ajjavara
- 9alwas
- 9apology
- 8artificial intelegence
- 8avg
- 8bihar minister
- 8bjp
- 8bjp leader
- 8bjp national president
- 8bt ranjan
- 7co-operative
- 7coastal
- 7crime
- 7crime news
- 7cyclothon
- 7darmasthala
- 7death news
- 6dust bin
- 6education
- 6fraud
- 6gl
- 6gods own country
- 6gold
- 6google for education
- 5independence
- 5jewel
- 5jewellers
- 5jnana vikasa
- 5karnataka state
- 5kerala village
- 5kukke - kollur temple
- 4lokayuktha
- 4lokayuktha raid
- 4manipal
- 4minister krishna bairegowda
- 4mla ashok rai
- 4mohan alwa
- 4mudubidre
- 4nidana news
- 3nirvathu mukku
- 3nitin nabin
- 3police
- 3ptr tahasildar
- 3puttur
- 3puttur news
- 3puttur tahasildar
- 2republic
- 2revenue
- 2revenue department
- 2revenue minister
- 2school
- 2senior citizen
- 2silver
- 1society
- 1sowmya
- 1students
- 1tahasildar
- 1tahasildar absconded
- 1teachers
- 1tour
- 0trending
- 0udupi
- 0wastage
Related Posts
ಪುತ್ತೂರು ದೇವಳದಲ್ಲಿ ಮತ್ತೆ ಸಕ್ರೀಯರಾದ ಪಿ.ಜಿ. ಜಗನ್ನಿವಾಸ್ ರಾವ್: ಆಕ್ರೋಶ ಹೊರಹಾಕಿದ ಸಂತ್ರಸ್ತೆಯ ತಾಯಿ!! ಪುತ್ತೂರು ಜಾತ್ರಾ ಸಂದರ್ಭ ಧ್ವಜಸ್ತಂಭದ ಮುಂದೆ ಕುಳಿತು ನ್ಯಾಯಕ್ಕೆ ಆಗ್ರಹಿಸುವ ಎಚ್ಚರಿಕೆ!!
ಪುತ್ತೂರು: ತನ್ನ ಮಗಳಿಗೆ ನ್ಯಾಯ ನೀಡಲು ಪ್ರಯತ್ನಿಸದ ಪಿ.ಜಿ. ಜಗನ್ನಿವಾಸ್ ರಾವ್ ಅವರು ಮಗನನ್ನೇ…
ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆಯಿಂದ ದರ ಏರಿಕೆ ಅನಿವಾರ್ಯ!! ಹಲವು ಬೇಡಿಕೆ ಮುಂದಿಟ್ಟ ಪುತ್ತೂರು ತಾಲೂಕು ಆಟೋ ಚಾಲಕ ಮಾಲಕರ ಸಂಯುಕ್ತ ಹೋರಾಟ ಸಮಿತಿ
ಪುತ್ತೂರು: ಎಲ್ಪಿಜಿ ಅಟೋ ಗ್ಯಾಸ್ ಬೆಲೆ ಏರಿಕೆಯಿಂದ ರಿಕ್ಷಾ ಚಾಲಕರಿಗೆ ತೊಂದರೆಯಾಗಿದ್ದು,…
ಬಕೆಟಿಗೆ ಬಿದ್ದು ಮಗು ಮೃತ್ಯು: ಮಾತ್ರೆ ನುಂಗಿ, ಕೈ ಕುಯ್ದು ನೇಣಿಗೆ ಕೊರಳೊಡ್ಡಿದ ತಾಯಿ!!
ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್ನಲ್ಲಿ ಮುಳುಗಿ ಮಗು ಮೃತಪಟ್ಟಿದ್ದು,…
ಮಗುವಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು??
ಮಗುವಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ಅನುಮಾನಾಸ್ಪದವಾಗಿ ತಾಯಿ ಹೆಣವಾಗಿ ಪತ್ತೆಯಾದ ಘಟನೆ…
ಬೆಳ್ತಂಗಡಿ: ನವವಿವಾಹಿತ ಆತ್ಮಹತ್ಯೆ – ತನಿಖೆ ಚುರುಕು!!
ಕಳೆದ ತಿಂಗಳಷ್ಟೇ ಹಸೆಮಣೆ ಏರಿದ್ದ ಯುವ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ…
ಆಟೋ ರಿಕ್ಷಾಕ್ಕೆ ತಟ್ಟಿದ ಗ್ಯಾಸ್ ಅಭಾವ!! ಸಂಪ್ಯದಲ್ಲಿ ಗ್ಯಾಸಿಗಾಗಿ ಆಟೋ ಸರತಿ ಸಾಲು!
ಪುತ್ತೂರು: ಗ್ಯಾಸ್ ಕೊರತೆ ಇದೀಗ ರಿಕ್ಷಾಕ್ಕೂ ತಟ್ಟಿದೆ. ಗ್ಯಾಸ್ ತುಂಬಿಸಿಕೊಳ್ಳಲು ಸಂಪ್ಯ…
ಪುತ್ತೂರು ಶಾಪಿಂಗ್ ಹಬ್ಬದ ವಿಜೇತರ ಡೀಟೈಲ್ಸ್ ಇಲ್ಲಿದೆ…
ಪುತ್ತೂರು: ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಮ್ಮಿಕೊಂಡಿದ್ದ ಪುತ್ತೂರು ಶಾಪಿಂಗ್…
ಗಂಟಾಲ್’ಕಟ್ಟೆ: ಟಿಪ್ಪರ್ –ಬೈಕ್ ಭೀಕರ ಅಪಘಾತದಲ್ಲಿ ತಾಯಿ – ಮಗ ಮೃತ್ಯು!!
ಮೂಡುಬಿದಿರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಅತ್ತಾವರ: 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾರ್ಥಕ್ ಆತ್ಮಹತ್ಯೆ!!
ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ ಜಿಗಿದು…
ಸಂತೆಯಲ್ಲಿ ಮತಾಂತರಕ್ಕೆ ಯತ್ನ ಆರೋಪ: ಸಾರ್ವಜನಿಕರಿಂದ ಥಳಿತ!!
ಪುಸ್ತಕಗಳನ್ನು ಹಂಚುವ ಮೂಲಕ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಇಬ್ಬರು…























