ಮಂಗಳೂರು: ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಆಚರಣೆ ಪ್ರಯುಕ್ತ ಮಂದಾರ್ತಿ ಸಮೀಪದ ಬೂದಾಡಿಯಲ್ಲಿ ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಹೊಸ ಮನೆಯ ಹಸ್ತಾಂತರ ಜುಲೈ 6ರಂದು ಜರಗಿತು.
ಕಾರ್ಯಕ್ರಮ ಉದ್ಘಾಟಿಸಿ, ಮನೆ ಹಸ್ತಾಂತರ ಮಾಡಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪ್ರಾಮಾಣಿಕತೆ ಹಾಗೂ ಕಠಿಣ ಪರಿಶ್ರಮದಿಂದ ಬದುಕು ಸಾಗಿಸುವವರು ವಿಶ್ವಕರ್ಮ ಸಮುದಾಯದವರು. ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಇದೀಗ ಕಡುಬಡವರ ರಕ್ಷಣೆಯ ಕಾರ್ಯ ಮಾಡಿರುವುದು ಶ್ಲಾಘನೀಯ. ಇದು ಸಮಾಜಕ್ಕೆ ಮಾದರಿ ಕಾರ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯ ಮಾತನಾಡಿ, ಗಣೇಶ್ ಆಚಾರ್ಯ ದಂಪತಿಗಳ ಮನೆ ಪೂರ್ತಿ ಬೀಳುವ ಸ್ಥಿತಿಯಲ್ಲಿದ್ದ ಸಂದರ್ಭ ನಮ್ಮ ಸಂಸ್ಥೆ ಸಹಾಯ ಹಸ್ತ ಚಾಚಿದೆ. ಒಬ್ಬ ವ್ಯಕ್ತಿಗೆ ಸಹಾಯ ಮಾಡಿದರೆ ಜಗತ್ತು ಬದಲಾಗದೇ ಇರಬಹುದು. ಆದರೆ ಆ ವ್ಯಕ್ತಿಯ ಜಗತ್ತೇ ಬದಲಾಗುತ್ತದೆ. ಈ ದೃಷ್ಟಿಕೋನದಿಂದ ಸೊಸೈಟಿಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಮುತುವರ್ಜಿಯಿಂದ ರೂ.760000 ರೂ. ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಾಣ ಮಾಡಿ, ಇದೀಗ ಹಸ್ತಾಂತರ ಮಾಡಲಾಗಿದೆ ಎಂದರು.
ಕುAದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಸ್ವಂತ ಸೂರನ್ನು ನಿರ್ಮಿಸಲಾಗದವರನ್ನು ಗುರುತಿಸಿ ಅವರಿಗೆ ಮನೆ ನಿರ್ಮಿಸಿ ಕೊಟ್ಟಿರುವುದು ದೇವರು ಮೆಚ್ಚುವ ಕೆಲಸ. ಲಾಭದಲ್ಲಿ ನಿರಾಶ್ರಿತರಿಗೆ ಸಹಾಯ ಹಸ್ತವಲ್ಲದೆ ಮನೆ ನಿರ್ಮಾಣದಂತಹ ಕೆಲಸ ಕೈಗೆತ್ತಿರುವುದು ಶ್ಲಾಘನೀಯವೆಂದರು.
ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ, ರಥಶಿಲ್ಪಿ ರಾಜಗೋಪಾಲ ಆಚಾರ್ಯ, ಬಾರ್ಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಆಚಾರ್ಯ, ಬಿಲ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ಬಾÊ ವಂಡಾರು ಶುಭ ಹಾರೈಸಿದ್ದರು.
ಗಣ್ಯರು ಗಿಡ ನೆಡುವ ಮೂಲಕ ಸಾಂಕೇತಿಕವಾಗಿ ವನಮಹೋತ್ಸವ ಆಚರಣೆ ಕಾರ್ಯಕ್ರಮವನ್ನು ನೆರವೇರಿಸಿದರು. ಬಳಿಕ ಸಸಿಗಳನ್ನು ವಿತರಣೆ ಮಾಡಿದರು. ಮನೆ ನಿರ್ಮಿಸಿದ ಮಧುಕರ ಆಚಾರ್ಯ ಅವರನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಹೊಸ ಮನೆ ನಿರ್ಮಾಣ ಮಾಡಿ ಕೊಟ್ಟ ಸಂಸ್ಥೆಯ ಆಡಳಿತ ಮಂಡಳಿಗೆ ಲಲಿತಾ ಆಚಾರ್ಯ ಕೃತಜ್ಞತೆ ಸಲ್ಲಿಸಿದರು.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ನಿವಾಸಕ್ಕೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ಶ್ಲಾಘಿಸಿದರು. ನಿರ್ದೇಶಕ ಕೆ. ಯಜ್ಞೇಶ್ವರ ಆಚಾರ್ಯ, ವಿ. ಜಯ ಆಚಾರ್, ಕೆ. ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್. ಪತ್ತಾರ್, ರೋಹಿಣಿ ಎಂ.ಪಿ, ಜ್ಯೋತಿ ಎಂ.ವಿ., ರಮೇಶ್ ರಾವ್ ಯು.ಕೆ. ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್. ಉಪಸ್ಥಿತರಿದ್ದರು.
ಮನೆಯ ಫಲಾನುಭವಿಗಳಾದ ಗಣೇಶ್ ಆಚಾರ್ಯ ಮತ್ತು ಲಲಿತಾ ದಂಪತಿಗಳಿಗೆ ಮನೆಯನ್ನು ಹಸ್ತಾಂತರ ಮಾಡಲಾಯಿತು.
ನಿರ್ದೇಶಕರಾದ ವೈ.ವಿ. ವಿಶ್ವಜ್ಞಮೂರ್ತಿ ಪ್ರಾರ್ಥಿಸಿದರು. ಸಂಸ್ಥೆಯ ಉಪಾಧ್ಯಕ್ಷ ಎ. ಆನಂದ ಆಚಾರ್ಯ ಸ್ವಾಗತಿಸಿದರು, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಶಾಖಾವ್ಯವಸ್ಥಾಪಕ ಶ್ರೀಕಾಂತ್ ಕಾರ್ಯಕ್ರಮ ನಿರೂಪಿಸಿ, ಪ್ರಭಾರ ಶಾಖಾ ವ್ಯವಸ್ಥಾಪಕಿ ಪೂರ್ಣಿಮಾ ಎಸ್. ಆಚಾರ್ಯ ವಂದಿಸಿದರು.
ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರ | ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಪ್ರಯುಕ್ತ ಯೋಜನೆ | ದುಡಿಮೆ, ಪ್ರಾಮಾಣಿಕತೆಗೆ ಇನ್ನೊಂದು ಹೆಸರೇ ವಿಶ್ವಕರ್ಮ ಸಮುದಾಯ: ಸಂಸದ ಕೋಟ
What's your reaction?
- 994c
- 994cc
- 9ai technology
- 8alwas
- 8apology
- 8artificial intelegence
- 8avg
- 8bihar minister
- 8bjp
- 8bjp leader
- 7bjp national president
- 7bt ranjan
- 7co-operative
- 7coastal
- 7crime
- 7crime news
- 7darmasthala
- 6death news
- 6dust bin
- 6education
- 6fraud
- 6gl
- 6gods own country
- 6gold
- 5google for education
- 5independence
- 5jewel
- 5jewellers
- 5jnana vikasa
- 5karnataka state
- 5kerala village
- 4lokayuktha
- 4lokayuktha raid
- 4manipal
- 4minister krishna bairegowda
- 4mla ashok rai
- 4mohan alwa
- 4mudubidre
- 4nidana news
- 3nirvathu mukku
- 3nitin nabin
- 3police
- 3ptr tahasildar
- 3puttur
- 3puttur news
- 3puttur tahasildar
- 2republic
- 2revenue
- 2revenue department
- 2revenue minister
- 2school
- 2senior citizen
- 2silver
- 1society
- 1sowmya
- 1students
- 1tahasildar
- 1tahasildar absconded
- 1teachers
- 1tour
- 0trending
- 0udupi
- 0wastage
Related Posts
ಎಸ್ಎಸ್ಎಲ್ಸಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 35 ಸಾವಿರ ರೂಪಾಯಿವರೆಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು: ಪರಿಶಿಷ್ಟ ಜಾತಿಯ (SC) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನೀಡುವ…
ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಮನವಿ
ಉಡುಪಿ -ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್…
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ | ಅಧ್ಯಕ್ಷರಾಗಿ ಸುಧಾಕರ್ ಸುವರ್ಣ, ಪ್ರ.ಕಾರ್ಯದರ್ಶಿಯಾಗಿ ಸಿ.ಶೇ.ಕಜೆಮಾರ್ ಪ್ರಮಾಣ ಸ್ವೀಕಾರ
ಪುತ್ತೂರು: ಮಾಧ್ಯಮಗಳು ಸಂವಿಧಾನದ ಆಶಯ ರಕ್ಷಣೆಗೆ ಒತ್ತು ನೀಡಬೇಕು. ಸಂವಿಧಾನ ಉಲ್ಲಂಘಿಸುವ…
ಜ. 11: ಅಂತರ್ ಜಿಲ್ಲಾ ಮಟ್ಟದ ವಿಶ್ವಕರ್ಮ ಕ್ರೀಡೋತ್ಸವ
ಪುತ್ತೂರು: ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಜ. 11ರಂದು ಬೆಳಿಗ್ಗೆ 9ರಿಂದ…
‘ವಾತ್ಸಲ್ಯ ಮನೆ’ ಬದುಕಿನ ನೆಮ್ಮದಿಗೆ ಅರಮನೆ
ವಾತ್ಸಲ್ಯ ಮನೆ ಬದುಕಿನ ನೆಮ್ಮದಿಗೆ ಅರಮನೆಯಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ…
ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಹಳೆ ನ್ಯಾಯಾಲಯದ ಕಟ್ಟಡಕ್ಕೆ ಸ್ಥಳಾಂತರಿಸಿ | ಸಹಾಯಕ ಆಯುಕ್ತರಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು
ಪುತ್ತೂರು: ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಇಲಾಖೆಗಳಿಗೆ ಹಳೆ ನ್ಯಾಯಾಲಯ…
ಫೆ. 11ಕ್ಕೆ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದಿಂದ ಮಂಗಳೂರು ಪುರಭವನದಲ್ಲಿ ರಾಜ್ಯ ಸಮಾವೇಶ
ಪುತ್ತೂರು: ಕರ್ನಾಟಕ ರಾಜ್ಯ ಕನ್ನಡ ಉಳಿಸಿ, ಬೆಳೆಸಿ ಅಭಿಯಾನ ಇದರ ವತಿಯಿಂದ ಕನ್ನಡ ಮನಸ್ಸುಗಳ…
ಪುತ್ತೂರಿನಲ್ಲಿ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ!
ಪುತ್ತೂರು: ಎರಡು ವಾಹನಗಳಲ್ಲಿ ಸಾಗಿಸುತ್ತಿದ್ದ 106 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿರುವ…
ಮುರಳಿಕೃಷ್ಣ ಹಸಂತಡ್ಕ ಅವರಿಗೆ ಮಾತೃವಿಯೋಗ!
ಪುತ್ತೂರು: ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರ ತಾಯಿ ಗುರುವಾರ ನಿಧನರಾಗಿದ್ದಾರೆ. ಸುಮತಿ…
ಪುತ್ತೂರಿಗೆ ಆಗಮಿಸಿದ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆಫ್ಟಿನೆಂಟ್ ಸಂಜಯ್ ಕುಮಾರ್ | ಐತಿಹಾಸಿಕ ಕಾರ್ಯಕ್ರಮವಾಗಿ ಬದಲಾದ ಅಂಬಿಕಾ ರಜತ ಮಹೋತ್ಸವ | ಪುತ್ತೂರಿಗರ ಅದ್ಧೂರಿ ಮೆರವಣಿಗೆ, ಸಾರ್ವಜನಿಕ ಸನ್ಮಾನಗಳ ಮಹಾಪೂರಕ್ಕೆ ಸೋತ ಧೀರ ಯೋಧ
ಪುತ್ತೂರು: ಭಾರತೀಯ ಸೇನೆಯಲ್ಲಿ ನಮ್ಮ ಜತೆಗಿರುವ ಸೈನಿಕರೇ ನಮ್ಮ ಧೈರ್ಯ. ಎಲ್ಲರೂ ಏಕಮನಸ್ಸಿನಿಂದ…


















