ಮಂಗಳೂರು: ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಆಚರಣೆ ಪ್ರಯುಕ್ತ ಮಂದಾರ್ತಿ ಸಮೀಪದ ಬೂದಾಡಿಯಲ್ಲಿ ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಹೊಸ ಮನೆಯ ಹಸ್ತಾಂತರ ಜುಲೈ 6ರಂದು ಜರಗಿತು.
ಕಾರ್ಯಕ್ರಮ ಉದ್ಘಾಟಿಸಿ, ಮನೆ ಹಸ್ತಾಂತರ ಮಾಡಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪ್ರಾಮಾಣಿಕತೆ ಹಾಗೂ ಕಠಿಣ ಪರಿಶ್ರಮದಿಂದ ಬದುಕು ಸಾಗಿಸುವವರು ವಿಶ್ವಕರ್ಮ ಸಮುದಾಯದವರು. ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಇದೀಗ ಕಡುಬಡವರ ರಕ್ಷಣೆಯ ಕಾರ್ಯ ಮಾಡಿರುವುದು ಶ್ಲಾಘನೀಯ. ಇದು ಸಮಾಜಕ್ಕೆ ಮಾದರಿ ಕಾರ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯ ಮಾತನಾಡಿ, ಗಣೇಶ್ ಆಚಾರ್ಯ ದಂಪತಿಗಳ ಮನೆ ಪೂರ್ತಿ ಬೀಳುವ ಸ್ಥಿತಿಯಲ್ಲಿದ್ದ ಸಂದರ್ಭ ನಮ್ಮ ಸಂಸ್ಥೆ ಸಹಾಯ ಹಸ್ತ ಚಾಚಿದೆ. ಒಬ್ಬ ವ್ಯಕ್ತಿಗೆ ಸಹಾಯ ಮಾಡಿದರೆ ಜಗತ್ತು ಬದಲಾಗದೇ ಇರಬಹುದು. ಆದರೆ ಆ ವ್ಯಕ್ತಿಯ ಜಗತ್ತೇ ಬದಲಾಗುತ್ತದೆ. ಈ ದೃಷ್ಟಿಕೋನದಿಂದ ಸೊಸೈಟಿಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಮುತುವರ್ಜಿಯಿಂದ ರೂ.760000 ರೂ. ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಾಣ ಮಾಡಿ, ಇದೀಗ ಹಸ್ತಾಂತರ ಮಾಡಲಾಗಿದೆ ಎಂದರು.
ಕುAದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಸ್ವಂತ ಸೂರನ್ನು ನಿರ್ಮಿಸಲಾಗದವರನ್ನು ಗುರುತಿಸಿ ಅವರಿಗೆ ಮನೆ ನಿರ್ಮಿಸಿ ಕೊಟ್ಟಿರುವುದು ದೇವರು ಮೆಚ್ಚುವ ಕೆಲಸ. ಲಾಭದಲ್ಲಿ ನಿರಾಶ್ರಿತರಿಗೆ ಸಹಾಯ ಹಸ್ತವಲ್ಲದೆ ಮನೆ ನಿರ್ಮಾಣದಂತಹ ಕೆಲಸ ಕೈಗೆತ್ತಿರುವುದು ಶ್ಲಾಘನೀಯವೆಂದರು.
ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ, ರಥಶಿಲ್ಪಿ ರಾಜಗೋಪಾಲ ಆಚಾರ್ಯ, ಬಾರ್ಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಆಚಾರ್ಯ, ಬಿಲ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ಬಾÊ ವಂಡಾರು ಶುಭ ಹಾರೈಸಿದ್ದರು.
ಗಣ್ಯರು ಗಿಡ ನೆಡುವ ಮೂಲಕ ಸಾಂಕೇತಿಕವಾಗಿ ವನಮಹೋತ್ಸವ ಆಚರಣೆ ಕಾರ್ಯಕ್ರಮವನ್ನು ನೆರವೇರಿಸಿದರು. ಬಳಿಕ ಸಸಿಗಳನ್ನು ವಿತರಣೆ ಮಾಡಿದರು. ಮನೆ ನಿರ್ಮಿಸಿದ ಮಧುಕರ ಆಚಾರ್ಯ ಅವರನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಹೊಸ ಮನೆ ನಿರ್ಮಾಣ ಮಾಡಿ ಕೊಟ್ಟ ಸಂಸ್ಥೆಯ ಆಡಳಿತ ಮಂಡಳಿಗೆ ಲಲಿತಾ ಆಚಾರ್ಯ ಕೃತಜ್ಞತೆ ಸಲ್ಲಿಸಿದರು.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ನಿವಾಸಕ್ಕೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ಶ್ಲಾಘಿಸಿದರು. ನಿರ್ದೇಶಕ ಕೆ. ಯಜ್ಞೇಶ್ವರ ಆಚಾರ್ಯ, ವಿ. ಜಯ ಆಚಾರ್, ಕೆ. ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್. ಪತ್ತಾರ್, ರೋಹಿಣಿ ಎಂ.ಪಿ, ಜ್ಯೋತಿ ಎಂ.ವಿ., ರಮೇಶ್ ರಾವ್ ಯು.ಕೆ. ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್. ಉಪಸ್ಥಿತರಿದ್ದರು.
ಮನೆಯ ಫಲಾನುಭವಿಗಳಾದ ಗಣೇಶ್ ಆಚಾರ್ಯ ಮತ್ತು ಲಲಿತಾ ದಂಪತಿಗಳಿಗೆ ಮನೆಯನ್ನು ಹಸ್ತಾಂತರ ಮಾಡಲಾಯಿತು.
ನಿರ್ದೇಶಕರಾದ ವೈ.ವಿ. ವಿಶ್ವಜ್ಞಮೂರ್ತಿ ಪ್ರಾರ್ಥಿಸಿದರು. ಸಂಸ್ಥೆಯ ಉಪಾಧ್ಯಕ್ಷ ಎ. ಆನಂದ ಆಚಾರ್ಯ ಸ್ವಾಗತಿಸಿದರು, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಶಾಖಾವ್ಯವಸ್ಥಾಪಕ ಶ್ರೀಕಾಂತ್ ಕಾರ್ಯಕ್ರಮ ನಿರೂಪಿಸಿ, ಪ್ರಭಾರ ಶಾಖಾ ವ್ಯವಸ್ಥಾಪಕಿ ಪೂರ್ಣಿಮಾ ಎಸ್. ಆಚಾರ್ಯ ವಂದಿಸಿದರು.
ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರ | ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಪ್ರಯುಕ್ತ ಯೋಜನೆ | ದುಡಿಮೆ, ಪ್ರಾಮಾಣಿಕತೆಗೆ ಇನ್ನೊಂದು ಹೆಸರೇ ವಿಶ್ವಕರ್ಮ ಸಮುದಾಯ: ಸಂಸದ ಕೋಟ
What's your reaction?
- 894c
- 794cc
- 7ai technology
- 7alwas
- 7apology
- 7artificial intelegence
- 7avg
- 7bihar minister
- 6bjp
- 6bjp leader
- 6bjp national president
- 6bt ranjan
- 6co-operative
- 6coastal
- 6crime news
- 5darmasthala
- 5death news
- 5dust bin
- 5education
- 5gl
- 5gods own country
- 5google for education
- 4independence
- 4jewellers
- 4jnana vikasa
- 4karnataka state
- 4kerala village
- 4lokayuktha
- 4lokayuktha raid
- 4manipal
- 3minister krishna bairegowda
- 3mla ashok rai
- 3mohan alwa
- 3mudubidre
- 3nidana news
- 3nirvathu mukku
- 3nitin nabin
- 2ptr tahasildar
- 2puttur
- 2puttur news
- 2puttur tahasildar
- 2revenue
- 2revenue department
- 2revenue minister
- 1school
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0udupi
- 0wastage
Related Posts
ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
ಉಜಿರೆ: ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏಪ್ರಿಲ್ 29ರಂದು…
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ಅವರಿಗೆ ನುಡಿನಮನ | ಪ್ರೊ. ಎನ್ ವಜ್ರ ಕುಮಾರ್ ಮತ್ತು ಪ್ರೊ.ಎಸ್. ಪ್ರಭಾಕರ್ ನನ್ನೆರಡು ಕಣ್ಣುಗಳಿದ್ದಂತೆ: ಡಾ. ಡಿ. ವೀರೇಂದ್ರ ಹೆಗ್ಗಡೆ
ಉಜಿರೆ: ಪ್ರೊ.ಎಸ್. ಪ್ರಭಾಕರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಪೂಜ್ಯ ತಂದೆಯವರ ಮೇಲೆ…
ಡಿ. 28: ಜಿ.ಎಲ್. ಮಾಲ್ ಉತ್ಸವದಲ್ಲಿ ಚಿತ್ರಕಲಾ ಸ್ಪರ್ಧೆ | ರೋಟರಿ ಕ್ಲಬ್ ಪುತ್ತೂರು ಯುವ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕ, ಜಿಎಲ್ ವನ್ ಮಾಲ್ ಆಯೋಜನೆ | ಹಲವು ವಿಭಾಗಗಳಲ್ಲಿ ನಡೆಯುವ ಸ್ಪರ್ಧೆಯಲ್ಲಿ ನೀವೂ ಸ್ಪರ್ಧಿಸಬಹುದು!
ಪುತ್ತೂರು: ವಾರಾಂತ್ಯದಲ್ಲಿ ನಡೆಯುತ್ತಿರುವ ಜಿಎಲ್ ಮಾಲ್ ಉತ್ಸವದಲ್ಲಿ ಈ ಬಾರಿ ಚಿತ್ರಕಲಾ…
ದಿನಕೂಲಿ ಕಾರ್ಮಿಕನಿಗೆ 314 ಕೋಟಿ ತೆರಿಗೆ ನೋಟಿಸ್ ಕೊಟ್ಟ ಇಲಾಖೆ .!!
ಬಾಡಿಗೆ ಮನೆಯಲ್ಲಿ ವಾಸಿಸುವ ದಿನಗೂಲಿ ಕೆಲಸಗಾರ ಚಂದ್ರಶೇಖರ್ ಪಂಡಿತ್ ರಾವ್ ಕೊಹಾಡ್, ಆದಾಯ…
ಮಂಜಲ್ಪಡ್ಪು ಅಂಗನವಾಡಿ ಕೇಂದ್ರಕ್ಕೆ ರೂಫ್ ಶೀಟ್ ಅಳವಡಿಕೆಯ ಕೊಡುಗೆ | ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ಶಾಶ್ವತ ಯೋಜನೆ
ಮಂಜಲ್ಪಡ್ಪು ಅಂಗನವಾಡಿ ಕೇಂದ್ರಕ್ಕೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ವತಿಯಿಂದ 2024-25ನೇ…
ತೇಜಸ್ ವಿಮಾನ ದುರಂತ: ಪೈಲಟ್ ಸಾವು!
ಯುಎಇ ದೇಶದ ದುಬೈನಲ್ಲಿ ನಡೆಯುತ್ತಿದ್ದ ಏರ್ ಶೋ ವೇಳೆ ಪತನವಾಗಿದ್ದ HAL ನಿರ್ಮಿತ ತೇಜಸ್ …
ಗುರುವಾರ ರಾಜ್ಯದ ಎಲ್ಲಾ ಕೋರ್ಟ್’ಗಳಿಗೂ ರಜೆ!
ರಾಜ್ಯದಲ್ಲಿ ಹೋಲಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ನ್ಯಾಯಾಲಯ ಕಲಾಪಕ್ಕೆ ರಜೆ ಘೋಷಿಸಲಾಗಿದೆ.
ಪುತ್ತೂರಿಗೆ ಆಗಮಿಸಿದ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆಫ್ಟಿನೆಂಟ್ ಸಂಜಯ್ ಕುಮಾರ್ | ಐತಿಹಾಸಿಕ ಕಾರ್ಯಕ್ರಮವಾಗಿ ಬದಲಾದ ಅಂಬಿಕಾ ರಜತ ಮಹೋತ್ಸವ | ಪುತ್ತೂರಿಗರ ಅದ್ಧೂರಿ ಮೆರವಣಿಗೆ, ಸಾರ್ವಜನಿಕ ಸನ್ಮಾನಗಳ ಮಹಾಪೂರಕ್ಕೆ ಸೋತ ಧೀರ ಯೋಧ
ಪುತ್ತೂರು: ಭಾರತೀಯ ಸೇನೆಯಲ್ಲಿ ನಮ್ಮ ಜತೆಗಿರುವ ಸೈನಿಕರೇ ನಮ್ಮ ಧೈರ್ಯ. ಎಲ್ಲರೂ ಏಕಮನಸ್ಸಿನಿಂದ…
ವಿಜಯವಾಣಿ ಪತ್ರಿಕೆಯ ಹಿರಿಯ ಉಪ ಸಂಪಾದಕ ಗಿರೀಶ್ ಕೆ.ಎಲ್ ಹೃದಯಾಘಾತದಿಂದ ನಿಧನ!!
ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್…
ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ | ಮತದಾನದ ಹಕ್ಕನ್ನು ಚಲಾಯಿಸುವುದು ನಮ್ಮ ಕರ್ತವ್ಯ: ಲಕ್ಷ್ಮೀಕಾಂತ ರೈ
ಪುತ್ತೂರು: ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ನಮ್ಮ ಭಾರತದಲ್ಲಿ ಮತ್ತೊಂದು…

























