ಮಂಗಳೂರು: ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಆಚರಣೆ ಪ್ರಯುಕ್ತ ಮಂದಾರ್ತಿ ಸಮೀಪದ ಬೂದಾಡಿಯಲ್ಲಿ ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಹೊಸ ಮನೆಯ ಹಸ್ತಾಂತರ ಜುಲೈ 6ರಂದು ಜರಗಿತು.
ಕಾರ್ಯಕ್ರಮ ಉದ್ಘಾಟಿಸಿ, ಮನೆ ಹಸ್ತಾಂತರ ಮಾಡಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪ್ರಾಮಾಣಿಕತೆ ಹಾಗೂ ಕಠಿಣ ಪರಿಶ್ರಮದಿಂದ ಬದುಕು ಸಾಗಿಸುವವರು ವಿಶ್ವಕರ್ಮ ಸಮುದಾಯದವರು. ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಇದೀಗ ಕಡುಬಡವರ ರಕ್ಷಣೆಯ ಕಾರ್ಯ ಮಾಡಿರುವುದು ಶ್ಲಾಘನೀಯ. ಇದು ಸಮಾಜಕ್ಕೆ ಮಾದರಿ ಕಾರ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯ ಮಾತನಾಡಿ, ಗಣೇಶ್ ಆಚಾರ್ಯ ದಂಪತಿಗಳ ಮನೆ ಪೂರ್ತಿ ಬೀಳುವ ಸ್ಥಿತಿಯಲ್ಲಿದ್ದ ಸಂದರ್ಭ ನಮ್ಮ ಸಂಸ್ಥೆ ಸಹಾಯ ಹಸ್ತ ಚಾಚಿದೆ. ಒಬ್ಬ ವ್ಯಕ್ತಿಗೆ ಸಹಾಯ ಮಾಡಿದರೆ ಜಗತ್ತು ಬದಲಾಗದೇ ಇರಬಹುದು. ಆದರೆ ಆ ವ್ಯಕ್ತಿಯ ಜಗತ್ತೇ ಬದಲಾಗುತ್ತದೆ. ಈ ದೃಷ್ಟಿಕೋನದಿಂದ ಸೊಸೈಟಿಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಮುತುವರ್ಜಿಯಿಂದ ರೂ.760000 ರೂ. ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಾಣ ಮಾಡಿ, ಇದೀಗ ಹಸ್ತಾಂತರ ಮಾಡಲಾಗಿದೆ ಎಂದರು.
ಕುAದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಸ್ವಂತ ಸೂರನ್ನು ನಿರ್ಮಿಸಲಾಗದವರನ್ನು ಗುರುತಿಸಿ ಅವರಿಗೆ ಮನೆ ನಿರ್ಮಿಸಿ ಕೊಟ್ಟಿರುವುದು ದೇವರು ಮೆಚ್ಚುವ ಕೆಲಸ. ಲಾಭದಲ್ಲಿ ನಿರಾಶ್ರಿತರಿಗೆ ಸಹಾಯ ಹಸ್ತವಲ್ಲದೆ ಮನೆ ನಿರ್ಮಾಣದಂತಹ ಕೆಲಸ ಕೈಗೆತ್ತಿರುವುದು ಶ್ಲಾಘನೀಯವೆಂದರು.
ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ, ರಥಶಿಲ್ಪಿ ರಾಜಗೋಪಾಲ ಆಚಾರ್ಯ, ಬಾರ್ಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಆಚಾರ್ಯ, ಬಿಲ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ಬಾÊ ವಂಡಾರು ಶುಭ ಹಾರೈಸಿದ್ದರು.
ಗಣ್ಯರು ಗಿಡ ನೆಡುವ ಮೂಲಕ ಸಾಂಕೇತಿಕವಾಗಿ ವನಮಹೋತ್ಸವ ಆಚರಣೆ ಕಾರ್ಯಕ್ರಮವನ್ನು ನೆರವೇರಿಸಿದರು. ಬಳಿಕ ಸಸಿಗಳನ್ನು ವಿತರಣೆ ಮಾಡಿದರು. ಮನೆ ನಿರ್ಮಿಸಿದ ಮಧುಕರ ಆಚಾರ್ಯ ಅವರನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಹೊಸ ಮನೆ ನಿರ್ಮಾಣ ಮಾಡಿ ಕೊಟ್ಟ ಸಂಸ್ಥೆಯ ಆಡಳಿತ ಮಂಡಳಿಗೆ ಲಲಿತಾ ಆಚಾರ್ಯ ಕೃತಜ್ಞತೆ ಸಲ್ಲಿಸಿದರು.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ನಿವಾಸಕ್ಕೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ಶ್ಲಾಘಿಸಿದರು. ನಿರ್ದೇಶಕ ಕೆ. ಯಜ್ಞೇಶ್ವರ ಆಚಾರ್ಯ, ವಿ. ಜಯ ಆಚಾರ್, ಕೆ. ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್. ಪತ್ತಾರ್, ರೋಹಿಣಿ ಎಂ.ಪಿ, ಜ್ಯೋತಿ ಎಂ.ವಿ., ರಮೇಶ್ ರಾವ್ ಯು.ಕೆ. ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್. ಉಪಸ್ಥಿತರಿದ್ದರು.
ಮನೆಯ ಫಲಾನುಭವಿಗಳಾದ ಗಣೇಶ್ ಆಚಾರ್ಯ ಮತ್ತು ಲಲಿತಾ ದಂಪತಿಗಳಿಗೆ ಮನೆಯನ್ನು ಹಸ್ತಾಂತರ ಮಾಡಲಾಯಿತು.
ನಿರ್ದೇಶಕರಾದ ವೈ.ವಿ. ವಿಶ್ವಜ್ಞಮೂರ್ತಿ ಪ್ರಾರ್ಥಿಸಿದರು. ಸಂಸ್ಥೆಯ ಉಪಾಧ್ಯಕ್ಷ ಎ. ಆನಂದ ಆಚಾರ್ಯ ಸ್ವಾಗತಿಸಿದರು, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಶಾಖಾವ್ಯವಸ್ಥಾಪಕ ಶ್ರೀಕಾಂತ್ ಕಾರ್ಯಕ್ರಮ ನಿರೂಪಿಸಿ, ಪ್ರಭಾರ ಶಾಖಾ ವ್ಯವಸ್ಥಾಪಕಿ ಪೂರ್ಣಿಮಾ ಎಸ್. ಆಚಾರ್ಯ ವಂದಿಸಿದರು.
ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರ | ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಪ್ರಯುಕ್ತ ಯೋಜನೆ | ದುಡಿಮೆ, ಪ್ರಾಮಾಣಿಕತೆಗೆ ಇನ್ನೊಂದು ಹೆಸರೇ ವಿಶ್ವಕರ್ಮ ಸಮುದಾಯ: ಸಂಸದ ಕೋಟ
What's your reaction?
- 1294c
- 1294cc
- 11ai technology
- 11ajjavara
- 11alwas
- 11apology
- 11artificial intelegence
- 11avg
- 10belthangady-provocative-speech-case-conviction
- 10bihar minister
- 10bjp
- 10bjp leader
- 10bjp national president
- 10bt ranjan
- 9co-operative
- 9coastal
- 9Court convicts accused in provocative speech case
- 9crime
- 9crime news
- 9cyclothon
- 8darmasthala
- 8death news
- 8dust bin
- 8education
- 8fraud
- 7gl
- 7gods own country
- 7gold
- 7google for education
- 7independence
- 7jewel
- 6jewellers
- 6jnana vikasa
- 6karnataka state
- 6kerala village
- 6kukke - kollur temple
- 6lokayuktha
- 5lokayuktha raid
- 5Mangalore
- 5manipal
- 5minister krishna bairegowda
- 5mla ashok rai
- 5mohan alwa
- 4mudubidre
- 4nidana news
- 4nirvathu mukku
- 4nitin nabin
- 4police
- 4ptr tahasildar
- 3puttur
- 3puttur news
- 3puttur tahasildar
- 3republic
- 3revenue
- 3revenue department
- 2revenue minister
- 2school
- 2senior citizen
- 2silver
- 2society
- 2sowmya
- 1students
- 1tahasildar
- 1tahasildar absconded
- 1teachers
- 1tour
- 1trending
- 0udupi
- 0wastage
Related Posts
ನಾಗರಪಂಚಮಿ: ಆ.17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17, ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಗೆ…
ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ
ಪುತ್ತೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ‘ವಂದೇ ಮಾತರಂ’ ಗೀತೆಯ 150 ವರ್ಷ ಪೂರ್ಣಗೊಂಡ…
ವಂದೇ ಮಾತರಂಗೆ ಅವಮಾನ ಆರೋಪ: ಸೋನಿಯಾ ಗಾಂಧಿ ವಿರುದ್ಧ ವಿಕಾಸ್ ಪುತ್ತೂರು ದೂರು
ಮಂಗಳೂರು: ವಂದೇ ಮಾತರಂ ಗೀತೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ವಿಕಾಸ್…
ಮಂಗಳೂರಿನ KFC ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 4 ತಿಂಗಳ ಹಳೆಯ ಕೋಳಿ ಮಾಂಸ ಪತ್ತೆ!
ಮಂಗಳೂರು: ಗ್ರಾಹಕರು ಆರ್ಡರ್ ಮಾಡಿದ್ದ ಚಿಕನ್ ಹಾಳಾಗಿದ್ದು, ದುರ್ವಾಸನೆ ಬರುತ್ತಿದೆ ಎಂಬ…
ನೆಹರೂ ನಗರ ಪಟ್ಲ ಪ್ಲಾನೆಟ್ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
ಪುತ್ತೂರು: ನೆಹರೂ ನಗರದ ಪಟ್ಲ ಪ್ಲಾನೆಟ್ ಕಟ್ಟಡದಲ್ಲಿ ಕಟ್ಟಡ ಆರಂಭಗೊಂಡು 10 ವರ್ಷಗಳ ಬಳಿಕ ಇದೇ…
ಮಡಿಕೇರಿಯಲ್ಲಿ ಮಳೆಯ ಆರ್ಭಟ| ಸ್ಟೋನ್ ಹಿಲ್ನಿಂದ ಕಸದ ರಾಶಿ ಕುಸಿತ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯ ನಡುವೆಯೇ ಮಡಿಕೇರಿ ನಗರದ ಸ್ಟೋನ್ ಹಿಲ್…
40ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ‘ತೋಟ ಫೈಝಲ್’ ಬಂಧನ
ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ನಲ್ಲಿ ಮನೆಯೊಂದರ ಎದುರು…
ಜೆಸಿಐ ಪುತ್ತೂರು ನಿಯೋ ಪ್ರೈಮ್ ಅಧಿಕೃತ ಉದ್ಘಾಟನೆ, ಲೋಗೋ ಅನಾವರಣ
ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದ ಜೆಸಿಐ ಪುತ್ತೂರು ನಿಯೋ ಪ್ರೈಮ್ ಇದರ ಉದ್ಘಾಟನೆ…
ಆ.18ರಂದು ಬ್ರಹ್ಮರಕೊಟ್ಟು ಟೋಲ್ಗೇಟ್ ಸ್ಥಗಿತಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಚಲೋ
ಪುತ್ತೂರು: ನಿಯಮ ಹಾಗೂ ನಿಗದಿತ ಅವಧಿ ಮೀರಿ ಕಾರ್ಯಾಚರಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ…
ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಪುತ್ತೂರು: ಬೊಳುವಾರು ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವಕರ್ಮ…
































