ಮಂಗಳೂರು: ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಆಚರಣೆ ಪ್ರಯುಕ್ತ ಮಂದಾರ್ತಿ ಸಮೀಪದ ಬೂದಾಡಿಯಲ್ಲಿ ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಹೊಸ ಮನೆಯ ಹಸ್ತಾಂತರ ಜುಲೈ 6ರಂದು ಜರಗಿತು.
ಕಾರ್ಯಕ್ರಮ ಉದ್ಘಾಟಿಸಿ, ಮನೆ ಹಸ್ತಾಂತರ ಮಾಡಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪ್ರಾಮಾಣಿಕತೆ ಹಾಗೂ ಕಠಿಣ ಪರಿಶ್ರಮದಿಂದ ಬದುಕು ಸಾಗಿಸುವವರು ವಿಶ್ವಕರ್ಮ ಸಮುದಾಯದವರು. ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಇದೀಗ ಕಡುಬಡವರ ರಕ್ಷಣೆಯ ಕಾರ್ಯ ಮಾಡಿರುವುದು ಶ್ಲಾಘನೀಯ. ಇದು ಸಮಾಜಕ್ಕೆ ಮಾದರಿ ಕಾರ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯ ಮಾತನಾಡಿ, ಗಣೇಶ್ ಆಚಾರ್ಯ ದಂಪತಿಗಳ ಮನೆ ಪೂರ್ತಿ ಬೀಳುವ ಸ್ಥಿತಿಯಲ್ಲಿದ್ದ ಸಂದರ್ಭ ನಮ್ಮ ಸಂಸ್ಥೆ ಸಹಾಯ ಹಸ್ತ ಚಾಚಿದೆ. ಒಬ್ಬ ವ್ಯಕ್ತಿಗೆ ಸಹಾಯ ಮಾಡಿದರೆ ಜಗತ್ತು ಬದಲಾಗದೇ ಇರಬಹುದು. ಆದರೆ ಆ ವ್ಯಕ್ತಿಯ ಜಗತ್ತೇ ಬದಲಾಗುತ್ತದೆ. ಈ ದೃಷ್ಟಿಕೋನದಿಂದ ಸೊಸೈಟಿಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಮುತುವರ್ಜಿಯಿಂದ ರೂ.760000 ರೂ. ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಾಣ ಮಾಡಿ, ಇದೀಗ ಹಸ್ತಾಂತರ ಮಾಡಲಾಗಿದೆ ಎಂದರು.
ಕುAದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಸ್ವಂತ ಸೂರನ್ನು ನಿರ್ಮಿಸಲಾಗದವರನ್ನು ಗುರುತಿಸಿ ಅವರಿಗೆ ಮನೆ ನಿರ್ಮಿಸಿ ಕೊಟ್ಟಿರುವುದು ದೇವರು ಮೆಚ್ಚುವ ಕೆಲಸ. ಲಾಭದಲ್ಲಿ ನಿರಾಶ್ರಿತರಿಗೆ ಸಹಾಯ ಹಸ್ತವಲ್ಲದೆ ಮನೆ ನಿರ್ಮಾಣದಂತಹ ಕೆಲಸ ಕೈಗೆತ್ತಿರುವುದು ಶ್ಲಾಘನೀಯವೆಂದರು.
ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ, ರಥಶಿಲ್ಪಿ ರಾಜಗೋಪಾಲ ಆಚಾರ್ಯ, ಬಾರ್ಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಆಚಾರ್ಯ, ಬಿಲ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ಬಾÊ ವಂಡಾರು ಶುಭ ಹಾರೈಸಿದ್ದರು.
ಗಣ್ಯರು ಗಿಡ ನೆಡುವ ಮೂಲಕ ಸಾಂಕೇತಿಕವಾಗಿ ವನಮಹೋತ್ಸವ ಆಚರಣೆ ಕಾರ್ಯಕ್ರಮವನ್ನು ನೆರವೇರಿಸಿದರು. ಬಳಿಕ ಸಸಿಗಳನ್ನು ವಿತರಣೆ ಮಾಡಿದರು. ಮನೆ ನಿರ್ಮಿಸಿದ ಮಧುಕರ ಆಚಾರ್ಯ ಅವರನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಹೊಸ ಮನೆ ನಿರ್ಮಾಣ ಮಾಡಿ ಕೊಟ್ಟ ಸಂಸ್ಥೆಯ ಆಡಳಿತ ಮಂಡಳಿಗೆ ಲಲಿತಾ ಆಚಾರ್ಯ ಕೃತಜ್ಞತೆ ಸಲ್ಲಿಸಿದರು.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ನಿವಾಸಕ್ಕೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ಶ್ಲಾಘಿಸಿದರು. ನಿರ್ದೇಶಕ ಕೆ. ಯಜ್ಞೇಶ್ವರ ಆಚಾರ್ಯ, ವಿ. ಜಯ ಆಚಾರ್, ಕೆ. ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್. ಪತ್ತಾರ್, ರೋಹಿಣಿ ಎಂ.ಪಿ, ಜ್ಯೋತಿ ಎಂ.ವಿ., ರಮೇಶ್ ರಾವ್ ಯು.ಕೆ. ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್. ಉಪಸ್ಥಿತರಿದ್ದರು.
ಮನೆಯ ಫಲಾನುಭವಿಗಳಾದ ಗಣೇಶ್ ಆಚಾರ್ಯ ಮತ್ತು ಲಲಿತಾ ದಂಪತಿಗಳಿಗೆ ಮನೆಯನ್ನು ಹಸ್ತಾಂತರ ಮಾಡಲಾಯಿತು.
ನಿರ್ದೇಶಕರಾದ ವೈ.ವಿ. ವಿಶ್ವಜ್ಞಮೂರ್ತಿ ಪ್ರಾರ್ಥಿಸಿದರು. ಸಂಸ್ಥೆಯ ಉಪಾಧ್ಯಕ್ಷ ಎ. ಆನಂದ ಆಚಾರ್ಯ ಸ್ವಾಗತಿಸಿದರು, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಶಾಖಾವ್ಯವಸ್ಥಾಪಕ ಶ್ರೀಕಾಂತ್ ಕಾರ್ಯಕ್ರಮ ನಿರೂಪಿಸಿ, ಪ್ರಭಾರ ಶಾಖಾ ವ್ಯವಸ್ಥಾಪಕಿ ಪೂರ್ಣಿಮಾ ಎಸ್. ಆಚಾರ್ಯ ವಂದಿಸಿದರು.
ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರ | ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಪ್ರಯುಕ್ತ ಯೋಜನೆ | ದುಡಿಮೆ, ಪ್ರಾಮಾಣಿಕತೆಗೆ ಇನ್ನೊಂದು ಹೆಸರೇ ವಿಶ್ವಕರ್ಮ ಸಮುದಾಯ: ಸಂಸದ ಕೋಟ
What's your reaction?
- 1194c
- 1094cc
- 10ai technology
- 10ajjavara
- 10alwas
- 10apology
- 10artificial intelegence
- 9avg
- 9bihar minister
- 9bjp
- 9bjp leader
- 9bjp national president
- 9bt ranjan
- 8co-operative
- 8coastal
- 8crime
- 8crime news
- 8cyclothon
- 8darmasthala
- 8death news
- 7dust bin
- 7education
- 7fraud
- 7gl
- 7gods own country
- 7gold
- 6google for education
- 6independence
- 6jewel
- 6jewellers
- 6jnana vikasa
- 6karnataka state
- 5kerala village
- 5kukke - kollur temple
- 5lokayuktha
- 5lokayuktha raid
- 5manipal
- 5minister krishna bairegowda
- 4mla ashok rai
- 4mohan alwa
- 4mudubidre
- 4nidana news
- 4nirvathu mukku
- 4nitin nabin
- 4police
- 3ptr tahasildar
- 3puttur
- 3puttur news
- 3puttur tahasildar
- 3republic
- 3revenue
- 2revenue department
- 2revenue minister
- 2school
- 2senior citizen
- 2silver
- 2society
- 1sowmya
- 1students
- 1tahasildar
- 1tahasildar absconded
- 1teachers
- 1tour
- 0trending
- 0udupi
- 0wastage
Related Posts
ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ
ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…
ಜುಲೈ 4: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ
ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ - ಮಹಾಕಾಳಿ ದೇವಾಲಯದಲ್ಲಿ ಅಭಿವೃದ್ಧಿಗೆ…
ಮಾದಕ ವ್ಯಸನದ ವಿರುದ್ಧ ಜಾಗೃತಿಗಾಗಿ ಕಿರು ಪ್ರಬಂಧ ಸ್ಪರ್ಧೆ | ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಉಪ ವಿಭಾಗ, ಕಸಾಪ ಪುತ್ತೂರು ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಆಯೋಜನೆ
ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನ –…
ಪಿ.ಆರ್.ಸಿ.ಐ. ನೆಕ್ಸ್ಟ್ಜೆನ್ ಗವರ್ನನ್ಸ್ ಅವಾರ್ಡ್ಸ್ – 2026ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯ್ಕೆ | ಆಗಸ್ಟ್ 1ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ
ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI)ದ ಈ ಬಾರಿಯ PRCI NextGEN Governance…
ತಂತ್ರಜ್ಞಾನದ ಜೊತೆಗೆ ತತ್ವಜ್ಞಾನವಿರಲಿ: ಒಡಿಯೂರು ಶ್ರೀ | ಶಿವಂ ಕಂಪ್ಯೂಟರ್ಸ್ & ಸೆಕ್ಯೂರಿಟಿ ಸಿಸ್ಟಮ್ಸ್’ನ 2ನೇ ಮಳಿಗೆ ಉಪ್ಪಿನಂಗಡಿಯಲ್ಲಿ ಶುಭಾರಂಭ
ಪುತ್ತೂರು: ತಂತ್ರಜ್ಞಾನ ಶಿಕ್ಷಕನ ಸ್ಥಾನದವರೆಗೂ ಬಂದು ನಿಂತಿದೆ. ಆದರೆ ಆ ಎಐ ಶಿಕ್ಷಕ…
ಕೇರಳಕ್ಕೆ ಪ್ರವೇಶಿಸಿದ ಮುಂಗಾರು – ರಾಜ್ಯದಲ್ಲೂ ಭಾರೀ ಮಳೆಯ ಮುನ್ಸೂಚನೆ!
ಕೇರಳಕ್ಕೆ ಇಂದು (ಜೂ.4) ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು…
ಕೆ.ಎಚ್. ದಾಸಪ್ಪ ರೈಗೆ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿ
ಯಕ್ಷಗಾನ ಕ್ಷೇತ್ರದಲ್ಲಿ ಆರು ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿರುವ ಹಿರಿಯ ಕಲಾವಿದ ಕೆ.ಎಚ್.…
ಸೋನು ನಿಗಮ್ ವಿರುದ್ಧ ಕ್ರಮ ಕೈಗೊಂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ!
ಕನ್ನಡಿಗರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ…
ಚರುಂಬುರಿಯ ಕೈ ಹಿಡಿದು ರಾಜೇಶ್ ಪ್ರಭು ಬೆಳೆದಿದ್ದಾರೆ: ಪ್ರಭು’ಸ್ ಲೋಗೋ ಅನಾವರಣಗೊಳಿಸಿ ಅರವಿಂದ್ ಬೋಳಾರ್ | ಅರವಿಂದ್ ಬೋಳಾರ್ ದಕ್ಷಿಣ ಕನ್ನಡದ ರಾಜ್ ಕುಮಾರ್: ಡಾ. ಪ್ರಸಾದ್ ಭಂಡಾರಿ
ಪುತ್ತೂರು: ಕೊಂಬೆಟ್ಟು ಪ್ರಭು ಚರುಂಬುರಿ ಪ್ರಭು’ಸ್ ಚರುಂಬುರಿಯಾಗಿ ಬದಲಾಗಿದ್ದು, ಇದರ ನೂತನ…
ಮಾ. 22ರಂದು ಉಬಾರ್ ಕಂಬಳೋತ್ಸವ | ನದಿ ಹಿನ್ನೀರಿನಲ್ಲಿ ಬೋಟಿಂಗ್, ನದಿ ದಂಡೆಯಲ್ಲಿ ಸಸ್ಯಮೇಳ, ಆಹಾರ ಮೇಳ
ಉಪ್ಪಿನಂಗಡಿ ನೇತ್ರಾವತಿ ನದಿ ತೀರದಲ್ಲಿ ನಡೆಯುವ ವಿಜಯ ವಿಕ್ರಮ ಜೋಡುಕರೆ ಕಂಬಳ ಕೂಟದ 39ನೇ…






















