tamanvi
ಅಪರಾಧಪ್ರಚಲಿತ

ಅತ್ತೆಯನ್ನೇ ಕೊಂದ ಡಾಕ್ಟರ್ ಅಳಿಯ! ಅತ್ತೆ ನಡತೆ ಬಗ್ಗೆ ಸಂಶಯಪಟ್ಟು ಕೃತ್ಯ!!

ಈ ಸುದ್ದಿಯನ್ನು ಶೇರ್ ಮಾಡಿ

ಪತ್ನಿಯ ಮೇಲೆ ಸಂಶಯಪಟ್ಟು ನಡೆದಿರುವ ಕೊಲೆಗಳನ್ನು ನೋಡಿದ್ದೇವೆ. ಆದರೆ ಇದೀಗ ತನ್ನ ಅತ್ತೆಯ ಮೇಲೆ ಸಂಶಯಪಟ್ಟು ಕೊಲೆ ನಡೆದಿರುವ ಭೀಕರ ಘಟನೆ ತುಮಕೂರಿನಲ್ಲಿ ನಡೆದಿದೆ.

ಲಕ್ಷ್ಮೀ ದೇವಮ್ಮ ದಾರುಣವಾಗಿ ಕೊಲೆಗೈಯಲ್ಪಟ್ಟವರು.

ಅಳಿಯ ವೃತ್ತಿಯಲ್ಲಿ ದಂತ ವೈದ್ಯ. ಆತನಿಗೆ ಇದು ಎರಡನೇ ಮದುವೆ. ಮದುವೆಯ ನಂತರ ಆತನಿಗೆ ತನ್ನ ಅತ್ತೆಯ ನಡತೆಯ ಮೇಲೆ ಅನುಮಾನ ಹುಟ್ಟಿಕೊಂಡಿದೆ ಎನ್ನಲಾಗಿದೆ. ಅತ್ತೆಯ ಕಾರಣದಿಂದ ತನ್ನ ಪತ್ನಿಯೂ ಕೆಟ್ಟ ಹಾದಿಯಲ್ಲಿ ನಡೆಯುತ್ತಿದ್ದಾಳೆ ಎಂದು ಅಳಿಯ ನಂಬಿದ್ದ. ಇದರಿಂದ ಕೋಪಗೊಂಡು, ಅತ್ತೆಯನ್ನು ಕೊಂದುಬಿಟ್ಟರೆ ತನ್ನ ಪತ್ನಿ ಸರಿಯಾಗುತ್ತಾಳೆ ಎಂದು ಯೋಚಿಸಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ.

ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿ ಕೆರೆಗೆ ಎಸೆಯುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಭಯದಲ್ಲಿ ರಸ್ತೆ ಬದಿಯೇ ದೇಹದ ತುಂಡುಗಳನ್ನು ಬಿಟ್ಟು ಹೋಗಿದ್ದಾರೆ. ರಸ್ತೆ ಬದಿ ತುಂಡು ತುಂಡಾಗಿ ಬಿದ್ದಿದ್ದ ದೇಹದ ಅವಯವಗಳನ್ನು ನೋಡಿದ ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.

ಪ್ರಾರಂಭದಲ್ಲಿ ಪೊಲೀಸರಿಗೆ ಸುಳಿವೇ ಸಿಗಲಿಲ್ಲ. ಕೊನೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕಾರೊಂದು ಅನುಮಾನಾಸ್ಪದವಾಗಿ ಓಡಾಡಿರುವುದು ಬೆಳಕಿಗೆ ಬಂದಿದೆ. ಇದನ್ನೇ ಬೆನ್ನಟ್ಟಿದ ಪೊಲೀಸರಿಗೆ ಆರೋಪಿ ಹಾಗೂ ಆತನಿಗೆ ಸಹಾಯ ನೀಡಿದ ಇಬ್ಬರು ಸ್ನೇಹಿತರು ಸಿಕ್ಕಿ ಬಿದ್ದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 154