ಪ್ರಚಲಿತ

ಆನ್‌ಲೈನ್ ಹೂಡಿಕೆ ವಂಚನೆ: 2 ಕೋಟಿ ರೂ. ಪಂಗನಾಮ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರಿನಲ್ಲಿ ಸೈಬರ್ ವಂಚನೆ ನಡೆದಿದ್ದು, ಆನ್‌ಲೈನ್ ಹೂಡಿಕೆ ವಂಚನೆ ಹೆಸರಲ್ಲಿ 43 ವರ್ಷದ ವ್ಯಕ್ತಿಯೊಬ್ಬರು 2 ಕೋಟಿ ರೂ.ಗೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾರೆ. ವಂಚಕ ತಾನು ಕಂಪನಿಯೊಂದರ ಪ್ರತಿನಿಧಿಯೆಂದು ನಂಬಿಸಿ ಮೋಸ ಮಾಡಿದ್ದು, ಸಿಟಿ ಸಿಇಎನ್ (CEN) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

core technologies

ದುಪ್ಪಟ್ಟು ಹಣದ ಆಮಿಷವೊಡ್ಡಿ ಮೋಸ
ನೊಂದ ವ್ಯಕ್ತಿಯ ದೂರಿನ ಪ್ರಕಾರ, 2022ರ ಮೇ 1ರಂದು ಅಂಕಿತ್ ಎಂಬ ವ್ಯಕ್ತಿಯಿಂದ ವಾಟ್ಸಾಪ್ ಸಂದೇಶವೊಂದು ಬಂದಿತ್ತು. ಆ ಸಂದೇಶದಲ್ಲಿ ತಾನು ಒಂದು ಕಂಪನಿಯ ಪ್ರತಿನಿಧಿಯಾಗಿ ಕೆಲಸ ಮಾಡತ್ತಿದ್ದೇನೆಂದು ಅಂಕಿತ್ ಹೇಳಿದ್ದ. ತನ್ನ ಮೂಲಕ ಯಾವುದೇ ಹೂಡಿಕೆ ಮಾಡಿದರೂ ದುಪ್ಪಟ್ಟು ಹಣ ಪಡೆಯಬಹುದೆಂದು ಭರವಸೆ ನೀಡಿದ್ದ ಎಂದು ತಿಳಿದುಬಂದಿದೆ. ಅಂಕಿತ್ ತನ್ನೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಸುಮಿತ್ ಜೈಸ್ವಾಲ್, ಕುಶಾಗರ್ ಜೈನ್ ಮತ್ತು ಅಖಿಲ್ ಎನ್ನುವವರನ್ನು ದೂರುದಾರರಿಗೆ ಪರಿಚಯಿಸಿ, ಈ ಮೂವರು ವಿದೇಶಿ ಹೂಡಿಕೆಗಳನ್ನು ನಿರ್ವಹಿಸುತ್ತಾರೆಂದೂ, ಇವರಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದೆಂದೂ ಹೇಳಿದ್ದ.

akshaya college

ಸಂಬಂಧಿಕರ ಖಾತೆಯಿಂದಲೂ ಹಣ ವರ್ಗಾವಣೆ
ವಂಚಕರ ಮಾತನ್ನು ನಂಬಿದ್ದ ವ್ಯಕ್ತಿಗೆ ಅಂಕಿತ್ ವಾಟ್ಸಾಪ್ ಕರೆಯ ಮೂಲಕ ಹೂಡಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ವಂಚನೆಯಿಂದ ಮುಕ್ತವಾಗಿದೆ ಎಂದು ಇನ್ನೊಮ್ಮೆ ಭರವಸೆ ನೀಡಿದ್ದ. ಈ ಜಾಲಕ್ಕೆ ಸಿಲುಕಿದ ದೂರುದಾರರು ಆರಂಭದಲ್ಲಿ ಅಂಕಿತ್ ಒದಗಿಸಿದ QR ಕೋಡ್​ಗೆ 3,500 ರೂಗಳನ್ನು ವರ್ಗಾಯಿಸಿದ್ದರು. ಶೀಘ್ರದಲ್ಲೇ ಲಾಭವಾಗಿ 1,000 ರೂ.ಗಳನ್ನು ಪಡೆದಿದ್ದರು.

ಶೀಘ್ರ ಲಾಭದಿಂದ ಉತ್ತೇಜಿತರಾದ ಇವರು ದೊಡ್ಡ ಮೊತ್ತವನ್ನು ಹೂಡಿಕೆ ಮಾಡಲು ಪ್ರಾರಂಭಿಸಿದ್ದರು. ಕೇವಲ ತಮ್ಮ ಬ್ಯಾಂಕ್ ಖಾತೆಯಿಂದಷ್ಟೇ ಅಲ್ಲದೇ ಅವರ ಚಿಕ್ಕಪ್ಪ, ಹೆಂಡತಿ ಮತ್ತು ಸೊಸೆಯ ಬ್ಯಾಂಕ್ ಖಾತೆಯಿಂದಲೂ ಹಂತ ಹಂತವಾಗಿ ಹಣವನ್ನು ವರ್ಗಾಯಿಸಿದ್ದರು. ಇದೇ ರೀತಿ ಮೇ 2022 ರಿಂದ 29 ಆಗಸ್ಟ್ 2025 ರ ನಡುವೆ UPI ಮತ್ತು IMPS ವಹಿವಾಟುಗಳ ಮೂಲಕ ಆರೋಪಿಗಳ ಬ್ಯಾಂಕ್ ಖಾತೆಗಳಿಗೆ 2 ಕೋಟಿ ರೂ.ಗೂ ಹೆಚ್ಚಿನ ಮೊತ್ತವನ್ನು ಕಳುಹಿಸಿದ್ದರೆಂದು ಹೇಳಲಾಗಿದೆ.

ಕೊಲೆ ಬೆದರಿಕೆಯೊಡ್ಡಿದ್ದ ವಂಚಕರು:

ಕಳೆದ ಕೆಲ ತಿಂಗಳುಗಳಿಂದ ಈ ನಾಲ್ವರೂ ದೂರುದಾರರನ್ನು ಸಂಪರ್ಕಿಸಿರಲಿಲ್ಲ. ದೂರುದಾರರು ನಿರಂತರವಾಗಿ ಸಂಪರ್ಕಿಸಲು ಪ್ರಯತ್ನ ಪಟ್ಟಾಗ ಕೊನೆಗೂ ಅಂಕಿತ್ನಿಂದ ಸಂದೇಶ ಬಂದಿತ್ತು. ಆತ ಉಳಿದ ಮೂವರಿಂದ ತನಗೆ ಮೋಸವಾಗಿದೆ, ತಾನು ಈಗಾಗಲೇ ಅವರೊಂದಿಗೆ ಸಂಪರ್ಕವನ್ನು ಕಡಿತಗೊಳಿಸಿದ್ದೇನೆಂದು ಹೇಳಿದ್ದ. ಇದೇ ವೇಳೆ ಸುಮಿತ್ ಜೈಸ್ವಾಲ್, ಕುಶಾಗರ್ ಜೈನ್ ಮತ್ತು ಅಖಿಲ್ ಈ ಮೂವರೂ ದೂರುದಾರರಿಗೆ ಕರೆ ಮಾಡಿ, ಪೊಲೀಸರನ್ನು ಸಂಪರ್ಕಿಸದಂತೆ ಕೊಲೆ ಬೆದರಿಕೆಯನ್ನೂ ಹಾಕಿದ್ದರು. ಇದರಿಂದ ಗಾಬರಿಗೊಂಡ ದೂರುದಾರರು ತಮ್ಮ ಕುಟುಂಬದವರಿಗೆ ವಿಷಯ ತಿಳಿಸಿ ನಂತರ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿರಾಡಿ ಘಾಟ್’ನಲ್ಲಿ ಹೆದ್ದಾರಿ, ರೈಲ್ವೇ ಸುರಂಗ ಮಾರ್ಗದ ಸಮೀಕ್ಷೆಗೆ ಸಮಿತಿ ರಚನೆ: ಸಂಸದ ಕ್ಯಾ. ಚೌಟ ಹೇಳಿದ್ದೇನು?

ಮಂಗಳೂರು: ಮಂಗಳೂರು- ಬೆಂಗಳೂರು ಹೈಸ್ಪೀಡ್‌ ಕಾರಿಡಾರ್​​ಗೆ ಸಂಬಂಧಿಸಿದಂತೆ ಹಾಸನದಿಂದ ದಕ್ಷಿಣ…

ಮೈತ್ರಿ ಎಲೆಕ್ಟ್ರಿಕ್ ಕಂ. ವತಿಯಿಂದ ಎಲೆಕ್ಟ್ರಿಷಿಯನ್ಸ್ ಗಳಿಗೆ ಅರಿತು ಕೊಳ್ಳಿ- ಹ್ಯಾವೆಲ್ಸ್ ಫ್ಯಾಕ್ಟರಿ ಭೇಟಿ

ಪುತ್ತೂರು: ಇಲ್ಲಿನ ಮೈತ್ರಿ ಇಲೆಕ್ಟ್ರಿಕ್ ಕಂ. ಇದರ ಪ್ರಮುಖ ಗ್ರಾಹಕ ಇಲೆಕ್ಟ್ರೀಷಿಯನ್’ಗಳಿಗೆ…