ಪ್ರಚಲಿತ

ಡಾ. ಎಂ. ಮೋಹನ್ ಆಳ್ವರಿಗೆ ಪದ್ಮಶ್ರೀ ಸಲ್ಲಬೇಕು | ಪುತ್ತೂರಿನಲ್ಲಿ ನಡೆದ ಆಳ್ವಾಸ್ ಸಾಂಸ್ಕೃತಿಕ ವೈಭವದಲ್ಲಿ ಡಾ. ಸಂತೋಷ್ ಗುರೂಜಿ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಲೆ, ಸಂಸ್ಕೃತಿಗೆ ವಿಶೇಷ ಕೊಡುಗೆ ನೀಡಿದ ಡಾ. ಎಂ. ಮೋಹನ್ ಆಳ್ವ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು. ಈ ನಿಟ್ಟಿನಲ್ಲಿ ಮಾಜಿ ಸಂಸದ ಹಾಗೂ ಹಾಲಿ ಸಂಸದರು ಪ್ರಯತ್ನಿಸಬೇಕು ಎಂದು ಬಾರ್ಕೂರು ಸಂಸ್ಥಾನದ ಡಾ. ಸಂತೋಷ್ ಗುರೂಜಿ ಹೇಳಿದರು.

core technologies

ಅವರು ಆಳ್ವಾಸ್ ನುಡಿಸಿರಿ ವಿರಾಸತ್ ಪುತ್ತೂರು ಘಟಕದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಭಾನುವಾರ ಸಂಜೆ ನಡೆದ `ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

akshaya college

ಮಕ್ಕಳು ಪದವೀಧರರಾಗುವುದು ಮುಖ್ಯವಲ್ಲ; ವಿದ್ಯಾವಂತರಾಗಬೇಕು. ಸಂಸ್ಕಾರಯುತ ಕಲಿಕೆಯಿಂದ ಮಾತ್ರ ಮಕ್ಕಳು ವಿದ್ಯಾವಂತರಾಗಲು ಸಾಧ್ಯ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಕಲಾ ತಂಡದಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಬದುಕಿನ ಕಲೆಯನ್ನು ಅರ್ಥೈಸಿಕೊಳ್ಳುವ ಜೊತೆಗೆ ಹೆತ್ತವರಿಗೆ ಗೌರವ ನೀಡುವ ಸಂಸ್ಕಾರವನ್ನೂ ಬೆಳೆಸಿಕೊಳ್ಳುತ್ತಾರೆ. ಇಂತಹ ಕೆಲಸ ಡಾ. ಎಂ. ಮೋಹನ್ ಆಳ್ವರಿಂದ ಆಗುತ್ತಿದೆ ಎಂದರು.

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಸಾಹಿತ್ಯದ ಬಗ್ಗೆ ಸರ್ಕಾರಕ್ಕಿಂತಲೂ ಹೆಚ್ಚಿನ ಕೆಲಸ ಮಾಡುತ್ತಿರುವ ಡಾ. ಆಳ್ವರ ಶಿಕ್ಷಣ ಸಂಸ್ಥೆಯು ಶಿಕ್ಷಣ ನೀಡುವುದರ ಜೊತೆಗೆ ಸಂಸ್ಕಾರವನ್ನೂ ನೀಡುತ್ತಿದೆ. ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಮಾನವ ಬಾಂಬರ್ ಆಗಲು ಸಾಧ್ಯವಿಲ್ಲ ಎಂದರು.

ಸಮಯ ಪಾಲನೆ ಹಾಗೂ ಸಾಂಸ್ಕೃತಿಕ ಅಚ್ಚುಕಟ್ಟುತನವು ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿಶೇಷತೆಯಾಗಿದ್ದು, ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಈ ಸಂಸ್ಥೆಯ ಮುಖ್ಯಸ್ಥರಾದ ಡಾ.ಎಂ. ಮೋಹನ ಆಳ್ವರು ಭಾರತೀಯ ನೃತ್ಯ ಮತ್ತು ಸಂಗೀತ ಪರಂಪರೆಯನ್ನು ದೇಶ ವಿದೇಶಗಳಲ್ಲಿ ಅರಳಿಸಿದ್ದಾರೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ಇದೊಂದು ಪ್ರಚಾರಕ್ಕೆ ನಡೆಸುವ ಅಥವಾ ಮಕ್ಕಳನ್ನು ಸೆಳೆಯುವ ಉದ್ದೇಶದಿಂದ ನಡೆಸುವ ಕಾರ್ಯಕ್ರಮವಲ್ಲ. ಬದಲಿಗೆ ಸಾಂಸ್ಕೃತಿಕ ವಿನಿಮಯ ಮತ್ತು ಸಮಾಜ ಕಟ್ಟು ಕೆಲಸವಾಗಿದೆ. ನಮ್ಮ ದೇಶವು ಹಲವು ಜಾತಿ ಧರ್ಮವನ್ನು ಒಳಗೊಂಡಿದೆ. ಅದರ ನಡುವೆ ಭಾತೃತ್ವವಿದೆ. ಅದನ್ನು ಅರ್ಥಮಾಡಿಕೊಂಡಲ್ಲಿ ನೆಮ್ಮದಿಯ ಬದುಕು ಕಾಣಲು ಸಾಧ್ಯವಿದೆ. ಕ್ರೀಡೆ, ಸಾಂಸ್ಕೃತಿಕ ಮತ್ತು ಸಮಾಜದ ಪರಿಕಲ್ಪನೆಯಲ್ಲಿ ಮುನ್ನಡೆಯುವ ಈ ತಂಡವು ಹಲವು ಜಾತಿ, ಧರ್ಮವನ್ನು ಒಳಗೊಂಡು ಭಾರತವಾಗಿದೆ.

ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ೩ಸಾವಿರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದಕ್ಕಾಗಿ ವಾರ್ಷಿಕ ರೂ. 50 ಕೋಟಿ ವೆಚ್ಚ ಮಾಡಲಾಗುತ್ತಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಕ್ರೀಡೆಗೆ ಪ್ರೋತ್ಸಾಹ ನೀಡುವ ಜೊತೆಗೆ ಕನ್ನಡ ಭಾಷೆ ಸೋಲದಂತೆ ಕನ್ನಡ ಮಾದ್ಯಮ ಶಾಲೆಯನ್ನು ನಡೆಸಲಾಗುತ್ತಿದ್ದು, ಕೊರಗ, ಸೋಲಿಗ, ಮಲೆಕುಡಿಯ, ಜೇನುಕುರುಬ, ಹಕ್ಕಿಪಿಕ್ಕಿ ಇನ್ನಿತರ 7 ಆದಿವಾಸಿ ಸಮುದಾಯದ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸಲಾಗುತ್ತಿದೆ. ಅಂಗ ನ್ಯೂನತೆಯ ಮಕ್ಕಳಿಗೂ ಉಚಿತ ಶಿಕ್ಷಣ ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಮಕ್ಕಳಿಗೆ ವಿದ್ಯಾಬುದ್ದಿ ನೀಡುವುದರ ಜೊತೆಗೆ ಅವರಿಗೆ ಸಂಸ್ಕಾರವನ್ನು ನೀಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳಿಗೆ ಎಲ್ಲಾ ರೀತಿಯ ಅವಕಾಶಗಳನ್ನು ಒದಿಗಿಸುತ್ತಿರುವ ಆಳ್ವಾಸ್ ಸಂಸ್ಥೆಯು ಹೆಮ್ಮೆ ಪಡುವ ಕೆಲಸ ಮಾಡುತ್ತಿದೆ. ಡಾ. ಮೋಹನ್ ಆಳ್ವರು ಸ್ವ ಇಚ್ಚೆಯಿಂದ ಪಕ್ಷ ಜಾತಿ ರಹಿತವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುತ್ತಿರುವುದು ಮಾದರಿಯಾಗಿದೆ. ಇಂತಹ ಕಾರ್ಯಕ್ರಮಗಳ ಮುಂದೆ ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ ಎಂದರು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು, ಮಾಜಿ ಶಾಸಕರಾದ ಸಂಜೀವ ಮಠಂದೂರು ಶಕುಂತಳಾ ಶೆಟ್ಟಿ, ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ನಿಕಟಪೂರ್ವ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಆಳ್ವಾಸ್ ನುಡಿಸಿರಿ ವಿರಾಸತ್ ಪುತ್ತೂರು ಘಟಕದ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ, ಸಂಚಾಲಕ ವಿಜಯ ಹಾರ್ವಿನ್, ಪ್ರಮುಖರಾದ ಡಾ. ಸುರೇಶ್ ಪುತ್ತೂರಾಯ, ಚನಿಲ ತಿಮ್ಮಪ್ಪ ಶೆಟ್ಟಿ, ಬಲರಾಮ್ ಆಚಾರ್ಯ, ದಂಬೆಕ್ಕಾನ ಸದಾಶಿವ ರೈ, ಹೇಮನಾಥ ಶೆಟ್ಟಿ ಕಾವು, ಶಶಿಕುಮಾರ್ ರೈ ಬಾಲ್ಯೊಟ್ಟು, ಡಾ. ಯು.ಪಿ. ಶಿವಾನಂದ್, ಸೀತಾರಾಮ ರೈ ಕೆದಂಬಾಡಿಗುತ್ತು, ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್, ಪೌರಾಯುಕ್ತೆ ವಿದ್ಯಾಕಾಳೆ, ಎನ್.ಕೆ. ಜಗನ್ನಿವಾಸ್ ರಾವ್, ಬೂಡಿಯಾರ್ ರಾಧಾಕೃಷ್ಣ ರೈ, ಡಾ. ಎಚ್. ಮಾಧವ ಭಟ್, ಜಯಸೂರ್ಯ ರೈ ಮಾದೋಡಿ, ಡಾ. ರವೀಶ್ ಪಡುಮಲೆ, ಮಲ್ಲಿಕಾ ಪಕ್ಕಳ, ಪುಲಸ್ತ್ಯ ರೈ, ಕರುಣಾಕರ ಸುವರ್ಣ, ಸಹಜ್ ರೈ ಬಳಜ್ಜ ಮೊದಲಾದವರು ಉಪಸ್ಥಿತರಿದ್ದರು.

ಆಳ್ವಾಸ್ ಕಾಲೇಜ್‌ನ ಡೀನ್ ವೇಣುಗೋಪಾಲ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

ಬಳಿಕ ಆಳ್ವಾಸ್ ಸಾಂಸ್ಕೃತಿಕ ವೈಭವ ಪ್ರಸ್ತುತಗೊಂಡಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿರಾಡಿ ಘಾಟ್’ನಲ್ಲಿ ಹೆದ್ದಾರಿ, ರೈಲ್ವೇ ಸುರಂಗ ಮಾರ್ಗದ ಸಮೀಕ್ಷೆಗೆ ಸಮಿತಿ ರಚನೆ: ಸಂಸದ ಕ್ಯಾ. ಚೌಟ ಹೇಳಿದ್ದೇನು?

ಮಂಗಳೂರು: ಮಂಗಳೂರು- ಬೆಂಗಳೂರು ಹೈಸ್ಪೀಡ್‌ ಕಾರಿಡಾರ್​​ಗೆ ಸಂಬಂಧಿಸಿದಂತೆ ಹಾಸನದಿಂದ ದಕ್ಷಿಣ…