ಪ್ರಚಲಿತ

‘ಕೆಡಿ’ ಸಿನಿಮಾದ ಅಶ್ಲೀಲ ಹಾಡು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ – ಲೋಕಸಭೆಯಲ್ಲಿ ಘೋಷಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ವಿವಾದಕ್ಕೆ ಈಡಾಗಿದ್ದ ಕೆಡಿ ಸಿನಿಮಾದ ಹಾಡನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಧ್ರುವ ಸರ್ಜಾ ನಟನೆಯ, ಜೋಗಿ ಪ್ರೇಮ್ ನಿರ್ದೇಶನದ ಕೆಡಿಸಿನಿಮಾದ ಈ ಹಾಡಿನಿಂದ ಇಡೀ ಕನ್ನಡ ಚಿತ್ರರಂಗಕ್ಕೆ ಮುಜುಗರ ಆದಂತಾಗಿದೆ.

chennai-shopping
maithri

ಸಂಜಯ್ ದತ್ ಮತ್ತು ನೋರಾ ಫತೇಹಿ ನಟಿಸಿದ ‘ಸರ್ಕೆ ಚುನರ್ ತೇರಿ’ ಹಾಡಿನ ವಿರುದ್ಧ ದೇಶಾದ್ಯಂತ ವ್ಯಕ್ತವಾದ ತೀವ್ರ ಆಕ್ರೋಶದ ಬೆನ್ನಲ್ಲೇ, ಕೇಂದ್ರ ಸರ್ಕಾರ ಈ ಹಾಡನ್ನು ಅಧಿಕೃತವಾಗಿ ನಿಷೇಧಿಸಿದೆ.

ಸಮಾಜವಾದಿ ಪಕ್ಷದ ಸಂಸದ ಆನಂದ್ ಬಡೋರಿಯಾ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಅಶ್ವಿನಿ ವೈಷ್ಣವ್, ‘ಈ ಹಾಡನ್ನು ಈಗಾಗಲೇ ನಿಷೇಧಿಸಲಾಗಿದೆ. ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವು ಸಂಪೂರ್ಣ ಪ್ರಶ್ನಾತೀತವಲ್ಲ. ಸಂವಿಧಾನದ ರಚನೆಕಾರರು ವಿಧಿಸಿರುವ ಸಮಂಜಸವಾದ ನಿರ್ಬಂಧಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು’ ಎಂದು ತಿಳಿಸಿದರು. ಸಂವಿಧಾನದ ವಿಧಿ 19(2) ಉಲ್ಲೇಖಿಸಿದ ಸಚಿವರು, ಸಾರ್ವಜನಿಕ ಸುವ್ಯವಸ್ಥೆ, ಸಭ್ಯತೆ ಮತ್ತು ನೈತಿಕತೆಗೆ ಧಕ್ಕೆ ಬಂದಾಗ ಇಂತಹ ನಿರ್ಬಂಧಗಳನ್ನು ಹೇರಲು ಸರ್ಕಾರಕ್ಕೆ ಅಧಿಕಾರವಿದೆ ಎಂದು ಹೇಳಿದರು.

ಡಿಜಿಟಲ್ ಮಾಧ್ಯಮಗಳ ಮೂಲಕ ವಿಷಯಗಳು ವೇಗವಾಗಿ ಹರಡುತ್ತಿರುವ ಇಂದಿನ ದಿನಗಳಲ್ಲಿ ಸಮಾಜದ ಹಿತದೃಷ್ಟಿಯಿಂದ ಇಂತಹ ಕ್ರಮಗಳು ಅನಿವಾರ್ಯ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ‘ಸಮಾಜದ ರಕ್ಷಣೆಗಾಗಿ, ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ವಂಚಿತ ವರ್ಗಗಳ ಗೌರವ ಕಾಪಾಡಲು ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಸಿದ್ಧವಿದೆ’ ಎಂದು ವೈಷ್ಣವ್ ಅವರು ಲೋಕಸಭೆಯಲ್ಲಿ ತಿಳಿಸಿದರು.

ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಬಿಡುಗಡೆಯಾದ ತಕ್ಷಣವೇ ಅದರ ಸಾಹಿತ್ಯ ಮತ್ತು ದೃಶ್ಯಗಳು ಅಶ್ಲೀಲತೆಯಿಂದ ಕೂಡಿವೆ ಎಂಬ ಆರೋಪ ಕೇಳಿಬಂದಿತ್ತು. ಇದು ಮಹಿಳೆಯರನ್ನು ಕೀಳಾಗಿ ಚಿತ್ರಿಸುತ್ತದೆ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಕರ್ನಾಟಕ ಮತ್ತು ಹರಿಯಾಣ ಮಹಿಳಾ ಆಯೋಗಗಳು ಈ ಹಾಡಿನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದವು.

ನಟ ರವಿ ಕಿಶನ್, ನಟಿ ಕಂಗನಾ ರಣಾವತ್, ಗಾಯಕ ಅರ್ಮಾನ್ ಮಲಿಕ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕೂಡ ಹಾಡಿನ ಸಾಹಿತ್ಯ ಆಕ್ಷೇಪಾರ್ಹವಾಗಿದೆ ಎಂದು ಸಾರ್ವಜನಿಕವಾಗಿ ಖಂಡಿಸಿದ್ದರು. ಈ ಹಾಡಿನ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ನೋರಾ ಫತೇಹಿ ಅವರು ಚಿತ್ರತಂಡವೇ ಇದಕ್ಕೆಲ್ಲ ಹೊಣೆ ಎಂದು ಹೇಳಿದ್ದಾರೆ. ಈ ಎಲ್ಲ ಬೆಳವಣಿಗೆಗಳು ‘ಕೆಡಿ’ ಸಿನಿಮಾಗೆ ಅಪಖ್ಯಾತಿ ತಂದಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಫೆ. 11ಕ್ಕೆ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದಿಂದ ಮಂಗಳೂರು ಪುರಭವನದಲ್ಲಿ ರಾಜ್ಯ ಸಮಾವೇಶ

ಪುತ್ತೂರು: ಕರ್ನಾಟಕ ರಾಜ್ಯ ಕನ್ನಡ ಉಳಿಸಿ, ಬೆಳೆಸಿ ಅಭಿಯಾನ ಇದರ ವತಿಯಿಂದ ಕನ್ನಡ ಮನಸ್ಸುಗಳ…