tamanvi
ಪ್ರಚಲಿತ

ಬೆಳ್ತಂಗಡಿ: ನವವಿವಾಹಿತ ಆತ್ಮಹತ್ಯೆ – ತನಿಖೆ ಚುರುಕು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕಳೆದ ತಿಂಗಳಷ್ಟೇ ಹಸೆಮಣೆ ಏರಿದ್ದ ಯುವ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

maithri

ಮೃತರನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ಮೂಲದ, ಪ್ರಸ್ತುತ ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿರುವ ಅಜ್ಜನ ಮನೆಯಲ್ಲಿ ವಾಸವಿದ್ದ ಬಿ. ಸುದೀಪ್ ರೈ (36) ಎಂದು ಗುರುತಿಸಲಾಗಿದೆ.

ಮಾರ್ಚ್ 17 ರಂದು ಸುದೀಪ್ ರೈ ಅವರು ಪತ್ನಿಯ ಮನೆಯಲ್ಲಿ ಆಹಾರದ ಜೊತೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅವರು, ಭಾನುವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಸುದೀಪ್ ರೈ ಅವರು ಪುತ್ತೂರು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಕಳ ತಾಲೂಕಿನ ಕಾಜೆ ನಿವಾಸಿಯನ್ನ ಫೆಬ್ರವರಿ 17 ರಂದು ಕುಟುಂಬದವರಿಗೆ ತಿಳಿಸದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!! ಇಬ್ಬರು ಯುವಕರ ವಿಚಿತ್ರ ವರ್ತನೆಗೆ ಸಾರ್ವಜನಿಕರ ಆತಂಕ!

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಅಗ್ನಿಪಥ್, ಪೊಲೀಸ್ ಹಾಗೂ ವಾಚರ್ ನೇಮಕಾತಿಗೆ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ

ಪುತ್ತೂರು: ಸೇನಾ ನೇಮಕಾತಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೆಸರುವಾಸಿಯಾದ…