ಪ್ರಚಲಿತ

ಬೆಳ್ತಂಗಡಿ: ನವವಿವಾಹಿತ ಆತ್ಮಹತ್ಯೆ – ತನಿಖೆ ಚುರುಕು!!

ಈ ಸುದ್ದಿಯನ್ನು ಶೇರ್ ಮಾಡಿ

ಕಳೆದ ತಿಂಗಳಷ್ಟೇ ಹಸೆಮಣೆ ಏರಿದ್ದ ಯುವ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

maithri

ಮೃತರನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ಮೂಲದ, ಪ್ರಸ್ತುತ ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿರುವ ಅಜ್ಜನ ಮನೆಯಲ್ಲಿ ವಾಸವಿದ್ದ ಬಿ. ಸುದೀಪ್ ರೈ (36) ಎಂದು ಗುರುತಿಸಲಾಗಿದೆ.

ಮಾರ್ಚ್ 17 ರಂದು ಸುದೀಪ್ ರೈ ಅವರು ಪತ್ನಿಯ ಮನೆಯಲ್ಲಿ ಆಹಾರದ ಜೊತೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅವರು, ಭಾನುವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಸುದೀಪ್ ರೈ ಅವರು ಪುತ್ತೂರು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಕಳ ತಾಲೂಕಿನ ಕಾಜೆ ನಿವಾಸಿಯನ್ನ ಫೆಬ್ರವರಿ 17 ರಂದು ಕುಟುಂಬದವರಿಗೆ ತಿಳಿಸದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…

ರೋಟರಿಯ 4ವೇ ಟೆಸ್ಟ್ ಯಶಸ್ಸಿಗೆ ಮೆಟ್ಟಿಲು | ರೋಟರಿ ಕ್ಲಬ್ ಪುತ್ತೂರು ಯುವದ ಪದಸ್ವೀಕಾರ ಸಮಾರಂಭದಲ್ಲಿ ಡಾ. ಸುಧಾ ರಾವ್

ಪುತ್ತೂರು: ರೋಟರಿ ತಿಳಿಸಿರುವ 4 ವೇ ಟೆಸ್ಟ್ ಅನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ವೈಯಕ್ತಿಕ…