tamanvi
ಪ್ರಚಲಿತ

ಗೇರುಕಟ್ಟೆ: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ಅಕ್ಕ – ತಂಗಿ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಾಗಿರುವ ಅಕ್ಕ-ತಂಗಿಯರು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

maithri

ಗಾಯಾಳುಗಳನ್ನು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಿವಾಸಿ ನಾಗರಾಜ ಹಾಗೂ ರೂಪಾ ದಂಪತಿಯ ಪುತ್ರಿಯರು ಎಂದು ಗುರುತಿಸಲಾಗಿದೆ.

ಈ ಪೈಕಿ ಓರ್ವೆ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು, ಇಂದು ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇನ್ನೊಬ್ಬಳು ಅವಳ ಸಹೋದರಿಯಾಗಿದ್ದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ.

ಇವರಿಬ್ಬರು ಮಂಗಳವಾರ ಬೆಳಗ್ಗೆ ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆ ತೆರಳಲು ಕೆಎಸ್ಸಾರ್ಟಿಸಿ ಬಸ್ ಹತ್ತಿದ್ದು, ರೇಷ್ಮೆ ರೋಡ್ ಎಂಬಲ್ಲಿ ತಲುಪಿದಾಗ ಏಕಾಏಕಿ ಬಸ್ಸಿನ ಬಾಗಿಲಿನ ತೆರೆಯಲ್ಪಟ್ಟಿದೆ. ಈ ವೇಳೆ ಇವರಿಬ್ಬರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗಂಭೀರ ಗಾಯಗೊಂಡಿರುವ ಅವರಿಬ್ಬರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಹಾಗೂ ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!! ಇಬ್ಬರು ಯುವಕರ ವಿಚಿತ್ರ ವರ್ತನೆಗೆ ಸಾರ್ವಜನಿಕರ ಆತಂಕ!

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಅಗ್ನಿಪಥ್, ಪೊಲೀಸ್ ಹಾಗೂ ವಾಚರ್ ನೇಮಕಾತಿಗೆ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ

ಪುತ್ತೂರು: ಸೇನಾ ನೇಮಕಾತಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೆಸರುವಾಸಿಯಾದ…