tamanvi
ಕರಾವಳಿಪ್ರಚಲಿತ

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ಘಟಕ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಂಘದ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿಯಾಗಿ ಚಿತ್ರಾಂಗಿನಿ ಸತ್ಯಪ್ರಕಾಶ್ ಬನ್ನೂರು, ಉಪಾಧ್ಯಕ್ಷೆಯಾಗಿ ಸುಮಿತ್ರಾ ಬಿ. ನಾಯ್ಕ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರಶಾಂತ್ ಮಿತ್ತಡ್ಕ ಹಾಗೂ ಜತೆ ಕಾರ್ಯದರ್ಶಿಯಾಗಿ ದಿನೇಶ್ ಬಡಗನ್ನೂರುರವರನ್ನು ಆಯ್ಕೆ ಮಾಡಲಾಯಿತು.

ಜು.4ರಂದು ನಡೆದ ಸಂಘದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಉಳಿದಂತೆ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಂಘದ ಕಾನೂನು ಸಲಹೆಗಾರರಾಗಿ ಅನಿಕೇತನ ಲಾ ಛೇಂಬರ‍್ಸ್‌ನ ವಕೀಲರಾದ ಕೃಷ್ಣಪ್ರಸಾದ್ ನಡ್ಸಾರ್‌ರವರು ಮುಂದುವರಿಯಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ಪುತ್ತೂರು ಘಟಕದ ಸ್ಥಾಪಕಾಧ್ಯಕ್ಷ ಉಮೇಶ್ ಮಿತ್ತಡ್ಕ ಹಾಗೂ ಮಾಜಿ ಅಧ್ಯಕ್ಷರು, ಪದಾಽಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

1 of 103