ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಕಾಂತ್, ಕಾರ್ಯದರ್ಶಿಯಾಗಿ ಸುಕನ್ಯಾ, ಹಾಗೂ ಸಭಾಪತಿಯಾಗಿ ಪುತ್ತೂರು ರೋಟರಿ ಕ್ಲಬ್ ಸದಸ್ಯ ಶ್ರೀಧರ ಆಚಾರ್ಯ ಕೊಕ್ಕಡ ಆಯ್ಕೆಯಾಗಿದ್ದಾರೆ.
ಜುಲೈ 15ರಂದು ಸಂಜೆ 6.30ಕ್ಕೆ ರೋಟರಿ ಜಿಎಲ್ ಸಭಾಭವನದಲ್ಲಿ ಪದಸ್ವೀಕಾರ ಸಮಾರಂಭ ನಡೆಯಲಿದೆ.
ನಿಕಟಪೂರ್ವ ಅಧ್ಯಕ್ಷರಾಗಿ ವಿನೀತ್, ಉಪಾಧ್ಯಕ್ಷರಾಗಿ ಕಿಶೋರ್ ಕುಮಾರ್, ಜತೆ ಕಾರ್ಯದರ್ಶಿಯಾಗಿ ವಿಶಾಲ್, ಕೋಶಾಧಿಕಾರಿಯಾಗಿ ನವೀನ್ ಚಂದ್ರ, ಬುಲೆಟಿನ್ ಸಂಪಾದಕರಾಗಿ ಗಣೇಶ್ ಎನ್. ಕಲ್ಲರ್ಪೆ, ದಂಡಾಧಿಕಾರಿಯಾಗಿ ಆದಿತ್ಯ, ಸಂಘ ಸೇವಾ ನಿರ್ದೇಶಕರಾಗಿ ಸುಶಾಂತ್, ಸಮಾಜ ಸೇವಾ ನಿರ್ದೇಶಕರಾಗಿ ಸುಬ್ರಮಣಿ, ವೃತ್ತಿ ಸೇವಾ ನಿರ್ದೇಶಕರಾಗಿ ಶಶಿಧರ್ ಕೆ. ಮಾವಿನಕಟ್ಟೆ, ಅಂತರಾಷ್ಟ್ರೀಯ ಸೇವಾ ನಿರ್ದೇಶಕರಾಗಿ ಅಖಿಲ್, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನವೀನ್ ರೈ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.





















