ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಚೇತನ್ ಆರ್., ಐಪಿಎಸ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ನಗರದಲ್ಲಿ ಸೋಮವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಚೇತನ್ ಆರ್. ಅವರು ಪಶ್ಚಿಮ ವಲಯದ ಡಿಐಜಿ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡರು.
ಅಧಿಕಾರ ಸ್ವೀಕರಿಸಿದ ಬಳಿಕ ವಲಯ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಅವರು, ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ನಿಯಂತ್ರಣ, ಪೊಲೀಸ್ ಇಲಾಖೆಯ ಕಾರ್ಯಚಟುವಟಿಕೆಗಳು ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.
ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
























