tamanvi
ಪ್ರಚಲಿತ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ.

ಅಖಿಲ ಕರ್ನಾಟಕ ಹಿರಿಯರ ಸೇಪ್ರತಿಷ್ಠಾನ (ರಿ) ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಚಾರ್ಯ  ಪ್ರೊ.ವೇದವ್ಯಾಸ ರಾಮಕುಂಜ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆ ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಚಾರ್ಯ  ಪ್ರೊ.ವೇದವ್ಯಾಸ ರಾಮಕುಂಜ  ಇವರ ನಿವಾಸದಲ್ಲಿ ಜರಗಿತು. 

ಪ್ರತಿಷ್ಠಾನದ ಅಧ್ಯಕ್ಷ  ಕೆಯ್ಯೂರು ನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು.   ಪ್ರತಿ ತಾಲೂಕು ಘಟಕದ ಪುನಾರಚನೆ,ಕೇಂದ್ರ ಸಮಿತಿಯ ಸಭೆಗೆ ಗೈರಾಗುತ್ತಿರುವ ಪದಾಧಿಕಾರಿಗಳ ಬದಲಾವಣೆ,ಕೇಂದ್ರ ಸಮಿತಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ, ಡಿಸೆಂಬರ್ ನಲ್ಲಿ ಜರಗುವ ತೃತೀಯ ವಾರ್ಷಿಕೋತ್ಸವ, ತಾಲೂಕ ಘಟಕದ ಅಧ್ಯಕ್ಷ  ಮತ್ತು ಕಾರ್ಯದರ್ಶಿ ಕೇಂದ್ರಸಮಿತಿಯ  ಪ್ರತಿ ತಿಂಗಳ ಸಭೆಯಲ್ಲಿ ಪ್ರತಿನಿಧಿಗಳಾಗಿ  ಹಾಜರಿರುವ ಅಗತ್ಯದ ಬಗ್ಗೆ ಚರ್ಚಿಸಲಾಯಿತು.

 ಪ್ರತಿಷ್ಠಾನದ ಗೌರವಾಧ್ಯಕ್ಷ  ಪ್ರೊ.ಎ .ವಿ ನಾರಾಯಣ , ಮಹಿಳಾ ಪ್ರತಿನಿಧಿ ಪ್ರೊ.ವತ್ಸಲಾ ರಾಜ್ನಿ,ಸಹ ಸಂಚಾಲಕ ಭಾಸ್ಕರ ಬಾರ್ಯ, ಅನಾರು ಕೃಷ್ಣಶರ್ಮ, ಗುಂಡ್ಯಡ್ಕ ಈಶ್ವರ ಭಟ್, ಚಂದ್ರಶೇಖರ ಆಳ್ವ ಪಡುಮಲೆ, ಭವಾನಿ ಶಂಕರ ಶೆಟ್ಟಿ ಪುತ್ತೂರು, ಜಯಾನಂದ ಪೆರಾಜೆ, ಉದಯಶಂಕರ ರೈ ಪುಣಚ, ರಾಜಮಣಿ ರಾಮಕುಂಜ ಬಂಟ್ವಾಳ, ಸೀತಾರಾಮ.ಕೆ, ಸೋಮನಾಥ ಬೇಕಲ್, ಚಂದ್ರಕಲಾ ಎಸ್‌.ಬಿ ಭಾಗವಹಿಸಿದ್ದರು.

ಉಪಾಧ್ಯಕ್ಷ ಲೋಕೇಶ್ ಹೆಗ್ಡೆ ಸ್ವಾಗತಿಸಿ ಪ್ರೊ. ವೇದವ್ಯಾಸ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…