tamanvi
ಪ್ರಚಲಿತಸ್ಥಳೀಯ

ಬೆಳ್ಳಾರೆ ಪೇಟೆಯಲ್ಲಿ ಆಡಿನ ಮಂದೆ: ಮಾಲಕರಿಗೆ ದಂಡ! | ಸಾಕು ಪ್ರಾಣಿಗಳ ಮಾಲಕರಿಗೂ ನೀಡಲಾಗಿದೆ ಎಚ್ಚರಿಕೆ!!

ಸಾಕು ಪ್ರಾಣಿಗಳ ಮಾಲಕರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಲು ಬೆಳ್ಳಾರೆ ಗ್ರಾಮ ಪಂಚಾಯತ್‌ ಮುಂದಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಸಾಕು ಪ್ರಾಣಿಗಳ ಮಾಲಕರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಲು ಬೆಳ್ಳಾರೆ ಗ್ರಾಮ ಪಂಚಾಯತ್‌ ಮುಂದಾಗಿದೆ.

ಸಾಕುಪ್ರಾಣಿಗಳನ್ನು ಬೆಳ್ಳಾರೆ ಪೇಟೆಯಲ್ಲಿ ಯಾವುದೇ ಕಾರಣಕ್ಕೂ ಅಲೆದಾಡಲು ಬಿಡದಂತೆ ಗ್ರಾ.ಪಂ. ಸೂಚನೆ ನೀಡಿತ್ತು. ಆದರೆ ನಿಯಮವನ್ನು ಉಲ್ಲಂಘಿಸಿ ಆಡುಗಳನ್ನು ಬಿಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ಗ್ರಾಮ ಪಂಚಾಯತ್‌ ಗೆ ದೂರು ಸಲ್ಲಿಕೆಯಾಗಿತ್ತು. ಇದೀಗ ನಿಯಮವನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮಕ್ಕೆ ಆಡಳಿತ ಮುಂದಾಗಿದೆ. ಪೇಟೆಗೆ ಬಿಟ್ಟ ಆಡುಗಳನ್ನು ಗ್ರಾ.ಪಂ. ಕಟ್ಟಿ ಹಾಕಿ ಆಡಿನ ಮಾಲಕರಿಗೆ ದಂಡ ವಿಧಿಸಲಾಗಿದೆ. ಮುಂದೆಯೂ ಸೂಚನೆ ಉಲ್ಲಂಘಿಸುವುದು ಕಂಡು ಬಂದಲ್ಲಿ ದಂಡದ ಮೊತ್ತವನ್ನು ಇನ್ನಷ್ಟು ಹೆಚ್ಚಳ ಮಾಡಲಾಗುತ್ತದೆ ಎಂಬ ಎಚ್ಚರಿಕೆಯನ್ನು ಗ್ರಾ.ಪಂ. ನೀಡಿದೆ.

ಈ ಮೊದಲೇ ಪೇಟೆಯಲ್ಲಿ ಆಡುಗಳನ್ನು ಬಿಡದಂತೆ ಸೂಚನೆ ನೀಡಲಾಗಿತ್ತಾದರೂ, ಇದನ್ನು ಮೀರಿ ಮಾಲಕರು ಆಡನ್ನು ಪೇಟೆಗೆ ಬಿಟ್ಟಿದ್ದು, ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು. ಅದರಂತೆ ಪೇಟೆಗೆ ಬಿಟ್ಟಿದ್ದ ಆಡನ್ನು ಕಟ್ಟಿ ಹಾಕಿ ಮಾಲಕರನ್ನು ಕರೆಸಿ ಅವರಿಗೆ ಮುಂದೆ ಆಡನ್ನು ಬಿಡದಂತೆ ಸೂಚಿಸಿ ದಂಡ ವಿಧಿಸಿ, ಆಡನ್ನು ಬಿಟ್ಟು ಕೊಡಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಹೀಗೆಯೇ ಆಡನ್ನು ಪೇಟೆಗೆ ಬಿಡುತ್ತಿದ್ದರೆ ದಂಡದ ಮೊತ್ತ ಹೆಚ್ಚುಗೊಳಿಸಲಾಗುವುದು. ಇದರ ಬಗ್ಗೆ ಗಮನ ಹರಿಸಬೇಕೆಂದು ಆಡಿನ ಮಾಲಕರಿಗೆ ಅಧಿಕಾರಿಗಳು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

1 of 167