ಪ್ರಚಲಿತ

ವಯಸ್ಸು ಧೃಡೀಕರಣಕ್ಕೆ ಆಧಾರ್‌ ಸೂಕ್ತ ದಾಖಲೆಯಲ್ಲ: ಮಹತ್ವದ ತೀರ್ಪು ನೀಡಿದ ಸುಪ್ರೀಂಕೋರ್ಟ್!!

tv clinic
ವ್ಯಕ್ತಿಯ ವಯಸ್ಸನ್ನು ಧೃಡೀಕರಿಸಲು ಆಧಾ‌ರ್ ಕಾರ್ಡ್ ಸೂಕ್ತ ದಾಖಲೆ ಅಲ್ಲ ಎಂದು ಸುಪ್ರೀಂ ಕೊರ್ಟ್ ಮಹತ್ವದ ತೀರ್ಪು ನೀಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ವ್ಯಕ್ತಿಯ ವಯಸ್ಸನ್ನು ಧೃಡೀಕರಿಸಲು ಆಧಾ‌ರ್ ಕಾರ್ಡ್ ಸೂಕ್ತ ದಾಖಲೆ ಅಲ್ಲ ಎಂದು ಸುಪ್ರೀಂ ಕೊರ್ಟ್ ಮಹತ್ವದ ತೀರ್ಪು ನೀಡಿದೆ.

ಈ ಮೂಲಕ ರಸ್ತೆ ಅಪಘಾತದ ವೇಳೆ ಮೃತಪಟ್ಟವನಿಗೆ ಪರಿಹಾರ ಒದಗಿಸುವ ಸಲುವಾಗಿ ಅವನ ವಯಸ್ಸು ನಿರ್ಧರಿಸಲು ಆಧಾ‌ರ್ ಕಾರ್ಡನ್ನು ಆಧಾರವಾಗಿಟ್ಟುಕೊಂಡ ಪಂಜಾಬ್‌ ಹಾಗೂ ಹರ್ಯಾಣದ ಹೈ ಕೊರ್ಟ್ ತೀರ್ಪನ್ನು ರದ್ದುಗೊಳಿಸಿದೆ.

akshaya college

ವ್ಯಕ್ತಿಯ ವಯಸ್ಸನ್ನು ಧೃಡೀಕರಿಸಲು ಆಧಾ‌ರ್ ಕಾರ್ಡ್ ಸೂಕ್ತ ದಾಖಲೆ ಅಲ್ಲ ಎಂದು ಸುಪ್ರೀಂ ಕೊರ್ಟ್ ಮಹತ್ವದ ತೀರ್ಪು ನೀಡಿದೆ.

ಈ ಮೂಲಕ ರಸ್ತೆ ಅಪಘಾತದ ವೇಳೆ ಮೃತಪಟ್ಟವನಿಗೆ ಪರಿಹಾರ ಒದಗಿಸುವ ಸಲುವಾಗಿ ಅವನ ವಯಸ್ಸು ನಿರ್ಧರಿಸಲು ಆಧಾರ್ ಕಾರ್ಡನ್ನು ಆಧಾರವಾಗಿಟ್ಟುಕೊಂಡ ಪಂಜಾಬ್‌ ಹಾಗೂ ಹರ್ಯಾಣದ ಹೈ ಕೊರ್ಟ್ ತೀರ್ಪನ್ನು ರದ್ದುಗೊಳಿಸಿದೆ.

‘ಮೃತನ ವಯಸ್ಸನ್ನು ಬಾಲಾಪರಾಧಿ ನ್ಯಾಯ ಕಾಯ್ದೆ 2015ರ ಸೆಕ್ಷನ್ 94ರ ಪ್ರಕಾರ ಆತನ ಶಾಲಾ ವರ್ಗಾವಣೆ ಪ್ರಮಾಣಪತ್ರದಲ್ಲಿ ನಮೂದಿಸಲಾಗಿರುವ ಜನನ ದಿನಾಂಕದ ಅನುಸಾರ ನಿರ್ಧರಿಸಬೇಕು’ ಎಂದು ನ್ಯಾ | ಸಂಜಯ್ ಕರೋಲ್ ಹಾಗೂ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠ ಹೇಳಿದೆ.

ಅಂತೆಯೇ, ‘2018 ರಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿದ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳಿರುವಂತೆ, ಆಧಾ‌ರ್ ಕಾರ್ಡ್ ಬಳಸಿ ವ್ಯಕ್ತಿಯ ಗುರುತನ್ನು ಸ್ಥಾಪಿಸಬಹುದೇ ಹೊರತು, ಅದು ಹುಟ್ಟಿದ ದಿನಾಂಕದ ಪುರಾವೆ ಅಲ್ಲ’ ಎಂದು ಪೀಠ ಹೇಳಿದೆ. ಅಲ್ಲದೆ ಹೈಕೋರ್ಟ್ ಆದೇಶಕ್ಕೂ ಮುನ್ನ ಮೃತನ ವಯಸ್ಸು ಪತ್ತೆಗೆ ಶಾಲಾ ವರ್ಗಾವಣೆ ಪ್ರಮಾಣಪತ್ರ ಬಳಸಿದ ಮೋಟಾರ್ ಅಪಘಾತ ಕ್ರೈಮ್ಸ್ ಟ್ರಿಬ್ಯೂನಲ್‌ನ ನಡೆಯನ್ನು ಎತ್ತಿಹಿಡಿದಿದೆ.

ಆಗಿದ್ದೇನು?:

ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ. ಆತನ ಶಾಲಾ ವರ್ಗಾವಣೆ ಪ್ರಮಾಣಪತ್ರದಲ್ಲಿದ್ದ ಜನ್ಮ ದಿನಾಂಕದನ್ವಯ ರೋಕ್‌ತಕ್‌ನ ಮೋಟಾರ್ ಅಪಘಾತ ಕ್ರೈಮ್ಸ್ ಟ್ರಿಬ್ಯೂನಲ್ ಮೃತನ ಪರಿವಾರಕ್ಕೆ 19.35 ಲಕ್ಷ ರು. ಪರಿಹಾರ ನೀಡಿತ್ತು. ಆದರೆ ಆಧಾರ್‌ನಲ್ಲಿದ್ದ ವಯಸ್ಸನ್ನು ಪರಿಗಣಿಸಿದ ಹೈಕೋರ್ಟ್, ಪರಿಹಾರವನ್ನು 9.22 ಲಕ್ಷಕ್ಕೆ ಇಳಿಸಿತ್ತು. ಇದರ ವಿರುದ್ಧ ಮೃತನ ಸಂಬಂಧಿಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೈತ್ರಿ ಎಲೆಕ್ಟ್ರಿಕ್ ಕಂ. ವತಿಯಿಂದ ಎಲೆಕ್ಟ್ರಿಷಿಯನ್ಸ್ ಗಳಿಗೆ ಅರಿತು ಕೊಳ್ಳಿ- ಹ್ಯಾವೆಲ್ಸ್ ಫ್ಯಾಕ್ಟರಿ ಭೇಟಿ

ಪುತ್ತೂರು: ಇಲ್ಲಿನ ಮೈತ್ರಿ ಇಲೆಕ್ಟ್ರಿಕ್ ಕಂ. ಇದರ ಪ್ರಮುಖ ಗ್ರಾಹಕ ಇಲೆಕ್ಟ್ರೀಷಿಯನ್’ಗಳಿಗೆ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…