ಪ್ರಚಲಿತ

ಉಳ್ಳಾಲ ಗ್ಯಾಸ್ ಸ್ಫೋಟ ಪ್ರಕರಣ: ಏರುತ್ತಿದೆ ಸಾವಿನ ಸಂಖ್ಯೆ!! ಇಹಲೋಕ ತ್ಯಜಿಸಿದ ಮುಗ್ಧ ಕಂದಮ್ಮ!!

ಗ್ಯಾಸ್‌ ಸಿಲಿಂಡ‌ರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡ ಪ್ರಕರಣದಲ್ಲಿ ಬಾಲಕಿಯೊಬ್ಬಳು ಗುರುವಾರ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೇರಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ಡಿ.8ರಂದು ಮಂಜನಾಡಿ ಗ್ರಾಮದ ಖಂಡಿಕೆ ಎಂಬಲ್ಲಿ ಗ್ಯಾಸ್‌ ಸಿಲಿಂಡ‌ರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡ ಪ್ರಕರಣದಲ್ಲಿ ಬಾಲಕಿಯೊಬ್ಬಳು ಗುರುವಾರ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೇರಿದೆ.

akshaya college

ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ಗ್ಯಾಸ್‌ ಸ್ಪೋಟಗೊಂಡು ಇಡೀ ಮನೆ ಹೊತ್ತಿಯುರಿದು, ಮನೆಯೊಳಗಿದ್ದ ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ, ಮಝಿಯಾ, ಮಾಯಿಝ ಎಂಬವರು ಗಂಭೀರ ಗಾಯಗಳೊಂದಿಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಡಿ.13ರಂದು ತಾಯಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುರುವಾರ ಬಾಲಕಿ ಮೆಹದಿಯಾ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಉಳಿದ ಮಕ್ಕಳ ಚಿಕಿತ್ಸೆ ಮುಂದುವರಿದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅನಧಿಕೃತ ಶಾಲೆಗಳ ಸಂಖ್ಯೆ ಬಹಿರಂಗಪಡಿಸಿದ ಸರ್ಕಾರ: ಕಠಿಣ ಕ್ರಮದ ಸೂಚನೆ | ದ.ಕ., ಉಡುಪಿಯಲ್ಲೂ ಇದೆ ಅಕ್ರಮ ಶಾಲೆಗಳು!!

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಶಾಲೆಗಳ ಸಂಖ್ಯೆಯನ್ನು‌ ಸರಕಾರ ಬಹಿರಂಗಪಡಿ ಸಿದ್ದು, ಶಾಲಾ…

ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ | ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪುತ್ತೂರಿನ ನ್ಯಾಯಾಧೀಶರು

ಪುತ್ತೂರು: ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…