Gl harusha
ಆರೋಗ್ಯಪ್ರಚಲಿತ

ಚೀನಾದಲ್ಲಿ ಹರಡುತ್ತಿದೆ ಕೊರೊನಕ್ಕಿಂತಲೂ ಅಪಾಯಕಾರಿಯಾದ ವೈರಸ್

ಇಡೀ ಜಗತ್ತಿಗೆ ಕೊರೊನ ವೈರಸ್ ಹರಡಿ ತತ್ತರಿಸುವಂತೆ ಮಾಡಿದ್ದ ಚೀನಾದಲ್ಲಿ ಐದು ವರ್ಷಗಳ ಬಳಿಕ ಇದೇ ಮಾದರಿಯ ಇನ್ನೊಂದು ವೈರಸ್ ಕಾಣಿಸಿಕೊಂಡಿದೆ ಎಂಬ ಸುದ್ದಿಯೊಂದು ಸೋಷಿಯಲ್ ಮೀಡಿಯಾಗಳಲ್ಲಿ ಬಿರುಗಾಳಿಯಂತೆ ಹರಿದಾಡುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೀಜಿಂಗ್ : ಇಡೀ ಜಗತ್ತಿಗೆ ಕೊರೊನ ವೈರಸ್ ಹರಡಿ

Pashupathi
akshaya college

ತತ್ತರಿಸುವಂತೆ ಮಾಡಿದ್ದ ಚೀನಾದಲ್ಲಿ ಐದು ವರ್ಷಗಳ ಬಳಿಕ ಇದೇ ಮಾದರಿಯ ಇನ್ನೊಂದು ವೈರಸ್ ಕಾಣಿಸಿಕೊಂಡಿದೆ ಎಂಬ ಸುದ್ದಿಯೊಂದು ಸೋಷಿಯಲ್ ಮೀಡಿಯಾಗಳಲ್ಲಿ ಬಿರುಗಾಳಿಯಂತೆ ಹರಿದಾಡುತ್ತಿದೆ. ಎಕ್ಸ್ ಫೇಸ್‌ಬುಕ್, ವಾಟ್ಸಪ್, ಟೆಲಿಗ್ರಾಂ, ಇನ್‌ಸ್ಟಾಗ್ರಾಂ ಸೇರಿದಂತೆ ಎಲ್ಲ ಸೋಷಿಯಲ್ ಮೀಡಿಯಾಗಳಲ್ಲಿ ಈ ವೈರಸ್ ಕುರಿತು ಚರ್ಚೆಯಾಗುತ್ತಿದೆ. ಕೆಲವರು ಆಸ್ಪತ್ರೆಗಳು ತುಂಬಿ ತುಳುಕುತ್ತಿರುವ, ಸ್ಮಶಾನಗಳಲ್ಲಿ ಸಾಲಾಗಿ ಹೆಣಗಳನ್ನು ಇಟ್ಟಿರುವ ವೀಡಿಯೊಗಳನ್ನು ಹಂಚಿಕೊಂಡು ಇದು ಕೊರೊನ ಹಾವಳಿಯ ಐದು ವರ್ಷದ ಬಳಿಕ ಚೀನಾದಲ್ಲಿ ಇನ್ನೊಂದು ವೈರಸ್‌ನಿಂದ ಉಂಟಾದ ಪರಿಸ್ಥಿತಿ ಎಂದು ಬರೆದುಕೊಂಡಿದ್ದಾರೆ. ಆದರೆ ಈ ವೀಡಿಯೊಗಳ ಸಾಚಾತನ ಇನ್ನೂ ದೃಢಪಟ್ಟಿಲ್ಲ.

ಇನ್‌ಫ್ಲುಯೆನ್ಸ್ ಎ, ಮೈಕೊಪ್ಲಾಸ್ಮನ್ಯುಮೊನಿಯ ಜೊತೆಗೆ ಎಚ್‌ಎಂಪಿವಿ (ಹೂಮನ್ ಮೆಟಾನ್ಯುಮೊವೈರಸ್ HMPV) ಎಂಬ ಹೊಸತಳಿಯ ವೈರಸ್ ಒಂದು ಚೀನಾದಲ್ಲಿ ಏಕಾಏಕಿ ಹಬ್ಬಿದೆ. ಇದರಿಂದಾಗಿ ಚೀನಾದ ಜನ ದಂಡುದಂಡಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ವೀಡಿಯೋಗಳು ಎಲ್ಲೆಡೆ ವೈರಲ್ ಆಗಿವೆ. ಕೆಲವರು, ಆಸ್ಪತ್ರೆಗಳು ಮತ್ತು ಸ್ಮಶಾನಗಳು ತುಂಬಿಹೋಗಿವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಜನರು ಆಸ್ಪತ್ರೆಗಳಲ್ಲಿ ಕಿಕ್ಕಿರಿದು ತುಂಬಿರುವ ವೀಡಿಯೊಗಳು ಹರಿದಾಡುತ್ತಿವೆ. ಚೀನಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಎಂದು ಕೆಲವರು ಹೇಳಿಕೊಂಡಿದ್ದಾರೆ. ಆದರೆ ಈ ಸುದ್ದಿ ಇನ್ನೂ ದೃಢಪಟ್ಟಿಲ್ಲ. HMPV ರೋಗಲಕ್ಷಣ ಕೋವಿಡ್‌ನಂತೆಯೇ ಇದೆ. ಆದರೆ ಕೋವಿಡ್‌ಗಿಂತಲೂ ಇದು ಅಪಾಯಕಾರಿಯಾಗಿದೆ.

ಚೀನಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಎಂದು ಕೆಲವರು ಹೇಳಿಕೊಂಡಿದ್ದಾರೆ. ಆದರೆ ಈ ಸುದ್ದಿ ಇನ್ನೂ ದೃಢಪಟ್ಟಿಲ್ಲ. HMPV ರೋಗಲಕ್ಷಣ ಕೋವಿಡ್‌ನಂತೆಯೇ ಇದೆ. ನಿರ್ದಿಷ್ಟವಾಗಿ ವಯಸ್ಸಾದವರು ಮತ್ತು ಮಕ್ಕಳನ್ನು ಹೆಚ್ಚು ಆದರೆ ಕೋವಿಡ್‌ಗಿಂತಲೂ ಇದು ಅಪಾಯಕಾರಿಯಾಗಿದೆ.

ಚೀನಾದ ರೋಗ ನಿಯಂತ್ರಣ ಪ್ರಾಧಿಕಾರ ಈ ಹೊಸ ವೈರಸ್ ಸೃಷ್ಟಿಯಾಗಿರುವುದನ್ನು ನಿರಾಕರಿಸಿದ್ದು, ಚಳಿಗಾಲದಲ್ಲಿ ಜ್ವರದಂಥ ರೋಗಗಳು ಜನರಲ್ಲಿ ಕಾಣಿಸಿಕೊಳ್ಳುತ್ತಿರುವುದು ಸಾಮಾನ್ಯ ಹೀಗಾಗಿ ಜನರು ಆಸ್ಪತ್ರೆಗಳಿಗೆ ಧಾವಿಸುತ್ತಿದ್ದಾರೆ. ಆರೋಗ್ಯ ಇಲಾಖೆ ಪರಿಸ್ಥಿತಿಯ ಮೇಲೆ ಸೂಕ್ಷ್ಮನಿಗಾ ಇಟ್ಟಿದೆ ಎಂದು ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆ ಇನ್ನೂ ಈ ವೈರಸ್ ಬಗ್ಗೆ ಹೇಳಿಕೆ ನೀಡಿಲ್ಲ.

2019ರಲ್ಲಿ ಕೊರೊನ ವೈರಸ್ ಮೊದಲು ಚೀನದಲ್ಲಿ ಕಾಣಿಸಿಕೊಂಡು ಬಳಿಕ ಇಡೀ ಜಗತ್ತಿಗೆ ಹರಡಿತ್ತು. ಆದರೆ ಇಂದಿಗೂ ಚೀನಾ ಕೊರೊನ ವೈರಸ್ ತಾನು ಹರಡಿರುವುದನ್ನು ಒಪ್ಪಿಕೊಂಡಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಸ್ಲಿಂ ಯುವಕನನ್ನು ಹೊರಹಾಕಿ ಎಂದ ಸಚಿವ ಗುಂಡೂರಾವ್! ಮಾಧ್ಯಮದೊಂದಿಗೆ ಮಾತನಾಡಿ ತನ್ನ ಅಳಲು ತೋಡಿಕೊಂಡ ಯುವಕ!

ಸುದ್ದಿಗೋಷ್ಠಿ ನಡೆಯುತ್ತಿರುವ ನಡುವೆಯೇ ತನ್ನ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಯುವಕನೋರ್ವನನ್ನು…

ಉಪ್ಪಿನಂಗಡಿ ಮುಖ್ಯರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮಂಜ ಬೈದ್ಯ ಹೆಸರು | ಶಾಸಕ ಅಶೋಕ್ ರೈ ಘೋಷಣೆ

ಬಿಲ್ಲವ ಸಮುದಾಯಕ್ಕೆ ಸೇರಿದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಹುತಾತ್ಮರಾದ ಉಪ್ಪಿನಂಗಡಿ…

ಜಾರುಬಂಡಿಯಲ್ಲ; ಇದು ಹೆದ್ದಾರಿ ಸಂಪರ್ಕದ ಕೊಂಡಿ!! ಆರ್ಯಾಪು ಗ್ರಾಪಂ ವ್ಯಾಪ್ತಿಯ, ಜಿಪಂ ರಸ್ತೆಯ ದುಸ್ಥಿತಿಗೊಂದು ಹಿಡಿಶಾಪ!

ಸಂಪ್ಯದಿಂದ ದೇವಸ್ಯ - ಒಳತ್ತಡ್ಕಕ್ಕೆ ಸಮೀಪದಿಂದ ಸಂಪರ್ಕಿಸುವ ಬಳಸು ದಾರಿ ಸಂಪ್ಯ - ಕೋಟ್ಲಾರ್ -…