tamanvi
ಆರೋಗ್ಯಪ್ರಚಲಿತ

ಚೀನಾದಲ್ಲಿ ಹರಡುತ್ತಿದೆ ಕೊರೊನಕ್ಕಿಂತಲೂ ಅಪಾಯಕಾರಿಯಾದ ವೈರಸ್

ಇಡೀ ಜಗತ್ತಿಗೆ ಕೊರೊನ ವೈರಸ್ ಹರಡಿ ತತ್ತರಿಸುವಂತೆ ಮಾಡಿದ್ದ ಚೀನಾದಲ್ಲಿ ಐದು ವರ್ಷಗಳ ಬಳಿಕ ಇದೇ ಮಾದರಿಯ ಇನ್ನೊಂದು ವೈರಸ್ ಕಾಣಿಸಿಕೊಂಡಿದೆ ಎಂಬ ಸುದ್ದಿಯೊಂದು ಸೋಷಿಯಲ್ ಮೀಡಿಯಾಗಳಲ್ಲಿ ಬಿರುಗಾಳಿಯಂತೆ ಹರಿದಾಡುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೀಜಿಂಗ್ : ಇಡೀ ಜಗತ್ತಿಗೆ ಕೊರೊನ ವೈರಸ್ ಹರಡಿ

ತತ್ತರಿಸುವಂತೆ ಮಾಡಿದ್ದ ಚೀನಾದಲ್ಲಿ ಐದು ವರ್ಷಗಳ ಬಳಿಕ ಇದೇ ಮಾದರಿಯ ಇನ್ನೊಂದು ವೈರಸ್ ಕಾಣಿಸಿಕೊಂಡಿದೆ ಎಂಬ ಸುದ್ದಿಯೊಂದು ಸೋಷಿಯಲ್ ಮೀಡಿಯಾಗಳಲ್ಲಿ ಬಿರುಗಾಳಿಯಂತೆ ಹರಿದಾಡುತ್ತಿದೆ. ಎಕ್ಸ್ ಫೇಸ್‌ಬುಕ್, ವಾಟ್ಸಪ್, ಟೆಲಿಗ್ರಾಂ, ಇನ್‌ಸ್ಟಾಗ್ರಾಂ ಸೇರಿದಂತೆ ಎಲ್ಲ ಸೋಷಿಯಲ್ ಮೀಡಿಯಾಗಳಲ್ಲಿ ಈ ವೈರಸ್ ಕುರಿತು ಚರ್ಚೆಯಾಗುತ್ತಿದೆ. ಕೆಲವರು ಆಸ್ಪತ್ರೆಗಳು ತುಂಬಿ ತುಳುಕುತ್ತಿರುವ, ಸ್ಮಶಾನಗಳಲ್ಲಿ ಸಾಲಾಗಿ ಹೆಣಗಳನ್ನು ಇಟ್ಟಿರುವ ವೀಡಿಯೊಗಳನ್ನು ಹಂಚಿಕೊಂಡು ಇದು ಕೊರೊನ ಹಾವಳಿಯ ಐದು ವರ್ಷದ ಬಳಿಕ ಚೀನಾದಲ್ಲಿ ಇನ್ನೊಂದು ವೈರಸ್‌ನಿಂದ ಉಂಟಾದ ಪರಿಸ್ಥಿತಿ ಎಂದು ಬರೆದುಕೊಂಡಿದ್ದಾರೆ. ಆದರೆ ಈ ವೀಡಿಯೊಗಳ ಸಾಚಾತನ ಇನ್ನೂ ದೃಢಪಟ್ಟಿಲ್ಲ.

ಇನ್‌ಫ್ಲುಯೆನ್ಸ್ ಎ, ಮೈಕೊಪ್ಲಾಸ್ಮನ್ಯುಮೊನಿಯ ಜೊತೆಗೆ ಎಚ್‌ಎಂಪಿವಿ (ಹೂಮನ್ ಮೆಟಾನ್ಯುಮೊವೈರಸ್ HMPV) ಎಂಬ ಹೊಸತಳಿಯ ವೈರಸ್ ಒಂದು ಚೀನಾದಲ್ಲಿ ಏಕಾಏಕಿ ಹಬ್ಬಿದೆ. ಇದರಿಂದಾಗಿ ಚೀನಾದ ಜನ ದಂಡುದಂಡಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ವೀಡಿಯೋಗಳು ಎಲ್ಲೆಡೆ ವೈರಲ್ ಆಗಿವೆ. ಕೆಲವರು, ಆಸ್ಪತ್ರೆಗಳು ಮತ್ತು ಸ್ಮಶಾನಗಳು ತುಂಬಿಹೋಗಿವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಜನರು ಆಸ್ಪತ್ರೆಗಳಲ್ಲಿ ಕಿಕ್ಕಿರಿದು ತುಂಬಿರುವ ವೀಡಿಯೊಗಳು ಹರಿದಾಡುತ್ತಿವೆ. ಚೀನಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಎಂದು ಕೆಲವರು ಹೇಳಿಕೊಂಡಿದ್ದಾರೆ. ಆದರೆ ಈ ಸುದ್ದಿ ಇನ್ನೂ ದೃಢಪಟ್ಟಿಲ್ಲ. HMPV ರೋಗಲಕ್ಷಣ ಕೋವಿಡ್‌ನಂತೆಯೇ ಇದೆ. ಆದರೆ ಕೋವಿಡ್‌ಗಿಂತಲೂ ಇದು ಅಪಾಯಕಾರಿಯಾಗಿದೆ.

ಚೀನಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಎಂದು ಕೆಲವರು ಹೇಳಿಕೊಂಡಿದ್ದಾರೆ. ಆದರೆ ಈ ಸುದ್ದಿ ಇನ್ನೂ ದೃಢಪಟ್ಟಿಲ್ಲ. HMPV ರೋಗಲಕ್ಷಣ ಕೋವಿಡ್‌ನಂತೆಯೇ ಇದೆ. ನಿರ್ದಿಷ್ಟವಾಗಿ ವಯಸ್ಸಾದವರು ಮತ್ತು ಮಕ್ಕಳನ್ನು ಹೆಚ್ಚು ಆದರೆ ಕೋವಿಡ್‌ಗಿಂತಲೂ ಇದು ಅಪಾಯಕಾರಿಯಾಗಿದೆ.

ಚೀನಾದ ರೋಗ ನಿಯಂತ್ರಣ ಪ್ರಾಧಿಕಾರ ಈ ಹೊಸ ವೈರಸ್ ಸೃಷ್ಟಿಯಾಗಿರುವುದನ್ನು ನಿರಾಕರಿಸಿದ್ದು, ಚಳಿಗಾಲದಲ್ಲಿ ಜ್ವರದಂಥ ರೋಗಗಳು ಜನರಲ್ಲಿ ಕಾಣಿಸಿಕೊಳ್ಳುತ್ತಿರುವುದು ಸಾಮಾನ್ಯ ಹೀಗಾಗಿ ಜನರು ಆಸ್ಪತ್ರೆಗಳಿಗೆ ಧಾವಿಸುತ್ತಿದ್ದಾರೆ. ಆರೋಗ್ಯ ಇಲಾಖೆ ಪರಿಸ್ಥಿತಿಯ ಮೇಲೆ ಸೂಕ್ಷ್ಮನಿಗಾ ಇಟ್ಟಿದೆ ಎಂದು ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆ ಇನ್ನೂ ಈ ವೈರಸ್ ಬಗ್ಗೆ ಹೇಳಿಕೆ ನೀಡಿಲ್ಲ.

2019ರಲ್ಲಿ ಕೊರೊನ ವೈರಸ್ ಮೊದಲು ಚೀನದಲ್ಲಿ ಕಾಣಿಸಿಕೊಂಡು ಬಳಿಕ ಇಡೀ ಜಗತ್ತಿಗೆ ಹರಡಿತ್ತು. ಆದರೆ ಇಂದಿಗೂ ಚೀನಾ ಕೊರೊನ ವೈರಸ್ ತಾನು ಹರಡಿರುವುದನ್ನು ಒಪ್ಪಿಕೊಂಡಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…