tamanvi
ಪ್ರಚಲಿತ

ಅವಳಿ ಮಕ್ಕಳ ಸಹಿತ ಯುವತಿಯನ್ನು ಕೊಲೆಗೈದು ಪರಾರಿಯಾಗಿದ್ದ ಮಾಜಿ ಸೈನಿಕರಿಬ್ಬರ ಬಂಧನ| ಕೊಲೆಗೈದು ನೆರೆ ರಾಜ್ಯಕ್ಕೆ ಪರಾರಿಯಾಗಿ ಸಂಸಾರ ನಡೆಸುತ್ತಿದ್ದವರು 19 ವರ್ಷದ ಬಳಿಕ ಸೆರೆ!!

ತಾಯಿ ಮತ್ತು ಆಕೆಯ ನವಜಾತ ಅವಳಿ ಮಕ್ಕಳನ್ನು ಉಸಿರು ಕಟ್ಟಿಸಿ ಕೊಂದು 19 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಮಾಜಿ ಸೈನಿಕರನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ತಾಯಿ ಮತ್ತು ಆಕೆಯ ನವಜಾತ ಅವಳಿ ಮಕ್ಕಳನ್ನು ಉಸಿರು ಕಟ್ಟಿಸಿ ಕೊಂದು 19 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಮಾಜಿ ಸೈನಿಕರನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಕೇರಳದಲ್ಲಿ ನಡೆದಿರುವ ಈ ಕೊಲೆ ಮತ್ತು ಆರೋಪಿಗಳ ಪತ್ತೆ ಕಾರ್ಯ ಯಾವುದೇ ಕ್ರೈಂ ಗ್ರಿಲ್ಲರ್ ಸಿನೇಮಾಕ್ಕೆ ಕಡಿಮೆಯಿಲ್ಲ. ಕಳೆದ ಮೂರು ತಿಂಗಳಿನಿಂದ ಸಿಬಿಐ ಮತ್ತು ಕೇರಳ ಪೊಲೀಸರ ತನಿಖಾ ತಂಡ 10,000ಕ್ಕೂ ಅಧಿಕ ಸಾಮಾಜಿಕ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಜಾಲಾಡಿ ಇಬ್ಬರು ಆರೋಪಿಗಳನ್ನು ಬಲೆಗೆ ಬೀಳಿಸಿಕೊಂಡಿದೆ.

ಕೇರಳದ ಕೊಲ್ಲಂ ಜಿಲ್ಲೆಯ ಅಂಚಲ್ ಸಮೀಪದ ಯೆರಮ್  ಎಂಬಲ್ಲಿ ಬಾಡಿಗೆ ಮನೆಯಲ್ಲಿ 2006ರ ಫೆಬ್ರುವರಿ 10ರಂದು ರಜನಿ ಎಂಬ ಮಹಿಳೆ ಹಾಗೂ ನವಜಾತ ಅವಳಿ ಹೆಣ್ಣು ಮಕ್ಕಳ ಹತ್ಯೆಯಾಗಿತ್ತು. ಅವಳಿ ಮಕ್ಕಳ ಜನ್ಮ ಪ್ರಮಾಣಪತ್ರ ಪಡೆಯಲು ತೆರಳಿದ್ದ ರಜನಿ ತಾಯಿ ಪಂಚಾಯತ್ ಕಚೇರಿಯಿಂದ ಮರಳಿದಾಗ ಮೂರು ಮೃತದೇಹ ಮನೆಯಲ್ಲಿ ಕಂಡುಬಂದಿತ್ತು. ಅಂಚಲ್ ಮೂಲದ ದಿವಿಲ್ ಕುಮಾರ್ ಬಿ ಎಂಬಾತ ಆಗ 28 ವರ್ಷದವನಾಗಿದ್ದು, ಭಾರತೀಯ ಸೇನೆಯ 45 ಎಡಿ ರೆಜಿಮೆಂಟ್‌ನಲ್ಲಿ ಪಠಾಣ್‌ಕೋಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಈತ ರಜನಿ ಜತೆ ಪ್ರೇಮ ಸಂಬಂಧ ಹೊಂದಿದ್ದ ವಿಚಾರ ತನಿಖೆಯಿಂದ ತಿಳಿದು ಬಂದಿತ್ತು. 2006ರ ಜನವರಿ 24ರಂದು ಮದುವೆಗೂ ಮೊದಲೇ ಅವಳಿ ಮಕ್ಕಳು ಜನಿಸಿದ ಬಳಿಕ ಆತ ಮಹಿಳೆಯಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದ. ಅವಿವಾಹಿತ ತಾಯಿ ಕೇರಳ ಮಹಿಳಾ ಆಯೋಗವನ್ನು ಸಂಪರ್ಕಿಸಿದ್ದರು. ಆಗ ಅವಳಿ ಮಕ್ಕಳ ಪಿತೃತ್ವ ಪರೀಕ್ಷೆಯನನ್ನ ನಡೆಸುವಂತೆ ಆಯೋಗ ಆದೇಶ ನೀಡಿತ್ತು. ಇದರಿಂದ ಹತಾಶನಾದ ದಿವಿಲ್ ಕುಮಾರ್, ಹತ್ಯೆಯ ಸಂಚು ರೂಪಿಸಿದ.

ಮದುವೆಗೂ ಮೊದಲೇ ಅವಳಿ ಮಕ್ಕಳು ಜನಿಸಿದ ಬಳಿಕ ಆತ ಮಹಿಳೆಯಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದ.

ಅವಿವಾಹಿತ ತಾಯಿ ಕೇರಳ ಮಹಿಳಾ ಆಯೋಗವನ್ನು

ಸಂಪರ್ಕಿಸಿದ್ದರು. ಆಗ ಅವಳಿ ಮಕ್ಕಳ ಪಿತೃತ್ವ ಪರೀಕ್ಷೆಯನ್ನು ನಡೆಸುವಂತೆ ಆಯೋಗ ಆದೇಶ ನೀಡಿತ್ತು. ಇದರಿಂದ

ಹತಾಶನಾದ ದಿವಿಲ್ ಕುಮಾರ್, ಹತ್ಯೆಯ ಸಂಚು ರೂಪಿಸಿದ್ದ. ದಿವಿಲ್ ಕುಮಾರ್ ಸಹೋದ್ಯೋಗಿ ಕಣ್ಣೂರು ಜಿಲ್ಲೆಯ ಶ್ರೀಕಂಠಪುರಂ ನಿವಾಸಿ ಪಿ.ರಾಜೇಶ್ (33) ಎಂಬಾತ ರಜನಿ ಮತ್ತು ಆಕೆಯ ತಾಯಿ ಜತೆ ಸ್ನೇಹ ಸಂಪಾದಿಸಿ, ರಜನಿಯನ್ನು ವಿವಾಹವಾಗುವಂತೆ ದಿವಿಲ ಕುಮಾರ್‌ನ ಮನವೊಲಿಸುವುದಾಗಿ ಭರವಸೆ ನೀಡಿದ್ದ. ಆದರೆ ಇಬ್ಬರೂ ಸೇರೆ ತನ್ನ ಮತ್ತು ಮಕ್ಕಳ ಹತ್ಯೆಗೆ ಸಂಚು ರೂಪಿಸಿದ ಸಂಗತಿ ಆ ಅಮಾಯಕ ಯುವತಿಗೆ ಗೊತ್ತೇ ಆಗಿರಲಿಲ್ಲ. ಹತ್ಯೆ ಬಳಿಕ ಇಬ್ಬರೂ ತಲೆ ಮರೆಸಿಕೊಂಡಿದ್ದರು.

ಅವರನ್ನು ಹುಡುಕುವ ಪ್ರಯತ್ನ ವಿಫಲವಾಗಿತ್ತು. ಆದರೆ ಇತ್ತೀಚೆಗೆ ದಿವಿಲ್ ಕುಮಾರ್ ಹಾಗೂ ರಾಜೇಶ್ ಪುದುಚೇರಿಯಲ್ಲಿ ವಾಸವಿದ್ದಾರೆ ಎಂಬ ಸುಳಿವು ದೊರಕಿತ್ತು. ನಕಲಿ ಹೆಸರಿನಲ್ಲಿ ಆಧಾರ್ ಕಾರ್ಡ್ ಸೇರಿದಂತೆ ಹೊಸ ದಾಖಲೆಗಳನ್ನು ಪಡೆದಿದ್ದರು. ನಗರದಲ್ಲಿ ಇಬ್ಬರೂ ಶಿಕ್ಷಕಿಯರನ್ನು ವಿವಾಹವಾಗಿ ಮಕ್ಕಳನ್ನೂ ಪಡೆದು ಸಂಸಾರ ಹೊಂದಿದ್ದರು. ಅವರ ಮೇಲೆ ನಿಗಾ ವಹಿಸಿದ ಸಿಬಿಐ ಚೆನ್ನೈ ಘಟಕದ ಸಿಬ್ಬಂದಿ ಶುಕ್ರವಾರ ಇಬ್ಬರನ್ನೂ ಬಂಧಿಸಿ ಕೊಚ್ಚಿಗೆ ಕರೆ ತಂದು ಎರ್ನಾಕುಲಂ ಮುಖ್ಯ ಜ್ಯುಡೀಶಿಯಲ್ ಕೋರ್ಟ್ ಮುಂದೆ ಹಾಜರುಪಡಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…