Gl jewellers
ಪ್ರಚಲಿತ

ಅಂಬಿಕಾ ವಿದ್ಯಾಲಯದಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಕಾರ್ಯಕ್ರಮ | ಡ್ರಗ್ಸ್ ಸೇವನೆ ಮನುಷ್ಯನನ್ನು ವಿನಾಶದೆಡೆಗೆ ಒಯ್ಯುತ್ತದೆ: ಅಶ್ವಿನಿಕೃಷ್ಣ ಮುಳಿಯ

Karpady sri subhramanya
ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಡ್ರಗ್ಸ್ ಮುಕ್ತ ಪುತ್ತೂರು ಹಾಗೂ ಸೈಬರ್ ಕ್ರೈಮ್ ಜಾಗೃತಿ ಎಂಬ ವಿಚಾರದ ಬಗ್ಗೆ ಪುತ್ತೂರಿನ ಜೆಸಿಐ ಸಂಸ್ಥೆಯ ವತಿಯಿಂದ ಗುರುವಾರ ವಿಶೇಷ ಮಾಹಿತಿ ಕಾರ್ಯಕ್ರಮ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಡ್ರಗ್ಸ್ ಮುಕ್ತ ಪುತ್ತೂರು ಹಾಗೂ ಸೈಬರ್ ಕ್ರೈಮ್ ಜಾಗೃತಿ ವಿಶೇಷ ಮಾಹಿತಿ ಕಾರ್ಯಕ್ರಮ ಪುತ್ತೂರಿನ ಜೆಸಿಐ ಸಂಸ್ಥೆಯ ವತಿಯಿಂದ ಗುರುವಾರ ನಡೆಯಿತು.

ಜೆಸಿಐನ ವಲಯ ತರಬೇತುದಾರೆ ಅಶ್ವಿನಿಕೃಷ್ಣ ಮುಳಿಯ ಮಾತನಾಡಿ, ಯುವ ಸಮುದಾಯ ಮಾದಕ ವಸ್ತುಗಳ ಸೇವನೆ ಮತ್ತು ಬಳಕೆಯಿಂದ ದೂರವಿರಲು ಆರೋಗ್ಯಕರ ಅಭ್ಯಾಸಗಳನ್ನು ರೂಢಿ ಮಾಡಿಕೊಳ್ಳಬೇಕು. ಈ ಬಗೆಗೆ ವಿದ್ಯಾರ್ಥಿಗಳಲ್ಲಿ ಮತ್ತು ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು, ಡ್ರಗ್ಸ್  ಬಳಕೆಯಿಂದ ವಕ್ತಿಗಳು ಕತ್ತಲೆಯ ಕೂಪಕ್ಕೆ ಬಿದ್ದು ವಿನಾಶ ಹೊಂದುತ್ತಾರೆ ಎಂದು ತಿಳಿಸಿದರು.

Sampya jathre

ನಮ್ಮ ಪುತ್ತೂರನ್ನು ಮಾದಕ ವಸ್ತು ಬಳಕೆ ಹಾಗೂ ಸೇವನೆಯಿಂದ ಸಂಪೂರ್ಣವಾಗಿ ಮುಕ್ತಗೊಳಿಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸಬೇಕು ಮತ್ತು ಡ್ರಗ್ಸ್ ಮುಕ್ತ ಪುತ್ತೂರನ್ನು ನಿರ್ಮಿಸೋಣ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರಲ್ಲದೆ, ಸಣ್ಣಪುಟ್ಟ ಅನಾರೋಗ್ಯಗಳನ್ನು ಮನೆಮದ್ದುಗಳಿಂದ ನಿವಾರಿಸಿಕೊಳ್ಳಲು ಪ್ರಯತ್ನ ಪಡಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಶಾಲೆಯ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಕ್ಷಾ ಸ್ವಾಗತಿಸಿ, ನಿಧಿ ಯು. ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕುಂಭಮೇಳದಲ್ಲಿ ಕನ್ಯಾಡಿ ಶ್ರೀಗೆ ಮಹಾಮಂಡಲೇಶ್ವರ ಪಟ್ಟಾಭಿಷೇಕ | ನಾಗಾಸಾಧು ಸನ್ಯಾಸಿ ಪರಂಪರೆಯ ಅತ್ಯುನ್ನತ ಹುದ್ದೆ

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ…

ಎಟಿಎಂಗೆ ಹಣಹಾಕಲು ಬಂದ SBI ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು! 93 ಲಕ್ಷ ರೂಪಾಯಿ ದೋಚಿದ ದರೋಡೆಕೋರರು

ಎಸ್ ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣ ಜಮೆ ಮಾಡಲು ಸಿಬ್ಬಂದಿ ಬಂದಿದ್ದರು. ಈ ವೇಳೆ ಬೈಕ್ ಮೇಲೆ ಬಂದ…