tamanvi
ಪ್ರಚಲಿತ

ದ್ವಾರಕಾ ಪ್ರತಿಷ್ಠಾನದಿಂದ ನೆಲಪ್ಪಾಲ್ ಉದ್ಯಾನವನ ದಲ್ಲಿ ‘ನೃತ್ಯೋಲ್ಲಾಸ’ ಉದ್ಘಾಟನೆ

ದ್ವಾರಕಾ ಕಾರ್ಪೊರೇಷನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ ಪುತ್ತೂರು ವತಿಯಿಂದ ನೆಲಪ್ಪಾಲ್ ಉದ್ಯಾನವನದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಫೆ.9ರಂದು ಪುತ್ತೂರು ನಗರಸಭೆ ಸದಸ್ಯ ಜೀವಂಧರ್‌ ಜೈನ್ ಅವರು ಉದ್ಘಾಟಿಸಿ, ಶುಭ ಹಾರೈಸಿದರು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದ್ವಾರಕಾ ಕಾರ್ಪೊರೇಷನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ ಪುತ್ತೂರು ವತಿಯಿಂದ ನೆಲಪ್ಪಾಲ್ ಉದ್ಯಾನವನದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಫೆ.9ರಂದು ಪುತ್ತೂರು ನಗರಸಭೆ ಸದಸ್ಯ ಜೀವಂಧರ್‌ ಜೈನ್ ಅವರು ಉದ್ಘಾಟಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್, ಪುತ್ತೂರು ನಗರಸಭೆ ಅಧ್ಯಕ್ಷ ಲೀಲಾವತಿ ಅಣ್ಣು ನಾಯ್ಕ, ಪುತ್ತೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಪುತ್ತೂರು ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ವಾನ್ ಗಿರೀಶ್ ಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು.

ಗಣ್ಯರನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಕೃತಜ್ಞತಾಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗಣ್ಯರು ಮಾತಾಡುತ್ತಾ, ಪುತ್ತೂರು ನಗರದಲ್ಲಿರುವ ಎಲ್ಲಾ ಉದ್ಯಾನವನಗಳಲ್ಲಿ ಇಂತಹ ಕಾರ್ಯಕ್ರಮಗಳು ನಡೆದು ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಲಿ ಎಂದು ಆಶಿಸುತ್ತಾ ದ್ವಾರಕಾ ಪ್ರತಿಷ್ಠಾನದ ಈ ಕೆಲಸವನ್ನು ಪ್ರಶಂಶಿಸಿದರು.

ಸಭಾ ಕಾರ್ಯಕ್ರಮದ ನಂತರ ಅಂತರಾಷ್ಟ್ರೀಯ ಮಟ್ಟದ ನೃತ್ಯ ಕಲಾವಿದೆ ವಿದುಷಿ ದಿವ್ಯ ಪ್ರಭಾತ್ ಬೆಂಗಳೂರು ಇವರಿಂದ ನೃತ್ಯೋಲ್ಲಾಸ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ನಿರೂಪಣೆ ಮತ್ತು ಸ್ವಾಗತ ಭಾಷಣವನ್ನು ಸಂಸ್ಥೆಯ ಸಿಬ್ಬಂದಿಯಾದ ದುರ್ಗಾ ಗಣೇಶ್‌ ನಡೆಸಿಕೊಟ್ಟರು, ಸಂಸ್ಥೆಯ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ವಂದಿಸಿದರು. ಈ ಸಂದರ್ಭದಲ್ಲಿ ಬಂಧುಗಳು, ಕಲಾಭಿಮಾನಿಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…