ಮತದಾರರನ್ನು ಸೆಳೆಯಲಿರುವ ಸಖಿ, ಸಾಂಪ್ರದಾಯಿಕ, ವಿಶೇಷ ಚೇತನರ, ಯುವ, ಧ್ಯೇಯ ಆಧಾರಿತ ಮತಗಟ್ಟೆಗಳು
ಮಾದರಿ ಮತಗಟ್ಟೆಗಳು ವರ್ಣಮಯ
ಒಟ್ಟು 5 ವಿಷಯಗಳಲ್ಲಿ ಮತಗಟ್ಟೆಗಳನ್ನು ವಿಭಾಗಿಸಲಾಗಿದ್ದು, ಆಯಾಯ ವಿಷಯಗಳಿಗೆ ಸಂಬಂಧಪಟ್ಟ ಚಿತ್ರಗಳನ್ನು ಬಿಡಿಸಲಾಗುತ್ತಿದೆ. ಸಖಿ ಮತಗಟ್ಟೆಗಳಾಗಿ ಸ.ಹಿ.ಪ್ರಾ ಶಾಲೆ ಕಬಕ, ಸ.ಹಿ.ಪ್ರಾ.ಶಾಲೆ ಕೈಕಾರ, ಸ.ಹಿ.ಪ್ರಾ.ಶಾಲೆ ಹಿರೇಬಂಡಾಡಿ, ಸ.ಹಿ.ಪ್ರಾ.ಶಾಲೆ ಬಜತ್ತೂರು, ಸ.ಹಿ.ಪ್ರಾ.ಶಾಲೆ ಸಾಮೆತ್ತಡ್ಕ, ಸಾಂಪ್ರದಾಯಿಕ ಮತಗಟ್ಟೆಯಾಗಿ (ಕಂಬಳ) ಸ.ಹಿ.ಪ್ರಾ.ಶಾಲೆ ಕೋಡಿಂಬಾಡಿ, ಧ್ಯೇಯ ಆಧಾರಿತ ಮತಗಟ್ಟೆಯಾಗಿ ಸ.ಉ.ಹಿ.ಪ್ರಾ.ಶಾಲೆ ಕಾವು, ಯುವಜನ ನಿರ್ವಹಣೆ ಮತಗಟ್ಟೆಯಾಗಿ ಸರ್ವೆ ಸ.ಹಿ.ಪ್ರಾ.ಶಾಲೆ ವರ್ಣಮಯವಾಗಿ ಕಾಣಲಿದೆ.ಮತಕೇಂದ್ರದ ಗೋಡೆಗಳಲ್ಲಿ ಕಲಾಚಿತ್ರಗಳ ಚಿತ್ತಾರ
ವೈವಿಧ್ಯಮಯ ಚಿತ್ರಗಳು ಜನರಿಗೆ ಮತಕೇಂದ್ರಕ್ಕೆ ಆಗಮಿಸುವಾಗ ಕಂಬಳ ಇನ್ನಿತರ ಚಿತ್ತಾರಗಳು ಎದುರುಗೊಳ್ಳಲಿವೆ. ಮಹಿಳಾ ಸಾಧಕಿಯರ ಚಿತ್ರಗಳು, ಪರಿಸರ ರಕ್ಷಣೆಯ ಅರಿವು, ವಿಶೇಷಚೇತನರ ಸಾಧನೆಗಳ ಅವತರಣಿಕೆ ಹೀಗೆ ಒಂದೇ ಎರಡೇ, ನಮ್ಮ ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಮತದಾರರು ಕಣ್ತುಂಬಿಕೊಳ್ಳಬಹುದು. ಇಷ್ಟೇ ಅಲ್ಲದೇ ಮತದಾನದ ವಿಷಯಾಧಾರಿತ ಭಿತ್ತಿಚಿತ್ರಗಳು ನೋಡುಗರ ಕಣ್ಮನಗಳನ್ನು ಸೆಳೆಯಲಿವೆ.
ವಿಧಾನಸಭಾ ಕ್ಷೇತ್ರದ ಸ್ವೀಪ್ ಕಾರ್ಯಕ್ರಗಳ ಮುಖ್ಯಸ್ಥರಾಗಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಹನಮ ರೆಡ್ಡಿ ಅವರ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಅವರ ಮಾರ್ಗದರ್ಶನದಲ್ಲಿ ನುರಿತ ಚಿತ್ರಕಲಾ ಶಿಕ್ಷಕರ ತಂಡ ಚಿತ್ರಬಿಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಕೊಂಬೆಟ್ಟು ಸರಕಾರ ಪದವಿ ಪೂರ್ವ ಕಾಲೇಜಿನ ಚಿತ್ರ ಕಲಾ ಶಿಕ್ಷಕ ಜಗನ್ನಾಥ ಅರಿಯಡ್ಕ, ಕೆಯ್ಯೂರು ಕರ್ನಾಟಕ ಪಬ್ಲಿಕ್ ಶಾಲೆಯ ಚಿತ್ರಕಲಾ ಶಿಕ್ಷಕ ಪ್ರಕಾಶ್ ವಿಟ್ಲ, ನರಿಮೊಗ್ರು ಸಾಂದೀಪನಿ ವಿದ್ಯಾಸಂಸ್ಥೆಯ ಚಿತ್ರಕಲಾ ಶಿಕ್ಷಕ ಸುಚೇತ್ ಎಂ. ಅವರು ಮಾದರಿ ಮತಗಟ್ಟೆಗಳನ್ನು ವರ್ಣಮಯಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ವಿಭಿನ್ನ ಚಿತ್ರಗಳ ಮೂಲಕ ಕಂಗೊಳಿಸಲಿರುವ ಮತಗಟ್ಟೆಗಳು
ಮತಗಟ್ಟೆಗಳ ಗೋಡೆಗಳು ನೈಜ ಚಿತ್ರಗಳಿಂದ ಮೊದಲ್ಗೊಂಡು, ಮಧುಬನಿ ಕಲಾ ಶೈಲಿ, ವರ್ಲಿ ಕಲಾ ಶೈಲಿ, ಕಾರ್ಟೂನ್ ಚಿತ್ರಗಳು, ಅಲಂಕಾರಿಕ ಚಿತ್ರಗಳ ಮೂಲಕ ಕಂಗೊಳಿಸುವ ಕಾರ್ಯವನ್ನು ಚಿತ್ರಕಲಾ ಶಿಕ್ಷಕರು ಮಾಡುತ್ತಿದ್ದಾರೆ.
–ಹನಮ ರೆಡ್ಡಿ, ಕಾರ್ಯನಿರ್ವಾಹಕ ಅಧಿಕಾರಿ ತಾ.ಪಂ. ಪುತ್ತೂರು
Friday, October 18
Trending
- ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅಪಘಾತದಲ್ಲಿ ಮೃತ್ಯು
- ರೋಗಿಗೆ ಸಂಬಂಧ ಪಟ್ಟ ದಾಖಲೆ ಪತ್ರಗಳನ್ನು ನೀಡದ ಆಸ್ಪತ್ರೆಗೆ ಬಿಸಿ ಮುಟ್ಟಿಸಿದ ಗ್ರಾಹಕರ ನ್ಯಾಯಾಲಯ!ಗ್ರಾಹಕ ನ್ಯಾಯಾಲಯದ ಆದೇಶವನ್ನು ಪಾಲಿಸಲು ವಿಫಲವಾದರೆ, ಕ್ರಿಮಿನಲ್ ಮೊಕದ್ದಮೆ
- ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕನ ಸಾವು
- ಶಬರಿಮಲೆ ನೂತನ ಮುಖ್ಯ ಅರ್ಚಕರಾಗಿ ಎಸ್. ಅರುಣ್ ಕುಮಾರ್ ನಂಬೂತಿರಿ
- ರಿಕ್ಷಾ ಚಾಲಕ ಆತ್ಮಹತ್ಯೆ – ಸಬ್ ಇನ್ಸ್ ಪೆಕ್ಟರ್ ಅಮಾನತು!
- 97 ಕೋಟಿ ರೂ. ಸೈಬರ್ ವಂಚನೆ! | ಬ್ಯಾಂಕ್ ಮ್ಯಾನೇಜರ್ ಸೇರಿ 8 ಮಂದಿ ಬಂಧನ!!
- ವಾಹನ ಅಪಘಾತದ ವಿಚಾರದಲ್ಲಿ ಹಲ್ಲೆ: ಆರೋಪಿಯ ಬಂಧನ
- ವಾಯುಭಾರ ಕುಸಿತ: ಎಚ್ಚರಿಕೆ ವಹಿಸಲು ದ.ಕ. ಜಿಲ್ಲಾಡಳಿತ ಸೂಚನೆ!