tamanvi
ಸಿನೇಮಾ

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಚಿತ್ರ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಘೋಷಿಸಲಾಗಿದ್ದು, 2023ನೇ ಸಾಲಿನ ಪ್ರಶಸ್ತಿಯಲ್ಲಿ ಫೀಚ‌ರ್ ಫಿಲಂನ ಪ್ರಾದೇಶಿಕ ವಿಭಾಗದಲ್ಲಿ ‘ಕಂದೀಲು’ ಹಾಗೂ ನಾನ್ ಫೀಚರ್ ವಿಭಾಗದಲ್ಲಿ ‘ಸೂರ್ಯಕಾಂತಿ ಹೂವಿಗೆ ಮೊದಲು ಗೊತ್ತಾದದ್ದು’ ಕಿರುಚಿತ್ರಕ್ಕೆ ಪ್ರಶಸ್ತಿಗಳು ದೊರಕಿವೆ.

maithri

ನಾನ್ ಫೀಚರ್ ಹಾಗೂ ಫೀಚರ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದಿರುವ ‘ಕಂದೀಲು’ ಹಾಗೂ ‘ಸೂರ್ಯಕಾಂತಿ ಹೂವಿಗೆ ಮೊದಲು ಗೊತ್ತಾದದ್ದು’ ಕಿರುಚಿತ್ರಕ್ಕೆ ರಜತ ಕಮಲ ಹಾಗೂ ಎರಡು ಲಕ್ಷ ನಗದು ಸಿಗಲಿದೆ.

ಈ ಬಾರಿ ಫೀಚರ್ ಚಿತ್ರ ವಿಭಾಗದಲ್ಲಿ ಒಟ್ಟು ನಾಲ್ಕು ಕನ್ನಡ ಚಿತ್ರಗಳು ಕೊನೆಯ ಸುತ್ತಿನವರೆಗೂ ಬಂದಿದ್ದು, ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’, ಯಶೋಧ ಪ್ರಕಾಶ್ ಕೊಟ್ಟುಕತ್ತೀರ ನಿರ್ದೇಶನದ ‘ಕಂದೀಲು’, ನಾಗಿಣಿ ಭರಣ ನಿರ್ದೇಶನದ ‘ಜೀನಿಯಸ್‌ ಮುತ್ತಾ’ ಹಾಗೂ ಬಡಿಗೇರ್ ದೇವೇಂದ್ರ ನಿರ್ದೇಶನದ ‘ಇನ್’ ಚಿತ್ರಗಳು ಸ್ಪರ್ಧೆಯಲ್ಲಿದ್ದು, ಈ ಪೈಕಿ ‘ಕಂದೀಲು’ ಮಾತ್ರ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

‘ಕಂದೀಲು’ ಚಿತ್ರವನ್ನು ಯಶೋದಾ ಪ್ರಕಾಶ್ ಕೊಟ್ಟುಕತ್ತಿರಾ ನಿರ್ಮಿಸಿ-ನಿರ್ದೇಶಿಸಿದ್ದು, ಚಿತ್ರದಲ್ಲಿ ಪ್ರಭಾಕ‌ರ್ ಬ್ರಹ್ಮಾವರ, ವನಿತಾ ರಾಜೇಶ್, ಗುರು ತೇಜಸ್, ವೆಂಕಟೇಶ್ ಪ್ರಸಾದ್ ಮುಂತಾದವರು ನಟಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಟ ಅಮಿರ್ ಖಾನ್’ಗೆ ಬೆದರಿಕೆ ಹಾಕಿದ ಲಾರೆನ್ಸ್ ಬಿಷ್ಣೋಯ್ ತಂಡ!! ಲವ್ ಜಿಹಾದ್ ಪ್ರೋತ್ಸಾಹಕ್ಕೆ ತಕ್ಕ ಶಾಸ್ತಿ ಎಂಬ ಎಚ್ಚರಿಕೆ!

ಮುಂಬೈ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಖಾನ್ ನಂತರ ಇದೀಗ ಬಾಲಿವುಡ್ ನಟ ಆಮೀರ್ ಖಾನ್…

ಧರ್ಮದೈವಕ್ಕಿಂತ ವಿಭಿನ್ನ ಕಥಾಹಂದರದ ಧರ್ಮಚಾವಡಿ | ನಾಳೆ (ಜುಲೈ 11) ಉಭಯ ಜಿಲ್ಲೆಗಳಲ್ಲಿ ಬಿಡುಗಡೆ: ನಿತಿನ್ ರೈ ಕುಕ್ಕುವಳ್ಳಿ

ಪುತ್ತೂರು: ತುಳು ಸಿನಿರಂಗದಲ್ಲಿ ಸದ್ದು ಮಾಡಿದ ಧರ್ಮ ದೈವ ಸಿನಿಮಾದ ಬಳಿಕ ಇದೀಗ ಧರ್ಮ ಚಾವಡಿ…

ಮಲಯಾಳಂ – ತುಳುವಿನ ಸ್ಪರ್ಶವಿರುವ ಕೋಸ್ಟಲ್ ವುಡ್’ನ ‘ಮೀರಾ’ | ನಿರ್ಮಾಪಕ, ನಿರ್ದೇಶಕ, ನಾಯಕ, ನಾಯಕಿ ಎಲ್ಲರೂ ಹೊಸಬರೇ!!

ತುಳು ರಂಗ ಭೂಮಿಯ ಅಪ್ಪ - ತುಳು ಸಿನಿಮಾ ರಂಗದ ಮಗಳು. ಇವರೆರಡರ ನಡುವಿನ ಬಾಂಧವ್ಯ, ರಂಗಭೂಮಿ…