tamanvi
ಸಿನೇಮಾ

ಶಬರಿಮಲೆ ದೇವಸ್ಥಾನದಲ್ಲಿ ಭಕ್ತನ ಆತ್ಮಹತ್ಯೆ!!

D_shiva_bhat
ಶಬರಿಮಲೆಯಲ್ಲಿ ಕರ್ನಾಟಕದ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಶಬರಿಮಲೆಯಲ್ಲಿ ಕರ್ನಾಟಕದ  ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಶರಣಾದ (suicide attempt) ಘಟನೆ ಸೋಮವಾರ ತಡರಾತ್ರಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

maithri

ಸಾವಿಗೀಡಾದ ಅಯ್ಯಪ್ಪ ಸ್ವಾಮಿಯ ಭಕ್ತ ಕರ್ನಾಟಕದ ಕನಕಪುರದ (Kanakapur) ನಿವಾಸಿ ಕುಮಾರಸ್ವಾಮಿ (40) ಎಂದು ತಿಳಿದು ಬಂದಿದೆ.

ಶಬರಿಮಲೆಯಲ್ಲಿ ಎಲ್ಲ ಭಕ್ತರು ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭಕ್ತನೋರ್ವ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಭಕ್ತ ಶಬರಿಮಲೆಯ ತುಪ್ಪದ ಅಭಿಷೇಕ ಕೌಂಟರ್ ಗಳ ಮಂಟಪದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ಅಲ್ಲಿದ್ದವರು ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆ ಗೆ (local hospital) ಕರೆದೊಯ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಕುಮಾರ ಸ್ವಾಮಿ ಖಿನ್ನತೆಯಿಂದ

(depression) ಬಳಲುತ್ತಿದ್ದು, ಈ ಹಿನ್ನೆಲೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಟ ಅಮಿರ್ ಖಾನ್’ಗೆ ಬೆದರಿಕೆ ಹಾಕಿದ ಲಾರೆನ್ಸ್ ಬಿಷ್ಣೋಯ್ ತಂಡ!! ಲವ್ ಜಿಹಾದ್ ಪ್ರೋತ್ಸಾಹಕ್ಕೆ ತಕ್ಕ ಶಾಸ್ತಿ ಎಂಬ ಎಚ್ಚರಿಕೆ!

ಮುಂಬೈ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಖಾನ್ ನಂತರ ಇದೀಗ ಬಾಲಿವುಡ್ ನಟ ಆಮೀರ್ ಖಾನ್…

ಧರ್ಮದೈವಕ್ಕಿಂತ ವಿಭಿನ್ನ ಕಥಾಹಂದರದ ಧರ್ಮಚಾವಡಿ | ನಾಳೆ (ಜುಲೈ 11) ಉಭಯ ಜಿಲ್ಲೆಗಳಲ್ಲಿ ಬಿಡುಗಡೆ: ನಿತಿನ್ ರೈ ಕುಕ್ಕುವಳ್ಳಿ

ಪುತ್ತೂರು: ತುಳು ಸಿನಿರಂಗದಲ್ಲಿ ಸದ್ದು ಮಾಡಿದ ಧರ್ಮ ದೈವ ಸಿನಿಮಾದ ಬಳಿಕ ಇದೀಗ ಧರ್ಮ ಚಾವಡಿ…

ಮಲಯಾಳಂ – ತುಳುವಿನ ಸ್ಪರ್ಶವಿರುವ ಕೋಸ್ಟಲ್ ವುಡ್’ನ ‘ಮೀರಾ’ | ನಿರ್ಮಾಪಕ, ನಿರ್ದೇಶಕ, ನಾಯಕ, ನಾಯಕಿ ಎಲ್ಲರೂ ಹೊಸಬರೇ!!

ತುಳು ರಂಗ ಭೂಮಿಯ ಅಪ್ಪ - ತುಳು ಸಿನಿಮಾ ರಂಗದ ಮಗಳು. ಇವರೆರಡರ ನಡುವಿನ ಬಾಂಧವ್ಯ, ರಂಗಭೂಮಿ…