Gl
ಅಪರಾಧ

ಉಪ್ಪಿನಂಗಡಿ : ಕೆಎಸ್ ಆ‌ರ್ ಟಿಸಿ ಬಸ್ -ಲಾರಿ ಡಿಕ್ಕಿ, ಶಾಲಾ ಮಕ್ಕಳ ಸಹಿತ ಹಲವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ನೆಲ್ಯಾಡಿ : ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಶಾಲಾ ಮಕ್ಕಳ ಸಹಿತ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಇಂದು (ಮಾ.13) ಬೆಳಿಗ್ಗೆ ನಡೆದಿದೆ.

rachana_rai
Pashupathi
akshaya college

ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿಯಿಂದ ಅಂಡರ್ ಪಾಸ್ ನಿಂದ ಮುಂದೆ ಹೋಗುತ್ತಿದ್ದಂತೆ ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಬಸ್ ನ ಹಿಂಬದಿಗೆ ಡಿಕ್ಕಿಯಾಗಿದೆ.

pashupathi

ಘಟನೆಯಲ್ಲಿ ಶಾಲಾ ಮಕ್ಕಳ ಸಹಿತ ಬಸ್ ನ ಹಿಂಬದಿ ಸೀಟು ಹಾಗೂ ಬಾಗಿಲಲ್ಲಿ ನಿಂತುಕೊಂಡಿದ್ದ ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ಕೆಲವರು ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗಂಭೀರ ಗಾಯಗೊಂಡವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts