tamanvi
ಅಪರಾಧ

ಡಿಸಿಸಿ ಬ್ಯಾಂಕ್ ಅಧ್ಯಕ್ಷ  ಆರ್.ಎಂ ಮಂಜುನಾಥ ಗೌಡ ಬಂಧನ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಆ‌ರ್.ಎಂ.ಮಂಜುನಾಥ ಗೌಡ ಅವರನ್ನು ಬಂಧಿಸಿದ ಘಟನೆ ಎ.9ರ ಬುಧವಾರ ನಡೆದಿದೆ.

maithri

ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ.

ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ. ವಶಕ್ಕೆ ನೀಡಲಾಗಿದೆ. ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಮಂಜುನಾಥ ಗೌಡ ಅವರನ್ನು ಹಾಜರುಪಡಿಸಲಾಗಿತ್ತು.

ಎ.8ರ ಮಂಗಳವಾರ ಬೆಳಗ್ಗೆ ಅಪೆಕ್ಸ್ ಬ್ಯಾಂಕ್ ಅತಿಥಿ ಗೃಹದಲ್ಲಿ ಮಂಜುನಾಥ ಗೌಡ ಅವರಿದ್ದ ಕೊಠಡಿ ಮೇಲೆ ದಾಳಿ ನಡೆಸಿದ್ದ ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಮಂಗಳವಾರ ಸಂಜೆ ಇ.ಡಿ. ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು. ಇಂದು (ಎ.9ರ ಬುಧವಾರ) ಮಂಜುನಾಥ ಗೌಡ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117