ಆಟೋ ಚಾಲಕನ ಅಪ್ರಾಪ್ತ ಮಗ ಆಟೋರಿಕ್ಷಾ ಚಲಾಯಿಸುತ್ತಿದ್ದಾಗ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಪ್ರಕರಣದಲ್ಲಿ, ಆಟೋ ಮಾಲೀಕರಿಗೆ ಕೊಪ್ಪಳ ನ್ಯಾಯಾಲಯವು 1.41 ಕೋಟಿ ರೂ.ಗಳ ಭಾರಿ ದಂಡ ವಿಧಿಸಿದೆ.
ಮಾರ್ಚ್ 10, 2021 ರಂದು ಗಂಗಾವತಿಯಲ್ಲಿ ಈ ಘಟನೆ ನಡೆದಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮಂಗಳವಾರ ನ್ಯಾಯಾಧೀಶ ರಮೇಶ್ ಎಸ್ ಗಾಣಿಗೇರ್ ವಿಚಾರಣೆ ನಡೆಸಿದರು. ಪ್ರಕರಣದ ವಿಚಾರಣೆ ನಡೆಸಿದ ನಂತರ, ನ್ಯಾಯಾಧೀಶರು ಮೃತರ ಕುಟುಂಬಕ್ಕೆ ಹಣ ಪಾವತಿಸಲು ಆದೇಶಿಸಿದ್ದಾರೆ.
ಗಂಗಾವತಿಯ ಜಯನಗರ ನಿವಾಸಿ, ದ್ವಿಚಕ್ರ ವಾಹನ ಸವಾರ ಮೃತ ರಾಜಶೇಖರ್ ಅಯ್ಯನಗೌಡ ಅವರ ಕುಟುಂಬವು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗೆ ದೂರು ಸಲ್ಲಿಸಿತು. ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಆಟೋ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಮೃತರ ಪತ್ನಿ ಚೆನ್ನಮ್ಮ ಮತ್ತು ಇತರರು ಪರಿಹಾರ ಕೋರಿ ನ್ಯಾಯಾಲಯದ ಮೊರೆ ಹೋದರು.
2021 ರಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಲ್ಲಿಸಲಾದ ದೂರನ್ನು ಆಲಿಸಿದ ನಂತರ, ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ರಮೇಶ್ ಎಸ್. ಗಾಣಿಗೇರ್ ಅವರು, ಆಟೋ ಡ್ರೈವರ್ಗೆ ಮೃತರ ಕುಟುಂಬಕ್ಕೆ 1,41,61,580 ರೂ. ಪರಿಹಾರವನ್ನು ನೀಡುವಂತೆ ಆದೇಶಿಸಿದರು.
ರಾಜಶೇಖರ್ ಅಯ್ಯನಗೌಡ ಅವರು ಯೆಲ್ಬುರ್ಗಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ, ರಾಜಶೇಖರ್ ಪಟ್ಟಣದ ಅಂಗಡಿಯ ಬಳಿ ತನ್ನ ಬೈಕನ್ನು ನಿಲ್ಲಿಸಿ ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಿದ್ದಾಗ, ಅಪ್ರಾಪ್ತ ಮಹಾಂತೇಶ್ ಕುದರಿಕೋಟಗಿ, ರಾಜಶೇಖರ್ಗೆ ಆಟೋ ಡಿಕ್ಕಿ ಹೊಡೆಸಿದ್ದ ಈ ವೇಳೆ ಅವರು ಗಂಭೀರವಾಗಿ ಗಾಯಗೊಂಡರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದರು.
ನ್ಯಾಯಾಲಯದ ತೀರ್ಪಿನಿಂದ ಸಂತೋಷವಾಗಿದ್ದೇವೆ ಮತ್ತು ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. ಆದರೆ ನಮ್ಮ ಸ್ನೇಹಿತ ಹಿಂತಿರುಗುವುದಿಲ್ಲ. ಅವರು ಕುಟುಂಬದ ಏಕೈಕ ಜೀವನೋಪಾಯದಾರರಾಗಿದ್ದರು. ನ್ಯಾಯಾಲಯದ ತೀರ್ಪು ಅಪ್ರಾಪ್ತರಿಗೆ ತಮ್ಮ ವಾಹನಗಳನ್ನು ನೀಡುವ ಎಲ್ಲಾ ಪೋಷಕರಿಗೆ ಬಲವಾದ ಸಂದೇಶ ರವಾನಿಸುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ರಾಜಶೇಖರ್ ಅವರ ಸ್ನೇಹಿತ ತಿಳಿಸಿದ್ದಾರೆ,
ಇಷ್ಟು ದೊಡ್ಡ ಮೊತ್ತವನ್ನು ಹೇಗೆ ಹೊಂದಿಸುತ್ತೇವೆ ಎಂದು ನಮಗೆ ತಿಳಿದಿಲ್ಲ. ನಾನು ಕೆಲವು ವಕೀಲರೊಂದಿಗೆ ಸಮಾಲೋಚಿಸುತ್ತೇನೆ. ಆರೋಪಿ ಅಪ್ರಾಪ್ತ ವಯಸ್ಕನಾಗಿರುವುದರಿಂದ ವಿಮಾ ಕಂಪನಿಗಳು ಪ್ರಕರಣವನ್ನು ಪರಿಗಣಿಸುವುದಿಲ್ಲ ಎಂದು ವಕೀಲರು ಹೇಳುತ್ತಿದ್ದಾರೆ. ನಮಗೆ ಲಕ್ಷಗಳ ಬಗ್ಗೆ ಯೋಚಿಸಲು ಸಾಧ್ಯವಿಲ್ಲ ಮತ್ತು ಈಗ 1.41 ಕೋಟಿ ರೂ. ಪಾವತಿಸಲು ಕೇಳಲಾಗಿದೆ ಎಂದು ಅಪ್ರಾಪ್ತ ಬಾಲಕನ ತಂದೆ ಆಟೋ ಚಾಲಕ ಮಾತಂಗಪ್ಪ ಅಳಲು ತೋಡಿಕೊಂಡಿದ್ದಾರೆ.
ಅಪ್ರಾಪ್ತನಿಂದ ಅಪಘಾತ: ಅಪ್ಪನಿಗೆ ಶಿಕ್ಷೆ ವಿಧಿಸಿದ ಕೋರ್ಟ್! 1.41 ಕೋಟಿ ರೂ.ಗಳ ಬಾರೀ ದಂಡ!
What's your reaction?
- 994c
- 994cc
- 9ai technology
- 8artificial intelegence
- 8avg
- 8bt ranjan
- 8co-operative
- 7crime news
- 7death news
- 7gl
- 7gods own country
- 6google for education
- 6independence
- 6jewellers
- 5karnataka state
- 5kerala village
- 5lokayuktha
- 5lokayuktha raid
- 4manipal
- 4minister krishna bairegowda
- 4mla ashok rai
- 4nidana news
- 3nirvathu mukku
- 3ptr tahasildar
- 3puttur
- 3puttur news
- 2puttur tahasildar
- 2revenue
- 2revenue department
- 2revenue minister
- 1society
- 1sowmya
- 1tahasildar
- 1tahasildar absconded
- 0udupi
Related Posts
ಆ್ಯಂಬುಲೆನ್ಸ್ ಮುಂದೆ ಹುಚ್ಚಾಟವಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ! ಪುತ್ತೂರು ಬೆಟ್ಟಂಪಾಡಿಯ ಮನ್ಸೂರ್ ಬಂಟ್ವಾಳ ಪೊಲೀಸರ ವಶ!
ಬಿಸಿಲೆಘಾಟಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮಂಗಳೂರಿಗೆ…
ಕುಂಬ್ರ:ಕಾರು-ರಿಕ್ಷಾ ಅಪಘಾತ;ಬಾಲಕಿ ಶಜ್ವಾ ಫಾತಿಮಾ ಮೃತ್ಯು..!!
ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬೋಡ್ ಹಾಲ್ ಬಳಿ ನವೆಂಬರ್ 1ರಂದು ಸಂಜೆ…
ಮದುವೆ ಮನೆ ಶೋಕ ಸಾಗರ! ಟೆಂಪೋ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಶಿವರಾಜ್ ಮೃತ್ಯು!!
ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆಗೆಂದು ಹೊರಟ ಟೆಂಪೋ ವ್ಯಾನ್ ಪಲ್ಟಿ ಪ್ರಕರಣದಲ್ಲಿ…
ಕಾರು ಡಿಕ್ಕಿ ಕುದ್ಮಾರು ನಿವಾಸಿ ಕಾರ್ತಿಕ್ ಮೃತ್ಯು!!
ಪಾಣೆಮಂಗಳೂರು ಫೈ ಓವರ್ನ ಡಿವೈಡರ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಪುತ್ತೂರಿನ…
ಮಂಗಳೂರಿನ ಕುಖ್ಯಾತ ರೌಡಿ ನೌಫಾಲ್ ಬರ್ಬರ ಹತ್ಯೆ!!
ನಟೋರಿಯಸ್ ರೌಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೆ…
ಪಾಣೆಮಂಗಳೂರು: ನದಿ ಬದಿಯ ಮರವೊಂದರಲ್ಲಿ ಸಿಲುಕಿಕೊಂಡಿದ್ದ ಆಟೋ ಚಾಲಕನ ಶವ!!
ಬಂಟ್ವಾಳ: ನಿನ್ನೆ ನಾಪತ್ತೆಯಾಗಿದ್ದ ಇಲೆಕ್ಟ್ರಿಕ್ ಆಟೋ ಚಾಲಕನ ಮೃತದೇಹ ಇಂದು ನೇತ್ರಾವತಿ ನದಿಯ…
ಸುಳ್ಯ: ಬಸ್ ಡೋರ್ ತೆಗೆಯಲು ಸತಾಯಿಸಿದ ಕೆ.ಎಸ್.ಆರ್.ಟಿ.ಸಿ. ಡ್ರೈವರ್ – ದೂರು
ಕೊಯನಾಡು ಕೆಎಸ್ ಆರ್ ಟಿಸಿ ಬಸ್ ಡ್ರೈವರೊಬ್ಬ ಪ್ರಯಾಣಿಕರು ಬಸ್ ನಿಂದ ಇಳಿಯಲು ಕೇಳಿಕೊಂಡರೆ ಬಸ್…
ಕುಕ್ಕೆ ಸುಬ್ರಹ್ಮಣ್ಯ: ಮದುವೆ ಟೆಂಪೋ ಪಲ್ಟಿ – 20 ಮಂದಿಗೆ ಗಾಯ!!
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆಗೆಂದು ಹೊರಟಿದ್ದ ಟಿಟಿ ವಾಹನವೊಂದು ಬಿಸಿಲೆ…
ಮಂಗಳೂರು: ಪೊಲೀಸರಿಗೇ ಹಲ್ಲೆಗೈದ ಚೂರಿ ಇರಿತದ ಆರೋಪಿ
ಮಂಗಳೂರು: ಸುರತ್ಕಲ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ (29) ಪೊಲೀಸರ ಮೇಲೆ…
ಕಲ್ಲಡ್ಕ ಪ್ರಭಾಕರ್ ಭಟ್ಗೆ ಕೋರ್ಟ್ ರಿಲೀಫ್!
ಪ್ರಚೋದನಕಾರಿ ಭಾಷಣ ಆರೋಪದಡಿ ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ…





















