Gl
ಅಪರಾಧ

ಬಾಲಕರಿಬ್ಬರ ಜಗಳ: ಕೊಲೆಯಲ್ಲಿ ಅಂತ್ಯ!!

ಕ್ಷುಲ್ಲಕ ವಿಷಯವಾಗಿ ಅಪ್ರಾಪ್ತ ಸ್ನೇಹಿತರಿಬ್ಬರ ನಡುವೆ ಜಗಳ ಉಂಟಾಗಿ ವಿಕೋಪಕ್ಕೆ ಹೋದಾಗ ಓರ್ವನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಸೋಮವಾರ ರಾತ್ರಿ ಮೂರುಸಾವಿರ ಮಠ ಬಳಿಯ ಗುರುಸಿದ್ದೇಶ್ವರ ನಗರದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ: ಕ್ಷುಲ್ಲಕ ವಿಷಯವಾಗಿ ಅಪ್ರಾಪ್ತ ಸ್ನೇಹಿತರಿಬ್ಬರ ನಡುವೆ ಜಗಳ ಉಂಟಾಗಿ ವಿಕೋಪಕ್ಕೆ ಹೋದಾಗ ಓರ್ವನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಸೋಮವಾರ ರಾತ್ರಿ ಮೂರುಸಾವಿರ ಮಠ ಬಳಿಯ ಗುರುಸಿದ್ದೇಶ್ವರ ನಗರದಲ್ಲಿ ನಡೆದಿದೆ.

Pashupathi

ಡಿಜೆ ಮತ್ತು ಲೈಟಿಂಗ್ ವಿಷಯಕ್ಕೆ ಸಂಬಂಧಿಸಿ ಅಪ್ರಾಪ್ತ ಸ್ನೇಹಿತರ ನಡುವೆ ಜಗಳವಾಗಿದೆ. ಅದು ವಿಕೋಪಕ್ಕೆ ಹೋದಾಗ ಸಿಟ್ಟಾದ 6ನೇ ತರಗತಿ ಓದುತ್ತಿದ್ದ ಬಾಲಕನು ಮನೆಯಿಂದ ಚಾಕು ತಂದವನೇ 9ನೇ ತರಗತಿಯ ಬಾಲಕನಿಗೆ ಚಾಕುವಿನಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ಆತನನ್ನು ಕೆಎಂಸಿಆರ್‌ಐ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಮೂಲಗಳು ತಿಳಿಸಿವೆ.

akshaya college

ಸ್ಥಳಕ್ಕೆ ಕಮರಿಪೇಟೆ ಠಾಣೆ ಪೋಲೀಸರು ಭೇಟಿಕೊಟ್ಟು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಎಂಸಿಆರ್‌ಐ ಆಸ್ಪತ್ರೆಗೆ ಪೊಲೀಸ್ ಆಯುಕ್ತ ಎನ್‌. ಶಶಿಕುಮಾ‌ರ್ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಜೀವನದಲ್ಲೇ ಇಂತಹ ಘಟನೆ ನೋಡಿಲ್ಲ. ಆರನೇ ತರಗತಿ ಬಾಲಕ ಕೊಲೆ ಮಾಡುವಂತಹ ಮನಸ್ಥಿತಿ ಬಂದಿದೆ.

ಆತ ನಮ್ಮ ಸೊಂಟದೆತ್ತರಕ್ಕೂ ಇಲ್ಲ ಎಂದು  ವ್ಯಕ್ತಪಡಿಸಿದರು.

ಪೋಷಕರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಮೃತ ಬಾಲಕ 8ನೇ ತರಗತಿ ಪಾಸ್ ಆಗಿದ್ದಾನೆ. ಒಬ್ಬನೇ ಮಗ. ತಂದೆ-ತಾಯಿ ರೊಟ್ಟಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಗಾಯದ ತೀವ್ರತೆ ಅಂದಾಜಿಲ್ಲ. ಇದು ಹೃದಯ ವಿದ್ರಾವಕ ಘಟನೆ. ಕೊ*ಲೆ ಮಾಡಿದ ಬಾಲಕನ ಕುಟುಂಬವೂ ಬಡತನದ್ದಾಗಿದೆ. ಕಾರ್ಯವಿಧಾನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕೊಟ್ಟಿಯೂರು: ಭಾರೀ ಜನಸಂದಣಿ, 10 ನಿಮಿಷದ ಹಾದಿಗೆ 3.30 ತಾಸು!! ಮಗು ಸಾವು; ಹೊಳೆ ನೀರಲ್ಲಿ ಕೊಚ್ಚಿ ಹೋದ ತರುಣರು!!

ಕಣ್ಣೂರು: ಕೊಟ್ಟಿಯೂರಿನಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಸಂಚಾರ ದಟ್ಟಣೆ…