ಪುತ್ತೂರು: ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಅವರು ನೇತ್ರಾವತಿ ನದಿ ಬಳಿಯ ನೀರಿನ ಟ್ಯಾಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಇದೀಗ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಮೇಲಕ್ಕೆತ್ತಲಾಗಿದೆ.
ರಮೇಶ್ ರೈ ಅವರು ಇತ್ತೀಚಿಗೆ ಪುತ್ತೂರು ನಗರಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದರು.
ಜೂ. 5ರಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಚಪ್ಪಲಿ ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಕಂಡು ಬಂದಿತ್ತು. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕುಟುಂಬದ ಸದಸ್ಯರು, ಪೊಲೀಸರು ಆಗಮಿಸಿದ್ದು, ಹುಡುಕಾಟ ನಡೆಸಲಾಗಿತ್ತು. ಇದೀಗ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.