tamanvi
ಅಪರಾಧ

ನಗರಸಭೆ ಸದಸ್ಯ ರಮೇಶ್ ರೈ ಆತ್ಮಹತ್ಯೆ! ಪಾಣೆಮಂಗಳೂರು ಬಳಿ ಮೃತದೇಹ ಪತ್ತೆ!

D_shiva_bhat
ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಅವರು ನೇತ್ರಾವತಿ ನದಿ ಬಳಿಯ ನೀರಿನ ಟ್ಯಾಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

maithri

ಇದೀಗ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಮೇಲಕ್ಕೆತ್ತಲಾಗಿದೆ.

ರಮೇಶ್ ರೈ ಅವರು ಇತ್ತೀಚಿಗೆ ಪುತ್ತೂರು ನಗರಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದರು.

ಜೂ. 5ರಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಚಪ್ಪಲಿ ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಕಂಡು ಬಂದಿತ್ತು. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕುಟುಂಬದ ಸದಸ್ಯರು, ಪೊಲೀಸರು ಆಗಮಿಸಿದ್ದು, ಹುಡುಕಾಟ ನಡೆಸಲಾಗಿತ್ತು. ಇದೀಗ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117