Gl
ಅಪರಾಧ

ಕಾರಿನಲ್ಲೇ ಆತ್ಮಹತ್ಯೆಗೆ ಶರಣಾದ ಯುವ ವೈದ್ಯ.!!

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಯುವ ವೈದ್ಯನೋರ್ವ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆಯೊಂದು ತಮಿಳುನಾಡಿನ ಕೊಡೈಕೆನಾಲ್ ನಲ್ಲಿ ಬೆಳಕಿಗೆ ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಯುವ ವೈದ್ಯನೋರ್ವ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆಯೊಂದು ತಮಿಳುನಾಡಿನ ಕೊಡೈಕೆನಾಲ್ ನಲ್ಲಿ ಬೆಳಕಿಗೆ ಬಂದಿದೆ.

Pashupathi

ದಿಂಡಿಗಲ್ ಜಿಲ್ಲೆಯ ವೇದಚಂದೂರಿನ ಡಾ. ಜೋಶುವಾ ಸಾಮ್ರಾಜ್ ಮೃತ ವ್ಯಕ್ತಿಯಾಗಿದ್ದಾರೆ.

akshaya college

ಜೋಶುವಾ ಅವರು ವೈದ್ಯಕೀಯ ಪದವಿ ಪೂರ್ಣಗೊಳಿಸಿ ತಮಿಳುನಾಡಿನಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದರು. ಸದ್ಯ ಡಾ. ಜೋಶುವಾ ಸಾಮ್ರಾಜ್ ಸೇಲಂನಲ್ಲಿ (ಡಾಕ್ಟರ್ ಆಫ್ ಮೆಡಿಸಿನ್) ವ್ಯಾಸಂಗ ಮಾಡುತ್ತಿದ್ದು, ಮಧುರೈನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ಜೋಶುವಾ ನಾಪತ್ತೆಯಾಗಿದ್ದರು ಎನ್ನಲಾಗಿದೆ ಈ ಕುರಿತು ಸಂಬಂಧಿಕರು ವೇದಚಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಕೊಂಡ ಪೊಲೀಸರು ನಾಪತ್ತೆಯಾದ ವೈದ್ಯನ ಪತ್ತೆಗೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು ಆದರೆ ಎಲ್ಲೂ ನಾಪತ್ತೆಯಾದ ವೈದ್ಯನ ಮಾಹಿತಿ ಲಭ್ಯವಾಗಲಿಲ್ಲ,

ಕಾರಿನೊಳಗೆ ಮೃತದೇಹ ಪತ್ತೆ:

ಇಲ್ಲಿನ ಪೂಂಬರೈ ಅರಣ್ಯ ಪ್ರದೇಶದ ಬಳಿ ಕಾರೊಂದು ಮೂರೂ ನಾಲ್ಕು ದಿನಗಳಿಂದ ನಿಂತಿರುವುದು ಕಂಡು ಬಂದಿದ್ದು ಇದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಬಂದ ಪೊಲೀಸರು ಕಾರನ್ನು ಪರಿಶೀಲಿಸಿದ ವೇಳೆ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಅಲ್ಲದೆ ಮೃತ ವ್ಯಕ್ತಿ ತನ್ನ ದೇಹಕ್ಕೆ ಯಾವುದೋ ಅಮಲು ಪದಾರ್ಥವನ್ನು ಸಿರೆಂಜ್ ಮೂಲಕ ಚುಚ್ಚಿರುವುದು ಕಂಡು ಬಂದಿದ್ದು ಇದರಿಂದ ಆತ್ಮಹತ್ಯೆ ಮಾಡಿಕೊಂಡಂತಿದೆ ಅಲ್ಲದೆ ಮೃತ ವ್ಯಕ್ತಿ ನಾಪತ್ತೆಯಾಗಿರುವ ವೈದ್ಯ ಜೋಶುವಾ ಅವರದ್ದೇ ಎಂಬುದನ್ನು ಸಂಬಂಧಿಕರು ದೃಢಪಡಿಸಿದ್ದಾರೆ.

ಡೆತ್ ನೋಟ್ ಪತ್ತೆ:

ಇನ್ನು ಮೃತದೇಹ ಪತ್ತೆಯಾದ ಕಾರಿನೊಳಗೆ ಡೆತ್ ನೋಟ್ ಕೂಡಾ ಅದರಲ್ಲಿ ಮನೆ ಮಂದಿ ಬಳಿ ಕ್ಷಮೆ ಯಾಚಿಸಿರುವುದು ಕಂಡು ಬಂದಿದೆ ಅಲ್ಲದೆ ನನ್ನ ಸಾವಿಗೆ ನಾನೇ ಕಾರಣ ಎಂದೂ ಬರೆದುಕೊಂಡಿದ್ದಾರೆ.

ಆರ್ಥಿಕ

ಕಾರಿನಲ್ಲಿ ಪತ್ತೆಯಾದ ವೈದ್ಯನ ಮೊಬೈಲ್ ನಲ್ಲಿ ಆನ್‌ಲೈನ್ ಬೆಟ್ಟಿಂಗ್ ನಿಂದ ಆರ್ಥಿಕ ಸಂಕಷ್ಟ ಹೊಂದಿರುವ ಕುರಿತು ಮಾಹಿತಿಗಳು ಲಾಭ್ಯವಾಗಿದೆ ಜೊತೆಗೆ ಪೋಷಕರು ಹೇಳುವಂತೆ ಮನೆ ಮಂದಿಯೊಂದಿಗೆ ಹೆಚ್ಚು ಮಾತನಾಡುತ್ತಿರಲಿಲ್ಲ, ಯಾವುದೋ ಸಾಲದ ಸುಲಿಗೆ ಸಿಲುಕಿರುವ ಸಾಧ್ಯತೆ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಪೊಲೀಸರಿಂದ ತನಿಖೆ:

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಡೆತ್ ನೋಟ್ ಆಧಾರದ ಮೇಲೆ ಜೊತೆಗೆ ಸಂಬಂಧಿಕರ ಮಾಹಿತಿ ಮೇರೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts