ಅಪರಾಧ

ಕಾಶಿ ವಿಶ್ವನಾಥನ ಮಂದಿರದಲ್ಲಿ ನಕಲಿ ಅರ್ಚಕರು! ಭಕ್ತರನ್ನು ನಂಬಿಸಿ ಹಣ ಪಡೆಯುತಿದ್ದ ಅರ್ಚಕರೆಲ್ಲರೂ ಅರೆಸ್ಟ್

GL
ಸುಲಭವಾಗಿ ದೇವರ ದರ್ಶನ, ಪೂಜೆ ಮಾಡಿಸುತ್ತೇವೆ ಎಂದು ಭಕ್ತರಿಂದ ವಸೂಲಿ ಮಾಡುತ್ತಿದ್ದ 21 ನಕಲಿ ಅರ್ಚಕರನ್ನು ಕಾಶಿ ವಿಶ್ವನಾಥ ದೇಗುಲದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ವಾರಾಣಸಿ: ಸುಲಭವಾಗಿ ದೇವರ ದರ್ಶನ, ಪೂಜೆ ಮಾಡಿಸುತ್ತೇವೆ ಎಂದು ಭಕ್ತರಿಂದ ವಸೂಲಿ ಮಾಡುತ್ತಿದ್ದ 21 ನಕಲಿ ಅರ್ಚಕರನ್ನು ಕಾಶಿ ವಿಶ್ವನಾಥ ದೇಗುಲದಲ್ಲಿ ಪೊಲೀಸರು ಬಂಧಿಸಿದ್ದಾರೆ.

chennai-shopping
maithri

ಸುಲಭವಾಗಿ ದೇವರ ದರ್ಶನ, ಪೂಜೆ ವ್ಯವಸ್ಥೆ ಮಾಡಿಸುತ್ತೇವೆ ಎಂದು ಭಕ್ತರಿಗೆ ನಂಬಿಸಿ, ಹಣ ಪಡೆಯುತ್ತಿದ್ದ ಹಾಗೂ ದೇವಾಲಯದ ಆವರಣದ ಬಳಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋದ ಹಿನ್ನೆಲೆಯಲ್ಲಿ 21 ನಕಲಿ ಅರ್ಚಕರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಹಲವು ದಿನಗಳಿಂದ ದೂರು ಬಂದಿದ್ದವು. ಈ ಹಿನ್ನೆಲೆಯಲ್ಲಿ ದಶಾಶ್ವಮೇಧ ಹಾಗೂ ಚೌಕ ಪೊಲೀಸ್ ಠಾಣೆ ಪೊಲೀಸರನ್ನು ಒಳಗೊಂಡ ಜಂಟಿ ತಂಡವನ್ನು ರಚನೆ ಮಾಡಲಾಗಿತ್ತು. ತನಿಖೆ ವೇಳೆ ದಶಾಶ್ವಮೇಧ ಠಾಣೆ ಪೊಲೀಸರಿಗೆ 15 ಜನರು ಹಾಗೂ ಚೌಕ ಠಾಣೆ ಪೊಲೀಸರಿಗೆ 6 ಜನರು ನಕಲಿ ಪೂಜಾರಿಗಳು ಸಿಕ್ಕಿಬಿದ್ದಿದ್ದಾರೆ.

ದೇಗುಲದಲ್ಲಿ ನಮ್ಮ ತಂಡ ಕಾರ್ಯಾಚರಣೆ ಮುಂದುವರೆಸಿದೆ. ಇಂತಹ ನಕಲಿ ಅರ್ಚಕರನ್ನು ಮತ್ತಷ್ಟು ಜನರನ್ನು ಬಂಧಿಸಲಾಗುವುದು ಎಂದು ಎಸಿಪಿ ಮಾಹಿತಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105