tamanvi
ಅಪರಾಧ

ಪತ್ನಿಗೆ ಮೊಬೈಲ್ ಗೀಳು, ಪತಿಗೆ ಕುಡಿತದ ಚಟ; ತಲೆಗಡರಿದ ನಶೆಗೆ ಉರುಳಿತು ತಲೆ!

D_shiva_bhat
ಪತ್ನಿ ಹೆಚ್ಚಾಗಿ ಮೊಬೈಲ್‌ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಪತಿ ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಜೂ.19ರ ಗುರುವಾರ ರಾತ್ರಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪತ್ನಿ ಹೆಚ್ಚಾಗಿ ಮೊಬೈಲ್‌ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಪತಿ ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಜೂ.19ರ ಗುರುವಾರ ರಾತ್ರಿ ನಡೆದಿದೆ.

maithri

ರೇಖಾ ಕೊಲೆಯಾದಕೆ. ಪತಿ ಗಣೇಶ್ ಪೂಜಾರಿ ಕೊಲೆ ಮಾಡಿದ ಆರೋಪಿ.

ಜೂ.19ರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ.

ಆರೋಪಿ ಗಣೇಶ್‌ ಪೂಜಾರಿ ವಿಪರೀತ ಮದ್ಯ ವ್ಯಸನ ಚಟವುಳ್ಳವನಾಗಿದ್ದ. ಪತ್ನಿ ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ವಿಪರೀತ ಮದ್ಯ ಸೇವನೆ ಮಾಡಿ ಗುರುವಾರ ರಾತ್ರಿ ಮನೆಯಲ್ಲಿ ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಗಣೇಶ್ ಪೂಜಾರಿಯನ್ನು ಬಂಧಿಸಿಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್‌ ಮೂಲಗಳು ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 116