ಅಪರಾಧ

ಶ್ರೀಕೃಷ್ಣ ಜೆ. ರಾವ್ ನಿರೀಕ್ಷಣಾ ಜಾಮೀನು ಮುಂದೂಡಿಕೆ!!

GL
ಮದುವೆಯಾಗುವುದಾಗಿ ನಂಬಿಸಿ ತನ್ನ ಹೈಸ್ಕೂಲ್ ಸಹಪಾಠಿಯನ್ನು ಗರ್ಭಿಣಿಯಾಗಿಸಿ ವಂಚಿಸಿದ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ತನ್ನ ಹೈಸ್ಕೂಲ್ ಸಹಪಾಠಿಯನ್ನು ಗರ್ಭಿಣಿಯಾಗಿಸಿ ವಂಚಿಸಿದ ಆರೋಪ ಎದುರಿಸುತ್ತಿರುವ ಬಿಜೆಪಿ ಮುಖಂಡರೊಬ್ಬರ ಪುತ್ರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜುಲೈ 3ಕ್ಕೆ ಮುಂದೂಡಿದೆ.

chennai-shopping
maithri

ಪ್ರಕರಣದ ಹಿನ್ನೆಲೆ:

ಪುತ್ತೂರಿನ ಬಪ್ಪಳಿಗೆ ನಿವಾಸಿ ಹಾಗೂ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ. ರಾವ್ (21) ಈ ಪ್ರಕರಣದ ಆರೋಪಿಯಾಗಿದ್ದಾನೆ. ತನ್ನ ಹೈಸ್ಕೂಲ್ ಸಹಪಾಠಿಯಾಗಿದ್ದ ಹಾಗೂ ಪ್ರಸ್ತುತ ಮಂಗಳೂರಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಬಳಿಕ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಯನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದ. ಯುವತಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಎಸಗಿದ್ದಾನೆ ಎಂದು ಸಂತ್ರಸ್ತ ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.

ಕಾನೂನು ಪ್ರಕ್ರಿಯೆ:

ಈ ಸಂಬಂಧ ಸಂತ್ರಸ್ತೆಯು ಜೂನ್ 24ರಂದು ಪುತ್ತೂರಿನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಅಡಿಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿರುವ ಆರೋಪಿ ಶ್ರೀಕೃಷ್ಣ. ತನ್ನ ವಕೀಲರ ಮೂಲಕ ಜೂನ್ 28ರಂದು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ.

ನ್ಯಾಯಾಲಯದ ವಿಚಾರಣೆ:

ಜೂ.30ರಂದು ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ. ಈ ವೇಳೆ, ವಾದ ವಿವಾದ ಆಲಿಸಿದ ನ್ಯಾಯಾಲಯವು. ಪ್ರಕರಣದ ಸಂತ್ರಸ್ತೆಗೆ ಸಂಬಂಧಪಟ್ಟ ಪೊಲೀಸ್ ಠಾಣೆಯ ಮೂಲಕ ನೋಟಿಸ್‌ ಜಾರಿಗೊಳಿಸುವಂತೆ ಮತ್ತು ಜುಲೈ 3, 2025ರೊಳಗೆ ಅದರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ (PP) ಸೂಚನೆ ನೀಡಿತು.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 3, 2025 ಕ್ಕೆ ನಿಗದಿಪಡಿಸಲಾಗಿದ್ದು, ಅಂದು ಪ್ರಕರಣದ ಸಂಬಂಧಪಟ್ಟವರು ನ್ಯಾಯಾಲಯಕ್ಕೆ ಹಾಜರಾಗುವಂತೆ (Appearance) ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105