tamanvi
ಅಪರಾಧ

ಮದುವೆ ಮಂಟಪಕ್ಕೆ ಇಡಿ ದಾಳಿ: ಬೆಚ್ಚಿಬಿದ್ದ ಮದುಮಗ ಮಾಡಿದ್ದೇನು ಗೊತ್ತೇ?

D_shiva_bhat
ಮದುವೆ ಮಂಟಪಕ್ಕೆ ಇಡಿ ದಾಳಿ ನಡೆಸಿದ ಕುತೂಹಲಕಾರಿ ಘಟನೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮದುವೆ ಮಂಟಪಕ್ಕೆ ಇಡಿ ದಾಳಿ ನಡೆಸಿದ ಕುತೂಹಲಕಾರಿ ಘಟನೆ ವರದಿಯಾಗಿದೆ.

maithri

ರಾಜಸ್ಥಾನದ ಪ್ರಸಿದ್ಧ ಫೇರ್‌ಮಾಂಟ್ ಹೋಟೆಲ್‌ನಲ್ಲಿ ಸೌರಭ್ ಅಹುಜಾ ಎನ್ನುವವರ ವಿವಾಹ ಭಾರೀ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ಸೌರಭ್ ಅಹುಜಾ ಮಹಾದೇವ್ ಬೆಟ್ಟಿಂಗ್ ಆಪ್ ಹಗರಣದ ಆರೋಪಿ. 15000 ಕೋಟಿ ರೂಪಾಯಿಗಳ ಮಹಾದೇವ್ ಬೆಟ್ಟಿಂಗ್ ಆಪ್ ಹಗರಣಕ್ಕೆ ಸಂಬಂಧಪಟ್ಟಂತೆ ಈ ದಾಳಿ ಮಾಡಲಾಗಿತ್ತು.

ಇಡಿ ಅಧಿಕಾರಿಗಳಿಗೆ ಮದುವೆ ನಡೆಯುತ್ತಿದ್ದ ಕುರಿತು ಮಾಹಿತಿ ಪಡೆದಿದ್ದು, ಸಪ್ತಪದಿ ತುಳಿಯುವ ಮುನ್ನವೇ ಬಂಧನಕ್ಕೆ ಬರುತ್ತಿರುವ ಸೂಚನೆ ದೊರಕಿದ ಸೌರಭ್ ಮಂಟಪದಿಂದಲೇ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಮಂಟಪಕ್ಕೆ ಬಂದ ಅಧಿಕಾರಿಗಳು ಹಗರಣಕ್ಕೆ ಸಂಬಂಧಪಟ್ಟಂತೆ ಪ್ರಣವೇಂದ್ರ ಹಾಗೂ ಇತರ ಇಬ್ಬರನ್ನು ಬಂಧನ ಮಾಡಿದ್ದಾರೆ.

ಮೂವರ ಬಂಧನ:

ಮಂಟಪಕ್ಕೆ ಸೌರಭ್ ಬಂಧನಕ್ಕೆ ಬಂದಿದ್ದ ಅಧಿಕಾರಿಗಳು, ಹಗರಣಕ್ಕೆ ಸಂಬಂಧಿಸಿದ ಪ್ರಣವೇಂದ್ರ ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ. ಇದಲ್ಲದೆ ಸೌರಭ್ ಎಲ್ಲಿದ್ದಾನೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲು ವಧು, ಅವರ ಕುಟುಂಬ ಸದಸ್ಯರು ಮತ್ತು ಇತರ ನಿಕಟ ಸಂಬಂಧಿಗಳನ್ನು ಸಹ ಪ್ರಶ್ನಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸೌರಭ್ ಬಂಧನಕ್ಕೆ ಜೈಪುರಕ್ಕೆ ಬಂದಿದ್ದ ಇ.ಡಿ:

ಮಹಾದೇವ್‌ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ ಅಕ್ರಮ ವಹಿವಾಟುಗಳನ್ನು ನಿರ್ವಹಿಸಿದ ಆರೋಪ ಸೌರಭ್ ಮೇಲಿದೆ ಎನ್ನಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಸ್ವಲ್ಪ ಸಮಯದಿಂದ ಸೌರಬ್‌ನನ್ನು ಟ್ರ್ಯಾಕ್ ಮಾಡುತ್ತಿತ್ತು. ಮದುವೆ ವೇಳೆಯೇ ಅವನನ್ನು ಬಂಧಿಸುವ ನಿಟ್ಟಿನಲ್ಲಿ ರಾಯ್‌ಪುರದಿಂದ ಜೈಪುರಕ್ಕೆ ಒಂದು ತಂಡವನ್ನು ಕಳುಹಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್ ದೇಶದೆಲ್ಲೆಡೆ ಸಂಚಲನ ಸೃಷ್ಟಿಸಿದೆ. ಈ ಹಗರಣದಲ್ಲಿ ಖ್ಯಾತನಾಮರು ಸೇರಿ ಹಲವರ ಹೆಸರು ಕೂಡ ಹರಿದಾಡಿದೆ. ಬಾಲಿವುಡ್‌ನಲ್ಲೂ ಈ ಸಂಬಂಧ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಈ ಹಿಂದೆ ನಟ ಮತ್ತು ಫಿಟೈಸ್ ಪ್ರಭಾವಿ ಸಾಹಿಲ್ ಖಾನ್ ನನ್ನು ಈ ಹಗರಣ ಸಂಬಂಧ ಬಂಧಿಸಲಾಗಿತ್ತು.

ಸದ್ಯ ಜೈಪುರದಲ್ಲಿ ಬಂಧಿತರಾಗಿರುವ ಅರೋಪಿಗಳನ್ನು ವಿಚಾರಣೆ ನಡೆಸಿ, ಸೌರಬ್ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ವರದಿ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117