ಉಪ್ಪಿನಂಗಡಿ:ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸುರೇಶ್ (30) ಎಂಬವರು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆಯ ನಿವಾಸಿ, ದಿವಂಗತ ನೀಲಯ್ಯ ಗೌಡ ಅವರ ಪುತ್ರ ಸುರೇಶ್, ಕರ್ತವ್ಯಕ್ಕೆ ರಜೆ ತೆಗೆದುಕೊಂಡು ಮನೆಯಲ್ಲಿದ್ದರು. ವೈಯಕ್ತಿಕ ಕಾರಣಗಳಿಂದ ಮನನೊಂದು ಈ ಕೃತ್ಯಕ್ಕೆ ಶರಣಾದರೆಂದು ದೂರಲಾಗಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.