ಅಪರಾಧ

ಪೊಲೀಸ್ ಠಾಣೆ ಬಳಿ ಆರೋಪಿಯ ಬರ್ಬರ ಹತ್ಯೆ!

GL

ಈ ಸುದ್ದಿಯನ್ನು ಶೇರ್ ಮಾಡಿ

ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯನ್ನು ಪೊಲೀಸ್ ಠಾಣೆ ಬಳಿಯೇ ದುಷ್ಕರ್ಮಿಗಳು ಕೊಚ್ಚಿ ಕೊಲೆ(Murder) ಮಾಡಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.

maithri

ಮೃತ ಆರೋಪಿಯನ್ನು ಮದನ್ ಅಲಿಯಾಸ್ ಅಪ್ಪುಲು ಎಂದು ಗುರುತಿಸಲಾಗಿದೆ. ತೂತುಕುಡಿ ಮೂಲದವನಾಗಿದ್ದು, ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಆತ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿದ್ದ.

ಬೆಳಗ್ಗೆ 10 ಗಂಟೆ ವೇಳೆಗೆ ತಮ್ಮ ಪತ್ನಿ ಜತೆಗೆ ಪೊಲೀಸ್​ ಸ್ಟೇಷನ್​ಗೆ ಬಂದಿದ್ದ, ನಿತ್ಯವೂ ಠಾಣೆಗೆ ಬಂದು ಸಹಿಹಾಕುವ ನಿಯಮವಿದೆ. ಅಲ್ಲಿಂದ ಊಟ ಮಾಡಲೆಂದು ಹೋಟೆಲ್​ಗೆ ಹೋಗಿದ್ದ. ಹೋಟೆಲ್​​ನಲ್ಲಿ ಕುಳಿತಿದ್ದಾಗ ಮೂವರು ಅಪಚರಿತರುಇದ್ದಕ್ಕಿದ್ದಂತೆ ಅವರನ್ನು ಸುತ್ತುವರೆದು ಹರಿತವಾದ ಆಯುಧಗಳಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಹಸ್ತಂಪಟ್ಟಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮದನ್ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆಂದು ಸೇಲಂನ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಪ್ರಾಥಮಿಕ ತನಿಖೆ ನಡೆಯುತ್ತಿದೆ. ಆರು ಸದಸ್ಯರ ಗ್ಯಾಂಗ್ ಈ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ದಾಳಿಕೋರರನ್ನು ಗುರುತಿಸಲು ಮತ್ತು ಬಂಧಿಸಲು ಸಂಪೂರ್ಣ ತನಿಖೆ ಆರಂಭಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೆಕ್ಕಾಗೆ ಹೋಗಲು ಹಣ ನೀಡಲಿಲ್ಲವೆಂದು ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಿಂದ ಕಳ್ಳತನ: 1 ಕೋಟಿ ರೂ. ಚಿನ್ನ ಕಳವುಗೈದ ಇಬ್ಬರ ಸೆರೆ!!

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಕಳವು…

1 of 109