tamanvi
ಅಪರಾಧ

ಕಾಮಿಡಿ ಕಿಲಾಡಿ ಖ್ಯಾತಿಯ ಚಂದ್ರಶೇಖ‌ರ್ ಸಿದ್ದಿ ನೇಣು ಬಿಗಿದುಕೊಂಡು ಆತ್ಮಹತ್ಯೆ !!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕಾಮಿಡಿ ಕಿಲಾಡಿ ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ಖಿನ್ನತೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

maithri

ಜೀ ಕನ್ನಡದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖ‌ರ್ ಸಿದ್ದಿ ಯಲ್ಲಾಪುರದ ಕಟ್ಟಿಗೆ ಗ್ರಾಮದ ಸಮೀಪದ ಅರಣ್ಯದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಅವರು ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ. ನಿನ್ನೆ ಮಗನಿಗೆ ನಾನಿನ್ನು ಬರುವುದಿಲ್ಲ ಮಗನೇ ಎಂದು ಹೇಳಿದವನು ಕಾಡಿನಲ್ಲಿ ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗದ ಯುವಕ, ಈ ಹಿಂದೆ ಝೀ ಕನ್ನಡದ ಕಾಮಡಿ ಕಿಲಾಡಿಗಳು ಎಂಬ ರಿಯಾಲಿಟಿ ಶೋ ಮೂಲಕ ರಾಜ್ಯಕ್ಕೆ ಪರಿಚಯವಾಗಿದ್ದರು. ನಿನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಈತ ಉತ್ತಮ ಯೋಗಪಟು ಕೂಡ. ಅವರು ಕೆಲ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಆದರೆ, ಹಾಸ್ಯತ್ಮಕ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಜನಮನ ಗೆದ್ದರೂ, ಅವರು ಜೀವನದಲ್ಲಿ ಆರ್ಥಿಕವಾಗಿ ಸ್ಥಿರತೆ ಕಂಡಿರಲಿಲ್ಲ.

ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆಪ್ತರು ಚಂದ್ರಶೇಖ‌ರ್ ಸಿದ್ಧಿ ಅಗಲಿಕೆಗೆ ಕಂಬನಿ ಮಿಡಿಯುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117