ಪುತ್ತೂರು:ಡಿವೈಎಸ್ಪಿ ಪುತ್ತೂರು ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಕೌಶಿಕ್ ರವರ ನೇತೃತ್ವದಲ್ಲಿ ರಚಿಸಿದ ವಿಶೇಷ ತಂಡವು ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರರಾಜ್ಯ ಅಪರಾಧಿ ಇಲಿಯಾಸ್ ಪಿ.ಎ. , ತ್ರಿಶೂರ್ ಜಿಲ್ಲೆಯ ವಿಯ್ಯುರು ಮೂಲದವನನ್ನು ಬಂಧಿಸಿ ಮಾನ್ಯ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಸಿಬ್ಬಂದಿಗಳಾದ ಹೆಚ್.ಸಿ. 685 ಪ್ರಶಾಂತ್ ರೈ, ಹೆಚ್.ಸಿ. 1028 ಗಣೇಶ್, ಸಿಪಿಸಿ 1944 ಮ್ಯಾಥ್ಯ ವರ್ಗೀಸ್, ಸಿಪಿಸಿ 2283 ಶ್ರೀಶೈಲ ಎಂ.ಕೆ. ಬಂಧನ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇಲಿಯಾಸ್ ಪಿ.ಎ. ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು, ಕೇರಳದ ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.